ಕೇಂದ್ರದ್ದು ಮೋದಿ ಬಚಾವೋ ಬಜೆಟ್
Team Udayavani, Feb 3, 2019, 7:08 AM IST
ಹರಪನಹಳ್ಳಿ: ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಮೋದಿ ಬಚಾವೋ ಬಜೆಟ್ ಮಂಡನೆ ಮಾಡಲಾಗಿದೆ ಎಂದು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಟೀಕಿಸಿದರು.
ತಾಲೂಕಿನ ಕಂಚಿಕೆರೆ ಗ್ರಾಮದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಅಂಗ ಸಂಘಟನೆಗಳು ಶನಿವಾರ ಆಯೋಜಿಸಿದ್ದ ಗ್ರಾಮೀಣ ಪ್ರದೇಶದ ಜನ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕಳೆದ 5 ವರ್ಷದ ಅಧಿಕಾರದಲ್ಲಿ ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ ಯಾವುದೇ ಯೋಜನೆ ಅನುಷ್ಠಾನ ಮಾಡಿಲ್ಲ. ಚುನಾವಣೆ ಸಮೀಪಿಸುತ್ತಿರುವುದರಿಂದ ಇದೀಗ ರೈತರಿಗೆ ವಾರ್ಷಿಕ 6000 ರೂ. ನೀಡುವುದಾಗಿ ಹೇಳಿ ಮೂಗಿಗೆ ತುಪ್ಪ ಸವರುವ ಕೆಲಸಕ್ಕೆ ಕೈ ಹಾಕಿದ್ದಾರೆ. ದಿನಕ್ಕೆ 16 ರೂ. ರೈತರ ಯಾವ ಉಪಯೋಗಕ್ಕೆ ಬರುತ್ತದೆ ಎಂಬುವುದು ಕೇಂದ್ರ ಸರ್ಕಾರವೇ ಉತ್ತರಿಸಬೇಕು ಎಂದರು.
ಕಾರ್ಯಗಾರ ಉದ್ಘಾಟಿಸಿದ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹಿರಿಯ ವಕೀಲ ನಾಗಭೂಷಣ್ರಾವ್ ಮಾತನಾಡಿ, ಸಾಮಾಜಿಕ ಹಿಂದುಳಿದ ವರ್ಗದ ಜನರು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರನ್ನು ಒಗ್ಗೂಡಿಸಿಕೊಂಡು ಗ್ರಾಪಂ ಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಿ ಮುಂಬರುವ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಬೇಕು. ಇಂದಿನ ಜನಪ್ರತಿನಿಧಿಗಳು ಚುನಾವಣಾ ಸಂದರ್ಭದಲ್ಲಿ ಹಣ, ಹೆಂಡ ಹಂಚಿ ಗೆದ್ದ ನಂತರ ಹಣಗಳಿಸುವ ಹೆಬ್ಬಯಕೆಯಿಂದ ಭ್ರಷ್ಟಾಚಾರದ ದಾರಿ ಹಿಡಿದಿದ್ದಾರೆ. ಅಂತಹವರ ವಿರುದ್ಧ ಹೋರಾಟದ ಜೊತೆಗೆ ಆಡಳಿತ ನಡೆಸುವ ಸಮರ್ಥ ನಾಯಕರಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡುವ ಅನಿವಾರ್ಯತೆ ಇದೆ ಎಂದರು. ಕಮ್ಯುನಿಸ್ಟ್ ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ವಿ.ಲೋಕೇಶ್ ಮಾತನಾಡಿ, ಗ್ರಾಮೀಣ ಮಟ್ಟದಿಂದಲೇ ಜನ ಜಾಗೃತರಾದರೆ ಸಮೃದ್ಧ ನಾಡು ಕಟ್ಟಲು ಸಾಧ್ಯ. ಹಣದಿಂದ ಬದಲಾಯಿಸಲು ಒಪ್ಪದವರನ್ನು ಸಂಘಟಿತರಾಗಿ ಬದಲಾಯಿಸಲು ಒಗ್ಗೂಡಿ ಶ್ರಮಿಸಬೇಕು. ರಾಜಕೀಯ ವ್ಯವಸ್ಥೆಯು ಸ್ವಾರ್ಥತೆಗೆ ಸೀಮಿತವಾಗಿದೆ. ಕುಟುಂಬ ರಾಜಕಾರಣದಿಂದ ಮುಕ್ತಿ ಪಡೆದು ನಿತ್ಯ ಚಾಲನಾ ಸ್ಥಿತಿಯಲ್ಲಿರುವ ರೈತರಿಗೆ, ಕಾರ್ಮಿಕರಿಗೆ ಅಧಿಕಾರ ಸಿಗುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಗುಡಿಹಳ್ಳಿ ಹಾಲೇಶ್, ಸಹ ಕಾರ್ಯದರ್ಶಿ ಎಚ್.ಎಂ.ಸಂತೋಷ್, ರಮೇಶನಾಯ್ಕ, ಬಿಸಿಯೂಟ ಕಾರ್ಯಕರ್ತೆಯರ ತಾಲೂಕು ಸಂಚಾಲಕಿ ವಿಶಾಲಮ್ಮ, ಎಐಎಸ್ಎಫ್ ಜಿಲ್ಲಾ ಅಧ್ಯಕ್ಷ ಮಾದಿಹಳ್ಳಿ ಮಂಜುನಾಥ್, ಎಸ್.ಸುರೇಶ್, ನಿವೃತ್ತ ಶಿಕ್ಷಕ ಬಸಪ್ಪ, ಮುಖಂಡ ಗುರುಮೂರ್ತಿ, ಮಹಬೂಬ್ಬಾಷಾ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್
Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ