ಕೊಟ್ಟೂರು ರಥೋತ್ಸವ: ಸಕಲ ವ್ಯವಸ್ಥೆಗೆ ಸೂಚನೆ


Team Udayavani, Feb 11, 2019, 8:20 AM IST

gul-6.jpg

ಕೊಟ್ಟೂರು: ಶ್ರೀ ಗುರುಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಫೆ. 28ರಂದು ವಿಜೃಂಭಣೆಯಿಂದ ನಡೆಯುವ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಕೊಟ್ಟೂರಿಗೆ ಆಗಮಿಸಲಿದ್ದು, ಅವರ ಅನುಕೂಲಕ್ಕಾಗಿ ಸಕಲ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಶಾಸಕ ಎಸ್‌. ಭೀಮಾನಾಯ್ಕ ಹೇಳಿದರು.

ಶ್ರೀಗುರುಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ನಿಮಿತ್ತ ಕೊಟ್ಟೂರೇಶ್ವರ ದೇವಸ್ಥಾನದ ಎದುರುಗಡೆ ಮುಜರಾಯಿ ಧಾರ್ಮಿಕ ದತ್ತಿ ಇಲಾಖೆವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಫೆಬ್ರವರಿ 28ರಂದು ನಡೆಯುವ ಶ್ರೀಗುರುಕೊಟ್ಟೂರೇಶ್ವರ ಸ್ವಾಮಿ ಮಹಾರಥೋತ್ಸವಕ್ಕೆ ಅತೀ ಹೆಚ್ಚು ಭಕ್ತರು ಆಗಮಿಸುವುದರಿಂದ ಪೊಲೀಸ್‌ ಇಲಾಖೆ ಸೂಕ್ತ ಭದ್ರತೆ ಕೈಗೊಳ್ಳಬೇಕು ಎಂದು ಸೂಚಿಸಿದರು.

ಆರೋಗ್ಯ ಮತ್ತು ತುರ್ತು ಚಿಕಿತ್ಸೆಗಾಗಿ ವೈದ್ಯಕೀಯ ಸಲಕರಣೆಗಳನ್ನು ಒಳಗೊಂಡ ಆಂಬ್ಯುಲೆನ್ಸ್‌ ವಾಹನ ವ್ಯವಸ್ಥೆ ಹಾಗೂ ಬಿಸಿಲಲ್ಲಿ ಬಳಲಿ ಬಂದ ಪಾದಯಾತ್ರಿ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಸೌಲಭ್ಯಗಳನ್ನು ಒದಗಿಸಿಕೊಡಲು ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು ಎಂದರು.

ರಥೋತ್ಸವಕ್ಕೆ ಆಗಮಿಸುವ ಸುಮಾರು 5-6 ಲಕ್ಷ ಭಕ್ತರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಿಕೊಡಬೇಕೆಂಬ ಕಾರಣಕ್ಕಾಗಿ ಧಾರ್ಮಿಕ ದತ್ತಿ ಇಲಾಖೆ ಸ್ಥಳೀಯ ಆಡಳಿತ ಪಟ್ಟಣ ಪಂಚಾಯಿತಿ ಸಹಕಾರ ಪಡೆದು ಪಟ್ಟಣದಲ್ಲಿ 2 ದೊಡ್ಡ ಮಟ್ಟದ ತಾತ್ಕಾಲಿಕ ಆರ್‌ಒ ಘಟಕಗಳನ್ನು ಸ್ಥಾಪಿಸಬೇಕು. ಕೊಟ್ಟೂರಿಗೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಈ ಘಟಕಗಳನ್ನು ಕೂಡಲೇ ತೆರೆಯಲು ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪಪಂ ಮುಖ್ಯಾಧಿಕಾರಿ ಎಚ್.ಎಫ್‌. ಬಿದರಿ ಮಾತನಾಡಿ, ಜಾತ್ರೋತ್ಸವದ ಅವಧಿಯಲ್ಲಿ ಪಟ್ಟಣದ ಜನತೆಗೆ ಯಾವುದೇ ಹಂತದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಪಟ್ಟಣ ಪಂಚಾಯತ್‌ ಆಡಳಿತ ಕ್ರಮ ಕೈಗೊಂಡಿದೆ. ಜೆಸ್ಕಾಂ ಇಲಾಖೆ ಸಮರ್ಪಕವಾದ ವಿದ್ಯುತ್‌ ನೀಡಿದ್ದಲ್ಲಿ ಪಟ್ಟಣದ ಜನತೆಗೆ ತೊಂದರೆಯಾಗದಂತೆ ನೀರು ಪೂರೈಸಲಾಗುವುದು ಎಂದರು.

ಜಾತ್ರಾ ಮಹೋತ್ಸವದಲ್ಲಿ ಯಾವುದೇ ಬಗೆಯ ವಿದ್ಯುತ್‌ ಅವಘಡ ಮತ್ತು ಭಕ್ತರಿಗೆ ತಕ್ಷಣದ ಚಿಕಿತ್ಸೆ ಒದಗಿಸಲು ಜೆಸ್ಕಾಂ ಹೆಲ್ಪ್ಲೈನ್‌ ಸಂಪರ್ಕ ಕಲ್ಪಿಸಬೇಕು. ಪಟ್ಟಣದ ನಾಲ್ಕೈದು ಕಡೆ ಉಪ ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು ಎಂದು ಜೆಸ್ಕಾಂ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಆರೋಗ್ಯ ಇಲಾಖೆ ಹೊರತುಪಡಿಸಿ ಖಾಸಗಿಯವರು ರಕ್ತದಾನ ಶಿಬಿರ ನಡೆಸಕೂಡದು. ಈ ಸಂಬಂಧ ತಾಲೂಕು ಆರೋಗ್ಯ ಅಧಿಕಾರಿ ಕ್ರಮ ಕೈಗೊಳ್ಳಬೇಕು. ಕೊಟ್ಟೂರೇಶ್ವರ ಸ್ವಾಮಿಯ ರಥದಲ್ಲಿ ಸ್ವಾಮಿಯೊಂದಿಗೆ ಕೇವಲ 12 ಪೂಜಾಕರ್ತರು ರಥದಲ್ಲಿ ಆಸೀನರಾಗಬೇಕು. 12ಕ್ಕಿಂತ ಒಬ್ಬರು ಹೆಚ್ಚಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಹಶೀಲ್ದಾರ್‌ ಮಂಜುನಾಥ ಎಚ್ಚರಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ಜಾತ್ರಾ ಮಹೋತ್ಸವ ಯಶಸ್ವಿಯಾಗಿ ಪೂರ್ಣಗೊಳ್ಳಲು ಅಧಿಕಾರಿಗಳು ತಮಗೆ ನಿರ್ವಹಿಸಿದ ಕಾರ್ಯವನ್ನು ನಿರ್ಲಕ್ಷ್ಯ ವಹಿಸದೆ ಶೀಘ್ರವಾಗಿ ಮಾಡಬೇಕು ಎಂದು ಸೂಚಿಸಿದರು.

ಹೊಸಪೇಟೆ ಸಹಾಯಕ ಆಯುಕ್ತ ಲೋಕೇಶ, ಧ‌ರ್ಮಕರ್ತ ಸಿ.ಎಚ್.ಎಂ. ಗಂಗಾಧರ, ಕ್ರಿಯಾಮೂರ್ತಿ ಶಂಕರಸ್ವಾಮೀಜಿ, ಎಂ.ಎಂ.ಜೆ. ಹರ್ಷವರ್ಧನ್‌, ಜಿಪಂ ಸದಸ್ಯ ಉಜ್ಜಯಿನಿ, ಡಿವೈಎಸ್‌ಪಿ ಬಸವೇಶ್ವರ, ಸಿಪಿಐ ಎಂ. ರವೀಂದ್ರ ಕುರಬಗಟ್ಟಿ, ಪಿಎಸ್‌ಐ ತಿಮ್ಮಣ್ಣ, ಪಿ.ಎಚ್. ದೊಡ್ಡರಾಮಣ್ಣ, ದ್ವಾರಕೀಶ್‌, ಬೂದಿ ಶಿವಕುಮಾರ್‌, ಪಪಂ ನೂತನ ಸದಸ್ಯರು ಇತರರು ಇದ್ದರು. ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಎಸ್‌.ಪಿ.ಬಿ. ಮಹೇಶ್‌ ಸ್ವಾಗತಿಸಿದರು. ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಚ್. ಪ್ರಕಾಶ್‌ರಾವ್‌ ವಂದಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.