ಸದಸ್ಯೆ-ಅಧ್ಯಕ್ಷರ ಮಧ್ಯೆ ಮಾತಿನ ಚಕಮಕಿ


Team Udayavani, Jan 29, 2019, 8:10 AM IST

gul-6.jpg

ಕೂಡ್ಲಿಗಿ: ನನ್ನ ಮೇಲೆ ಹಣ ದುರುಪಯೋಗದ ಆರೋಪ ಮಾಡಿ ತಾಪಂನಿಂದ ಹೇಗೇ ನೋಟಿಸ್‌ ಕಳುಹಿಸಿದ್ದೀರಿ. ಹಣ ದುರುಪಯೋಗ ಸಾಬೀತು ಮಾಡುವವರೆಗೂ ಸಭೆ ನಡೆಯಲು ಬಿಡುವುದಿಲ್ಲ ಪ್ರತಿಭಟನೆ ಮಾಡುತ್ತೇನೆ ಎಂದು ತಾಪಂ ಅಧ್ಯಕ್ಷರ ವಿರುದ್ಧ ಸದಸ್ಯೆಂಯೋಬ್ಬರು ವಾಗ್ಧಾಳಿ ನಡೆಸಿದ ಪರಿ ಇದು. ಸೋಮವಾರ ನಡೆದ ತಾಪಂ ಸಭೆ ಗೊಂದಲ ಗೂಡಾಗಿ ಪರಿಣಮಿಸಿತು.

ತಾಪಂ ವಾಣಿಜ್ಯ ಮಳಿಗೆಗಳನ್ನು ತಾಲೂಕಿನ ಗುಂಡುಮುಣಗು ತಾಪಂ ಸದಸ್ಯೆ ಸರೋಜಾ ಅವರ ಪತಿ ಸೂರ್ಯ ಪಾಪಣ್ಣ ಬಾಡಿಗೆಗೆ ಪಡೆದಿದ್ದು, ವರ್ಷಗಳೇ ಕಳೆದರೂ ಬಾಡಿಗೆ ಹಣ ಪಾವತಿ ಯಾಕೆ ಮಾಡಿಲ್ಲ. ಈ ಬಗ್ಗೆ ಸೂಕ್ತ ವಿವರಣೆ ಕೊಡಿ ಎಂದು ತಾಪಂ ಅಧ್ಯಕ್ಷ ವೆಂಕಟೇಶ್‌ ನಾಯ್ಕ ಅವರ ಸೂಚನೆ ಮೇರೆಗೆ ತಾಪಂ ಇಒ ನೋಟಿಸ್‌ ಕಳುಹಿಸಿದ್ದಾರೆ. ಸೂರ್ಯಪಾಪಣ್ಣ ತಮ್ಮ ಪ್ರಭಾವ ಬಳಸಿ ರಾಮದುರ್ಗ ಕೆರೆಯ ಟೆಂಡರ್‌ ಕರೆಯದೇ ಪತ್ರಿಕಾ ಪ್ರಕಟಣೆ ನೀಡದೇ ಗ್ರಾಪಂ ಸಭೆಯಲ್ಲಿ ತೀರ್ಮಾನಿಸಿ, ಸರ್ಕಾರಿ ನಿಯಮ ಉಲ್ಲಂಘಿಸಿ ಕೆರೆಯ ವಿಲೇವಾರಿ ಹಕ್ಕನ್ನು ಪಡೆದಿದ್ದಾರೆ. ಈ ಎರಡು ಆರೋಪಗಳನ್ನು ತಾಪಂ ಅಧ್ಯಕ್ಷ ವೆಂಕಟೇಶನಾಯ್ಕ ಅವರು ಮಾಡಿದ್ದಾರೆ. ಅಲ್ಲದೇ ಗುಂಡುಮುಣಗು ತಾಪಂ ಸದಸ್ಯೆ ಸರೋಜಮ್ಮ ಅವರ ಕ್ಷೇತ್ರದಲ್ಲಿ 3 ವರ್ಷದ ಅವಧಿಯಲ್ಲಿ ಅಧಿಕಾರಿಗಳನ್ನು ಹೆದರಿಸಿ ಕಾಮಗಾರಿ ಮಾಡದೇ ಬಿಲ್‌ ಪಡೆದಿರುತ್ತಾರೆ. ಹೀಗಾಗಿ ತಾಪಂ ಅಧಿಕಾರಿಗಳು ತಾವೇ ಖುದ್ದಾಗಿ ರಾಮದುರ್ಗ ಹಾಗೂ ಗುಂಡುಮುಣುಗು ಕ್ಷೇತ್ರಗಳ ಕಾಮಗಾರಿಗಳನ್ನು ಪರಿಶೀಲಿಸಿ 10 ದಿನಗಳೊಳಗೆ ವರದಿ ನೀಡಬೇಕು. ಇಲ್ಲವಾದಲ್ಲಿ ಈ ವಿಷಯವನ್ನು ಜಿಪಂ ಸಭೆಯಲ್ಲಿ ಚರ್ಚಿಸುವೆ ಎಂದು ಇಒಗೆ ಡಿ. 11 ರಂದು ಲಿಖೀತವಾಗಿ ದೂರು ನೀಡಿದ್ದಾರೆ. ಇದರಂತೆ ಇಒ ಬಸಣ್ಣ ಅವರು ತಾಪಂ ಸದಸ್ಯೆ ಪತಿ ಸೂರ್ಯ ಪಾಪಣ್ಣ ಅವರಿಗೆ ಡಿ.12 ರಂದು ತಾಪಂ ಇಒ ಬಸಣ್ಣ ಅವರು ನೋಟಿಸ್‌ ನೀಡಿದ್ದಾರೆ. ಇದರಿಂದ ತಾಪಂ ಸದಸ್ಯೆ ಸರೋಜಾ ಪಾಪಣ್ಣ ಅವರು ಸೋಮವಾರ ತಾಪಂ ಸಾಮಾನ್ಯ ಸಭೆ ನಡೆಯುತ್ತಿದ್ದಂತೆ ಅಧ್ಯಕ್ಷರ ವಿರುದ್ಧ ವಾಗ್ಧಾಳಿ ನಡೆಸಿದರು.

ಇದರಿಂದ ಆಕ್ರೋಶಗೊಂಡ ಅಧ್ಯಕ್ಷ ವೆಂಕಟೇಶ್‌ ನಾಯ್ಕ ಮಾತನಾಡಿ, ನಿಮ್ಮ ಪತಿ ಮಳಿಗೆ ಬಾಡಿಗೆ ಪಡೆದು ಯಾಕೆ ಬಾಡಿಗೆ ಕಟ್ಟಿಲ್ಲ. ಇದಕ್ಕಾಗಿ ನೋಟಿಸ್‌ ನೀಡಿರುವುದು ನಿಜ. ಬಾಡಿಗೆ ಕಟ್ಟಿ ಎಂದು ತಿಳಿಸಿದರು.

ನೀವು ಯಾವ ಆಧಾರದ ಮೇಲೆ ಅನುಮೋದನೆ ಮಾಡಿದ್ದೀರಿ ಎಂದು ತಾಪಂ ಸದಸ್ಯೆ ಸರೋಜಾ ಅಧ್ಯಕ್ಷರನ್ನು ಪ್ರಶ್ನಿಸಿದರು. ಬಾಡಿಗೆ ಬೇಕು ಎಂದು ಅರ್ಜಿ ನೀಡದೇ ಬಾಡಿಗೆ ನೀಡಿರುವುದು ತಪ್ಪಲ್ಲವೇ. ನೀವು ಸರ್ಕಾರಿ ನಿಯಮ ಉಲ್ಲಂಘಿಸಿದಂತಲ್ಲವೇ ಎಂದು ಮರುಪ್ರಶ್ನೆ ಮಾಡಿದರು.

ಇಒ ಬಸಣ್ಣ ಕೂಡ ಈ ಪ್ರಶ್ನೆಗೆ ಉತ್ತರ ನೀಡದೇ ಸುಮ್ಮನಾದರು. ನನ್ನ ಮೇಲೆ ವಿನಾಕಾರಣ ಅಧಿಕಾರಿಗಳನ್ನು ಬೆದರಿಸಿ ಕಾಮಗಾರಿ ಮಾಡದೆ ಬಿಲ್‌ ಡ್ರಾ ಮಾಡಿಕೊಂಡಿದ್ದಾರೆ ಎಂದು ತಾಪಂ ಅಧ್ಯಕ್ಷರು ಆರೋಪಿಸಿದ್ದಾರೆ. ಅದನ್ನು ಸಾಬೀತು ಮಾಡುವವರೆಗೂ ಸಭೆ ನಡೆಯಲು ಬಿಡುವುದಿಲ್ಲ ಎಂದು ಸಭೆ ಮಧ್ಯದಲ್ಲಿ ಬಂದು ಸದಸ್ಯೆ ಕುಳಿತರು.

ತಕ್ಷಣವೇ ತಾಪಂ ಅಧ್ಯಕ್ಷ ವೆಂಕಟೇಶ್‌ ನಾಯ್ಕ ಅವರು ಪೊಲೀಸರ ಕರೆಯಿಸಿ ನಿಮ್ಮನ್ನು ಹೊರಗೆ ಕಳುಹಿಸಿ ಸಭೆ ಮಾಡ್ತೀನಿ ಎಂದು ಠಾಣೆಗೆ ಕರೆ ಮಾಡಿ ಇಬ್ಬರು ಮಹಿಳಾ ಪೊಲೀಸರನ್ನು ಕರೆಯಿಸಿದರು. ಪೊಲೀಸರು ಬರುವಷ್ಟರಲ್ಲಿ ತಾಪಂ ಸದಸ್ಯ ಹೂಡೇಂ ಪಾಪಾನಾಯಕ ಅವರು ಅಧ್ಯಕ್ಷರನ್ನು ಸಮಾಧಾನಪಡಿಸಿದರು. ನಂತರ ಸರೋಜಾ ಪಾಪಣ್ಣ ಸಭೆಯಲ್ಲಿ ಕುಳಿತರು.

ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹತ್ತಾರು ಸಮಸ್ಯೆಗಳನ್ನು ಚರ್ಚಿಸಲಾಯಿತು. ತಾಪಂ ಅಧ್ಯಕ್ಷ ವೆಂಕಟೇಶ್‌ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಅಮಲಾಪುರ ಬಸವರಾಜ, ತಾಪಂ ಇಒ ಬಸಣ್ಣ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಪಿಡಿಒಗಳು ತಾಪಂ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.