5ನೇ ಸೆಮಿಸ್ಟರ್‌ ಪರೀಕ್ಷೆಬರೆದರೂ ಫಲಿತಾಂಶದಲ್ಲಿ ಗೈರು!


Team Udayavani, Feb 12, 2019, 8:55 AM IST

bell-3.jpg

ಕೊಪ್ಪಳ: ಬಳ್ಳಾರಿ ವಿಶ್ವವಿದ್ಯಾಲಯವು ಒಂದಿಲ್ಲೊಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರುತ್ತದೆ. ವಿದ್ಯಾರ್ಥಿಗಳು ಬಿ.ಎ. 5ನೇ ಸೆಮಿಸ್ಟರ್‌ ಪರೀಕ್ಷೆ ಬರೆದರೂ ಸಹಿತ ಫಲಿತಾಂಶದಲ್ಲಿ ಗೈರೆಂದು ನಮೂದಿಸಿ ಮತ್ತೂಂದು ಎಡವಟ್ಟು ಮಾಡಿಕೊಂಡಿದೆ. ಹೀಗಾಗಿ ವಿವಿಯ ಎಡವಟ್ಟುಗಳ ಬಗ್ಗೆ ಶಿಕ್ಷಣ ತಜ್ಞರು, ಹಲವು ಸಂಘಟನೆಗಳು ಸಿಡಿಮಿಡಿಗೊಳ್ಳುತ್ತಿದೆ.

ಹೌದು. ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರರಾವ್‌ ಸರ್ಕಾರಿ ಮಹಾವಿದ್ಯಾಲಯದಲ್ಲಿ 2018ರಲ್ಲಿ ಹೊನ್ನೂರಪ್ಪ, ವಿರೇಶ ಎಂಬ ವಿದ್ಯಾರ್ಥಿಗಳ ಬಿ.ಎ. 5ನೇ ಸೆಮಿಸ್ಟರ್‌ನ ಆರೂ ಪರೀಕ್ಷೆ ಬರೆದರೂ ಒಂದು ವಿಷಯದಲ್ಲಿ ವಿದ್ಯಾರ್ಥಿ ಗೈರು ಹಾಜರಾಗಿದ್ದಾನೆ ಎಂದು ಫಲಿತಾಂಶದಲ್ಲಿ ತೋರಿಸಲಾಗಿದೆ. ಇದನ್ನು ನೋಡಿರುವ ವಿದ್ಯಾರ್ಥಿಗಳು ದಿಗ್ಭ್ರಾಂತರಾಗಿದ್ದು, ದಿಕ್ಕು ಕಾಣದೇ ಅವರಿವರ ಬಳಿ ಪರದಾಡುವಂತ ಸ್ಥಿತಿ ಬಂದಿದೆ.

ವಿವಿ ನಡೆಸಿದ ಪರೀಕ್ಷೆಗೆ ಹಾಜರಾಗಿರುವ ಈ ಇಬ್ಬರು ವಿದ್ಯಾರ್ಥಿಗಳು ಉತ್ತಮವಾಗಿಯೇ ಪರೀಕ್ಷೆ ಬರೆದಿದ್ದು, ರಾಜ್ಯಶಾಸ್ತ್ರ ವಿಷಯದಲ್ಲಿ ಗೈರು ಹಾಜರಾಗಿದ್ದಾರೆಂದು ವಿವಿ ವೆಬ್‌ಸೈಟ್‌ನಲ್ಲಿ ತೋರಿಸಲಾಗುತ್ತಿದೆ. ಫಲಿತಾಂಶದಲ್ಲಿನ ಗೊಂದಲ ಬಗೆಹರಿಸಿಕೊಳ್ಳಲು ವಿದ್ಯಾರ್ಥಿಗಳು ಸಂಬಂಧಿಸಿದ ಕಾಲೇಜು ಉಪನ್ಯಾಸಕರು ಸೇರಿದಂತೆ ಪ್ರಾಚಾರ್ಯರನ್ನು ಸಂಪರ್ಕಿಸಿದ್ದಾರೆ. ಆದರೆ ಅವರು ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ. ನೀವೂ ವಿಶ್ವವಿದ್ಯಾಲಯಕ್ಕೆ ಬರಬೇಕು. ಅಲ್ಲಿಯೇ ಈ ತೊಂದರೆ ಬಗೆಹರಿಯಲಿದೆ. ನಮ್ಮಿಂದ ಏನೂ ತಪ್ಪಾಗಿಲ್ಲ ಎನ್ನುವ ಮಾತನ್ನಾಡಿ ವಿದ್ಯಾರ್ಥಿಗಳನ್ನು ಸುಮ್ಮನಿರಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳಿಗೆ ಪದವಿ ಹಂತದಲ್ಲಿ ವಿಷಯವಾರು ನೀಡುವ ಆಂತರಿಕ ಅಂಕಗಳಲ್ಲಿ ಈ ಎಡವಟ್ಟು ನಡೆದಿದೆ ಎನ್ನುವ ಮಾತು ಕೇಳಿದರೂ ಸಹಿತ ಯಾರೋ ಮಾಡಿದ ತಪ್ಪಿಗೆ ವಿದ್ಯಾರ್ಥಿಗಳು ಭವಿಷ್ಯ ಹಾಳಾಗುತ್ತಿದೆ ಎಂದು ಸಂಘಟನೆಗಳು ವಿವಿ ಕಾರ್ಯ ವೈಖರಿಗೆ ಆಕ್ರೊಶ ವ್ಯಕ್ತಪಡಿಸಿವೆ.

25ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಮಸ್ಯೆ:
ಕೇವಲ ಕೊಲ್ಲಿ ನಾಗೇಶ್ವರರಾವ್‌ ಮಹಾವಿದ್ಯಾಲಯದ ವಿದ್ಯಾರ್ಥಿಗಳದ್ದಷ್ಟೇ ಅಲ್ಲ. ವಿವಿ ವ್ಯಾಪ್ತಿಯಲ್ಲಿನ ಹಲವು ಪದವಿ ಕಾಲೇಜುಗಳಲ್ಲಿಯೂ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದಲ್ಲಿ ಗೈರು ಎಂದು ನಮೂದು ಮಾಡಿ ಪ್ರಕಟಿಸಲಾಗಿದೆ ಎನ್ನುವ ಮಾತು ಕೇಳಿ ಬಂದಿವೆ. ಸದ್ಯಕ್ಕೆ ಕೆಲವೇ ವಿದ್ಯಾರ್ಥಿಗಳ ತೊಂದರೆ ಮಾಧ್ಯಮದ ಮುಂದೆ ಬೆಳಕಿಗೆ ಬಂದಿದೆ. ಇದರ ಜೊತೆಗೆ ಬಿ.ಎಸ್‌ಸಿ ವಿಭಾಗದಲ್ಲಿ ಪರೀಕ್ಷಾ ಮೌಲ್ಯಮಾಪನ ಸರಿಯಾಗಿಲ್ಲ ಎನ್ನುವ ಆಪಾದನೆ ಕೇಳಿ ಬಂದಿದೆ.

ಒಟ್ಟಿನಲ್ಲಿ ಬಳ್ಳಾರಿ ವಿಶ್ವವಿದ್ಯಾಲಯವು ಈ ಬಾರಿ ಪರೀಕ್ಷಾ ಫಲಿತಾಂಶದಲ್ಲಿ ಗೈರು ಎಂದು ನಮೂದಿಸಿ ಫಲಿತಾಂಶ ಪ್ರಕಟಿಸಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಕೂಲಂಕುಶವಾಗಿ ಪರಿಶೀಲನೆ ನಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಅಗತ್ಯವಿದೆ.

ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದಲ್ಲಿ ಗೈರು ಎಂದು ನಮೂದಾಗಿರುವ ಕುರಿತು ನನ್ನ ಗಮನಕ್ಕೆ ಬಂದಿದೆ. ನಾವು ವಿವಿ ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಕೇವಲ ನಮ್ಮ ಕಾಲೇಜಿನಲ್ಲಷ್ಟೇ ಈ ಸಮಸ್ಯೆಯಾಗಿಲ್ಲ. ಬೇರೆ ಕಾಲೇಜಿನಲ್ಲೂ ಇದೇ ರೀತಿ ಸಮಸ್ಯೆಯಾಗಿದೆ. ನಾವು ಶೀಘ್ರ ವಿಶ್ವವಿದ್ಯಾಲಯಕ್ಕೆ ತೆರಳಿ ಈ ತೊಂದರೆ ನಿವಾರಿಸಲಿದ್ದೇವೆ.
•ನಾರಾಯಣಗೌಡ ಹೆಸರೂರು, ಕೊಲ್ಲಿ ನಾಗೇಶ್ವರರಾವ್‌ ಕಾಲೇಜು ಪ್ರಾಚಾರ್ಯ

ಬಳ್ಳಾರಿ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಪ್ರತಿ ವರ್ಷವೂ ಒಂದಿಲ್ಲೊಂದು ಎಡವಟ್ಟು ಮಾಡಿಕೊಂಡು ವಿದ್ಯಾರ್ಥಿಗಳಿಂದ ಅನಗತ್ಯವಾಗಿ ಹಣ ಖರ್ಚು ಮಾಡಿಸುತ್ತಿದೆ. ಕೂಡಲೇ ವಿದ್ಯಾರ್ಥಿಗಳ ಫಲಿತಾಂಶದಲ್ಲಿನ ತೊಂದರೆ ಸರಿಪಡಿಸಬೇಕು. ಇಲ್ಲಿದ್ದರೆ ವಿವಿ ವಿರುದ್ಧ ಹೋರಾಟ ಮಾಡಲಾಗುವುದು.
•ಅಮರೇಶ ಕಡಗದ, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ

ನಾನು ಪದವಿ 5ನೇ ಸೆಮಿಸ್ಟರ್‌ನಲ್ಲಿ ಆರು ವಿಷಯಕ್ಕೆ ಪರೀಕ್ಷೆ ಬರೆದಿದ್ದೇನೆ. ಆದರೂ ನನ್ನ ಫಲಿತಾಂಶ ಪಟ್ಟಿಯಲ್ಲಿ ರಾಜ್ಯಶಾಸ್ತ್ರ ವಿಷಯಕ್ಕೆ ಗೈರು ಎಂದು ತೋರಿಸಲಾಗಿದೆ. ನನ್ನ ಸ್ನೇಹಿತ ಪರೀಕ್ಷಾ ಫಲಿತಾಂಶದಲ್ಲೂ ಇದೇ ರೀತಿ ಬಂದಿದೆ. ನಾವು ಕಾಲೇಜು ಪ್ರಾಚಾರ್ಯರ ಗಮನಕ್ಕೆ ತಂದಿದ್ದೇವೆ. ಇದು ಸರಿಯಾಗದಿದ್ದರೆ ಹೋರಾಟ ಮಾಡಲಿದ್ದೇವೆ.
•ಹೊನ್ನೂರಪ್ಪ, ವಿದ್ಯಾರ್ಥಿ

ನಾನು ಬೆಂಗಳೂರಿನಲ್ಲಿದ್ದೇನೆ. ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ.ಸಮಸ್ಯೆ ಇರುವುದನ್ನು ನನ್ನ ಗಮನಕ್ಕೆ ತಂದಿದ್ದೀರಾ.. ನಾನು ವಿವಿ ಮೌಲ್ಯಮಾಪನ ವಿಭಾಗದ ಅಧಿಕಾರಿಗಳ ಜೊತೆ ಮಾತನಾಡುವೆ.
•ಸುಭಾಸ್‌, ಬಳ್ಳಾರಿ ವಿವಿ ಕುಲಪತಿ

ದತ್ತು ಕಮ್ಮಾರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.