ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರಕ್ಕೆ ಸೌಲಭ್ಯ
Team Udayavani, Jan 28, 2019, 9:18 AM IST
ಸಂಡೂರು: ವಿಶ್ವವಿದ್ಯಾಲಯದ ಮುಖ್ಯಕೇಂದ್ರಕ್ಕಿಂತಲೂ ಉತ್ತಮ ಕೇಂದ್ರವಾಗಿ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರ ಅಭಿವೃದ್ಧಿ ಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಈ. ತುಕಾರಾಮ ಹೇಳಿದರು.
ತಾಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಹಳೆಯ ವಿದ್ಯಾರ್ಥಿಗಳ ಸ್ನೇಹಕೂಟ ಮತ್ತು ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾಲಯದಲ್ಲಿ ಅಭ್ಯಾಸ ಮಾಡಿದ ನಾವುಗಳು ವಿಶ್ವವಿದ್ಯಾಲಯ ನಮಗೆ ಶಿಕ್ಷಣ ಕೊಟ್ಟು ಉನ್ನತ ಸ್ಥಾನಕ್ಕೇರಿಸಿದೆ. ಆದರೆ ನಾವೇನು ವಿಶ್ವವಿದ್ಯಾಲಯಕ್ಕೆ ಕೊಟ್ಟಿದ್ದೇವೆ ಎನ್ನುವ ಅವಲೋಕನ ಮಾಡಿಕೊಂಡಾಗ ಅಭಿವೃದ್ಧಿ ಕಾಣಲು ಸಾಧ್ಯ ಎಂದರು.
ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಎಂಬಿಎ, ಇತರ ಕೋರ್ಸ್ಗಳನ್ನು ತರಲಾಗುವುದು. ಈಗಾಗಲೇ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿನಿಲಯ ಆರಂಭಿಸಲಾಗಿದೆ. ವಿದ್ಯಾರ್ಥಿನಿಯರ ವಸತಿನಿಲಯಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ. ಮುಂದಿನ ಹಂತದಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ಇಡೀ ಸ್ನಾತಕೋತ್ತರ ಕೇಂದ್ರವನ್ನು ನವೀಕರಣ ಮಾಡಲಾಗುವುದು ಎಂದು ತಿಳಿಸಿದರು.
ರಸ್ತೆ, ಬೀದಿ ದೀಪ, ಬಾಲಕಿಯರಿಗೆ ಶಿಕ್ಷಣ ಉತ್ತಮ ಗ್ರಂಥಾಲಯ, ಕಂಪ್ಯೂಟರ್ ತರಬೇತಿ, ಆಧುನಿಕವಾಗಿ ಸಿಗುವಂತಹ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು. ಸಂಡೂರು ತಾಲೂಕು ನಂಜುಂಡಪ್ಪ ವರದಿಯ ಪ್ರಕಾರ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿಯಿಂದ ಹೊರತಂದು 1ನೇ ಸ್ಥಾನಕ್ಕೆ ತರಲು ನಿರಂತರ ಶ್ರಮವಹಿಸಲಾಗುವುದು ಎಂದರು.
ಈಗಾಗಲೇ ತಾಲೂಕಿನಾದ್ಯಂತ 22 ಪ್ರೌಢಶಾಲೆಗಳು, 11 ವಸತಿ ಶಾಲೆಗಳು, ಐಟಿಐ ಕಾಲೇಜು, ಡಿಪ್ಲೋಮಾ ಕಾಲೇಜು, ಶಿಕ್ಷಣದಲ್ಲಿ ಪೂರ್ಣ ಶಿಕ್ಷಣ ನೀಡುವ ಎಲ್ಲ ವ್ಯವಸ್ಥೆ ಮಾಡಲಾಗಿದೆ. ತಾಲೂಕಿನ 426 ಕಿ.ಮೀ. ರಸ್ತೆ ಅಭಿವೃದ್ಧಿಯಾಗಿದ್ದು, ಕೇವಲ 80 ಕಿ.ಮೀ. ಬಾಕಿ ಇದ್ದು, ಅದನ್ನೂ ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದರು.
ನಿರ್ದೇಶಕ ಡಾ| ಗೋಪಾಲಕೃಷ್ಣ ಮಾತನಾಡಿ, ಮೂರು ಬಾರಿ ಶಾಸಕರಾಗಿ, ಸಚಿವರಾಗಿದ್ದರೂ ಸಹ ಇಂದಿಗೂ ಸಾಮಾನ್ಯ ವಿದ್ಯಾರ್ಥಿಯಂತೆ ಸೇವೆ ಸಲ್ಲಿಸುತ್ತಿದ್ದಾರೆ. ಕೇಂದ್ರದ ಅಭಿವೃದ್ಧಿಗೆ 15 ಕೋಟಿ ರೂ. ಅನುದಾನ ತಂದು ಈಗಾಗಲೇ ಅಭಿವೃದ್ಧಿ ಪಡಿಸಿದ್ದಾರೆ. ಪೂರ್ಣ ರಸ್ತೆ, ವಿದ್ಯುತ್ ಪೂರೈಕೆ, ಕುಡಿಯುವ ನೀರು, ಗ್ರಂಥಾಲಯ, ವಸತಿ ನಿಲಯಗಳು, ಜನರೇಟರ್ ವ್ಯವಸ್ಥೆ ಮಾಡಿ ಇಡೀ ಕೇಂದ್ರ ಅಧುನಿಕತೆಯತ್ತ ದಾಪುಗಾಲಿಡುವಂತೆ ಮಾಡಿದ್ದಾರೆ ಎಂದು ಹೇಳಿದರು.
ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ ವಿಭಾಗ) ಪ್ರೊ| ಸಿ.ಬಿ. ಹೊನ್ನುಸಿದ್ಧಾರ್ಥ ಮಾತನಾಡಿ,ಸಚಿವರು ಹೇಳಿದ ಮಾತನ್ನು ಪ್ರತಿಯೊಬ್ಬ ವಿದ್ಯಾರ್ಥಿ ಪಾಲಿಸಿದ್ದೇ ಆದಲ್ಲಿ ಶಿಕ್ಷಣ ಕ್ಷೇತ್ರ ಅಭಿವೃದ್ಧಿಯಾಗುತ್ತದೆ. ವಿಶ್ವವಿದ್ಯಾಲಯಕ್ಕೆ ನಮ್ಮ ಕೊಡುಗೆ ಏನು ಎನ್ನುವ ಮಾತು ಬಹು ಮುಖ್ಯ. ಅದು ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ ಎಂದರು.
ಕುಲಸಚಿವರಾದ ಬಿ.ಕೆ. ತುಳಸಿಮಾಲಾ, ನಿವೃತ್ತ ಪ್ರಾಧ್ಯಾಪಕರಾದ ಪ್ರೊ| ಆರ್. ಪುರುಷೋತ್ತಮ ರಡ್ಡಿ, ಎಂ.ವಿ. ರುದ್ರಮುನಿಯಪ್ಪ, ಗುಲ್ಬರ್ಗಾ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಪ್ರೊ| ಶಿವಾಜಿ ವಾಘ್ಮೋರೆ, ಗುಲ್ಬರ್ಗಾ ವಿವಿವಿ ದೈಹಿಕ ನಿದೇರ್ಶಕ ಮಲ್ಲಿಕಾರ್ಜುನ ಎಸ್. ಪಾಸೋಡಿ, ಎಸ್.ಜೆ. ಗೋಪಾಲಕೃಷ್ಣ, ಪುರಸಭೆ ಅಧ್ಯಕ್ಷ ಗಡಂಬ್ಲಿ ಚನ್ನಪ್ಪ, ಶಶಿಧರ್ ಭಾಣದ್, ಸಣ್ಣ ನಿಂಗಪ್ಪ ಡಿಜೆಎ ಮಂಜುನಾಥ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ