ಸಿದ್ಧಗಂಗಾ ಶ್ರೀ ಚೇತರಿಕೆಗೆ ವಿಶೇಷ ಪ್ರಾರ್ಥನೆ


Team Udayavani, Jan 19, 2019, 7:28 AM IST

bell-1.jpg

ಹೊಸಪೇಟೆ: ತುಮಕೂರು ಸಿದ್ಧಗಂಗಾ ಮಠದ ಸಿದ್ಧಗಂಗಾ ಮಹಾಸ್ವಾಮೀಜಿಯವರಿಗೆ ಈಗಾಗಲೇ ಭಾರತ ರತ್ನ ಗೌರವ ಸಲ್ಲಬೇಕಿತ್ತು. ಆದರೆ, ಕೇಂದ್ರ ಸರ್ಕಾರ ವಿಳಂಬ ಮಾಡಿದೆ. ಇನ್ನಾದರೂ ಶ್ರೀಗಳಿಗೆ ಭಾರತ ರತ್ನ ನೀಡಬಹುದು ಎಂಬ ಭರವಸೆ ನನಗಿದೆ ಎಂದು ಹೊಸಪೇಟೆ ಶ್ರೀಕೊಟ್ಟೂರುಸ್ವಾಮಿ ಮಠದ ಜಗದ್ಗುರು ಡಾ| ಸಂಗನ ಬಸವ ಸ್ವಾಮೀಜಿ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಸಮಾಜಕ್ಕೆ ರತ್ನಪ್ರಾಯರು, ಕಳಸಪ್ರಿಯರು, ಮಹಾತಪಸ್ವಿ ಸಿದ್ಧಗಂಗಾ ಶ್ರೀಗಳ ವೈರಾಗ್ಯ ತ್ಯಾಗ, ಸಮಾಜ ಪ್ರೇಮವನ್ನ ಎಲ್ಲಾ ಸ್ವಾಮೀಜಿಗಳು ಅನುಸರಿಸಬೇಕಿದೆ. ಶ್ರೀಗಳಿಂದ ಎಲ್ಲಾ ಮಠ ಮಾನ್ಯಗಳಿಗೆ ಶಕ್ತಿ ಬಂದಿದೆ. ಶ್ರೀಗಳು ಇಚ್ಛಾಮರಣಿಗಳು. ಅವರಿಗೆ ಯಾವಾಗ ಇಷ್ಟವಾಗುತ್ತೆ ಅಂದು ಅವರು ಲಿಂಗೈಕ್ಯರಾಗ್ತಾರೆ. ನೂರು ವರ್ಷದ ನಂತರ ಯಾರಿಗೂ ಶಸ್ತ್ರ ಚಿಕಿತ್ಸೆ ಮಾಡಲು ಬರುವುದಿಲ್ಲ. ಶ್ರೀಗಳ ಆರೋಗ್ಯ ವಿಜ್ಞಾನಕ್ಕೆ ಒಂದು ಸವಾಲಾಗಿದೆ. ಚಿಕಿತ್ಸೆ ನೀಡುವ ವೈದ್ಯರಿಗೆ ಒಂದು ಆಶ್ಚರ್ಯವಾಗಿದೆ. ಮಹಾಸ್ವಾಮಿಗಳ ಆರೋಗ್ಯ ಸುಧಾರಣೆಯಾಗಬೇಕೆಂದು ನಾಡಿನ ಕೋಟ್ಯಂತರ ಭಕ್ತರು ಬೇಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದ ಶ್ರೀಗಳಿಗೆ ಎಷ್ಟು ನಮನ ಸಲ್ಲಿಸಿದರು ಸಾಲದು. 1930ರಿಂದ ಪ್ರಾರಂಭವಾದ ದಾಸೋಹದಲ್ಲಿ ಇಂದಿಗೂ ಪ್ರತಿದಿನ 8 ರಿಂದ 10 ಸಾವಿರ ಭಕ್ತರು ಪ್ರಸಾದ ತೆಗೆದುಕೊಳ್ಳುತ್ತಿದ್ದಾರೆ. ಅಂದಿನಿಂದ ಇಂದಿನವರೆಗೆ ಕೋಟ್ಯಂತರ ವಿದ್ಯಾರ್ಥಿಗಳಿಗೆ ಮತ್ತು ಭಕ್ತರಿಗೆ ದಾರಿ ತೋರಿಸಿದ್ದಾರೆ. ಸಿದ್ಧಗಂಗಾ ಶ್ರೀಗಳಿಗೂ, ಕೊಟ್ಟೂರುಸ್ವಾಮಿ, ಹಾಲಕೇರಿ ಮಠಕ್ಕೂ ಒಂದು ಆಧ್ಯಾತ್ಮ ಸಂಬಂಧವಿತ್ತು. ನಮ್ಮ ಮಠಗಳಿಗೆ ಶ್ರೀಗಳು ಆಗಮಿಸಿ ಆಶೀರ್ವಾದ ಮಾಡಿದ್ದರು.ಅವರ ಅಂತಃಕರಣ ನಮ್ಮ ಮೇಲೆ ದೊಡ್ಡದಾಗಿತ್ತು ಎಂದು ಸ್ಮರಿಸಿದರು.

• ಶ್ರೀಗಳ ಆರೋಗ್ಯ ವೃದ್ಧಿಗೆ ಸಿರುಗುಪ್ಪ ವಿದ್ಯಾರ್ಥಿನಿಯರಿಂದ ಪ್ರಾರ್ಥನೆ

• ಹಡಗಲಿ ಭಕ್ತರಿಂದ ಗೋಣಿ ಬಸವೇಶ್ವರನಿಗೆ ವಿಶೇಷ ಪೂಜೆ

• ಭಾರತ ರತ್ನ ನೀಡಲು ಜನಾಗ್ರಹ

ಡಾ| ಶಿವಕುಮಾರ ಶ್ರೀಗಳಿಗೆ ಭಾರತರತ್ನ ಕೊಡಿ
ಹಗರಿಬೊಮ್ಮನಹಳ್ಳಿ :
ತುಮಕೂರಿನ ಸಿದ್ಧಗಂಗಾ ಮಠದ ಡಾ| ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿ ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಸಂಘಟನೆಯ ಅಧ್ಯಕ್ಷ ಟಿ.ಮಹೇಂದ್ರ ಮಾತನಾಡಿ, ನಡೆದಾಡುವ ದೇವರು ಶತಾಯುಷಿ, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಯವರ ತ್ಯಾಗ, ಸೇವಾ ಮನೋಭಾವ ಪರಿಗಣಿಸಿ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು. ಶೈಕ್ಷಣಿಕ, ಧಾರ್ಮಿಕ ವಲಯದಲ್ಲಿ ಉನ್ನತ ಸಾಧನೆಗೈದು ಸಮಾಜಮುಖೀಯಾದ ಸ್ವಾಮೀಜಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರಧಾನಿಯವರು ಕೂಡಲೇ ಘೋಷಿಸಬೇಕು. ಪ್ರಧಾನಿಯವರು ಸ್ವಾಮೀಜಿಗೆ ಭಾರತ ರತ್ನ ನೀಡಿ ಕನ್ನಡಿಗರ ಮನ ಗೆಲ್ಲಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಉಪಾಧ್ಯಕ್ಷ ದೇವರಮನಿ ನೀಲಪ್ಪ, ವರಲಹಳ್ಳಿ ಶಿವಕುಮಾರ, ಕೆ.ಮಹೇಶ್‌, ಆನಂದೇವನಹಳ್ಳಿ ಪ್ರಭು ಇತರರಿದ್ದರು.

ಗೋಣಿಬಸವೇಶ್ವರಗೆ ವಿಶೇಷ ಪೂಜೆ
ಹೂವಿನಹಡಗಲಿ:
ನಡೆದಾಡುವ ದೇವರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯ ವೃದ್ಧಿಗಾಗಿ ಪಟ್ಟಣದ ಗೋಣಿಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಸ್ವಾಮೀಜಿಗಳ ಆಯುಷ್ಯ ವೃದ್ಧಿ ಹಾಗೂ ಕೇಂದ್ರ ಸರ್ಕಾರ ಭಾರತರತ್ನ ಪ್ರಶಸ್ತಿ ನೀಡಲೆಂದು ಪಂಚಾಮೃತ ಅಭಿಷೇಕ, ಬಿಲ್ವಾರ್ಚನೆ, ಶತನಾಮಾವಳಿ, ಮಹಾಮಂಗಳಾರತಿ ನಡೆಸಲಾಯಿತು. ದೇವಸ್ಥಾನ ಸಮಿತಿಯವರು, ಸಿದ್ಧಗಂಗಾ ಮಠದ ಹಳೆ ವಿದ್ಯಾರ್ಥಿಗಳು, ದೈವಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.