ಐತಿಹಾಸಿಕ ಮೈಲಾರ ಜಾತ್ರೆಗೆ ಅದ್ಧೂರಿ ತೆರೆ


Team Udayavani, Feb 25, 2019, 6:46 AM IST

dvg-6.jpg

ಹೂವಿನಹಡಗಲಿ: ನಾಡಿನ ಸುಪ್ರಸಿದ್ಧ ಮೈಲಾರ ಜಾತ್ರೆಗೆ ಅದ್ಧೂರಿ ತೆರೆ ಬಿತ್ತು. ಜಾತ್ರೆಗೆ ಬಂದಿದ್ದ ಲಕ್ಷಾಂತರ ಭಕ್ತರಿಗೆ ಜಿಲ್ಲಾಡಳಿತ ಕಳೆದ ವಾರದಿಂದಲೂ ಸಕಲ ಸಿದ್ಧತೆ ಕೈಗೊಂಡಿದ್ದು, ಬಂದಂತಹ ಭಕ್ತಾದಿಗಳಿಗೆ ಇದನ್ನೆಲ್ಲ ತಲುಪಿಸುವಲ್ಲಿ ಯಶಸ್ವಿಯಾಯಿತು.

ಭಕ್ತರಿಗೆ ಕುಡಿಯುವ ನೀರಿಗಾಗಿ 20 ಕಡೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, 7 ಹ್ಯಾಂಡ್‌ಪಂಪ್‌ಗ್ಳು ಅಲ್ಲದೆ ಜಾತ್ರೆಯಲ್ಲಿ ಬೀಡು ಬಿಟ್ಟಿದ್ದ ಭಕ್ತಾದಿಗಳ ಸವಾರಿ ಬಂಡಿಯ ಸಮೀಪದಲ್ಲಿ ಸಾಕಾಗುವಷ್ಟು ನೀರು ಒದಗಿಸುವ ವ್ಯವಸ್ಥೆ ಮಾಡಲಾಗಿದೆ.

ಇನ್ನು ಜಾತ್ರೆಯ ಪ್ರದೇಶದ ತುಂಬೆಲ್ಲಾ ವಿದ್ಯುತ್‌ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಜೆಸ್ಕಾಂ ಮೊದಲೆ ತಯಾರು ಮಾಡಿಕೊಂಡಿದ್ದ ಕ್ರಿಯಾ ಯೋಜನೆಯಂತೆ, ಕಾರ್ಣಿಕದ ಸ್ಥಳ ಡೆಂಕನ ಮರಡಿ, ಜಾತ್ರಾ ಪ್ರದೇಶ ಒಳಗೊಂಡಂತೆ ಒಟ್ಟು 140 ವಿದ್ಯುತ್‌ ಕಂಬ ಹಾಕಲಾಗಿದ್ದು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯವರು ಕೊರೆಯಿಸಲಾಗಿದ್ದ ಹಾಗೂ ನೂತನವಾಗಿ ಅಳವಡಿಸಲಾಗಿದ್ದ ಸಿಸ್ಟನಗಳಿಗೆ ಯಾವುದೇ ತೊಂದರೆಯಾಗದಂತೆ ವಿದ್ಯುತ್‌ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಗ್ರಾಪಂನಿಂದಾಗಿ 2.50 ಲಕ್ಷ ಹಾಗೂ ದೇವಸ್ಥಾನ ಕಮಿಟಿಯಿಂದಾಗಿ 2.50 ಲಕ್ಷ ರೂ.ಗಳನ್ನು ಜೆಸ್ಕಾಂ ಇಲಾಖೆಗೆ ಪಾವತಿ ಮಾಡಲಾಗಿದ್ದು, ಒಟ್ಟಾರೆ ಸುಮಾರು 25 ಜನ ಸಿಬ್ಬಂದಿ ಹಗಲಿರುಳು ಕಾರ್ಯ ಮಾಡಿ ಯಾವುದೇ ಒಂದು ಸಣ್ಣ ತೊಂದರೆಯಾಗದಂತೆ ನೋಡಿಕೊಂಡಿರುವುದು ಶ್ಲಾಘನೀಯ. 

ಇನ್ನೂ ಸ್ವತ್ಛತೆ ಕಡೆಗೂ ಸಹ ಅಷ್ಟೇ ಗಮನ ಹರಿಸಲಾಗಿದ್ದು, ಗ್ರಾಪಂ ಅಧಿಕಾರಿಗಳು ಜಾತ್ರಾ ಸ್ಥಳದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಶೌಚಾಲಯ ನಿರ್ಮಾಣ ಒಳಗೊಂಡಂತೆ ದೇವಸ್ಥಾನದಲ್ಲಿ ಪ್ರತಿ ಗಂಟೆಗೊಮ್ಮೆ ಕಸ ಗುಡಿಸುವ ಮೂಲಕವಾಗಿ ಸ್ವತ್ಛತೆ ಕಡೆಗೂ ಹೆಚ್ಚಿನ ಗಮನಹರಿಸಲಾಗಿತ್ತು. 

ಇನ್ನೂ ಜಾತ್ರೆಯಲ್ಲಿ ಜನ, ಜಾನುವಾರುಗಳ ಆರೋಗ್ಯದ ಕಡೆಗೂ ಸಹ ಹೆಚ್ಚಿನ ಗಮನ ನೀಡಲಾಗಿದೆ. ಜಾತ್ರೆಯ 4 ಕಡೆಯಲ್ಲಿ ಆಸ್ಪತ್ರೆ ಪ್ರಾರಂಭ ಮಾಡಲಾಗಿದ್ದು, ಸುಮಾರು 25 ಜನ ವೈದ್ಯರ ತಂಡ ಒಳಗೊಂಡಂತೆ ಇತರೆ ಸಿಬ್ಬಂದಿ ಸಹ ಭಕ್ತರ ಆರೋಗ್ಯ ಕುರಿತು ಕಾಳಜಿ ವಹಿಸಿದ್ದರು.

ಇನ್ನೂ ಈ ಬಾರಿ ವಿಶೇಷವಾಗಿದ್ದು, ಕಾರ್ಣಿಕದ ಗೊರವಯ್ಯ ಕಾರ್ಣಿಕ ನುಡಿ ಹೇಳಲು ವಿಶೇಷ ಭದ್ರತೆ ಒದಗಿಸಿ ಯಾವುದೇ ರೀತಿಯಲ್ಲಿ ಗೊಂದಲವಾಗದಂತೆ ಅಧುನಿಕವಾದ ಧ್ವನಿ ಪರಿಕರ ಅಳವಡಿಸಲಾಗಿತ್ತು. ಜಿಲ್ಲಾಧಿಕಾರಿ ಡಾ.ರಾಮ್‌ ಪ್ರಸಾತ್‌, ಸಿಇಒ ಕೆ. ನಿತೀಶ್‌, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಮಹೇಶ್‌, ತಹಶೀಲ್ದಾರ್‌ ಕೆ.ರಾಘವೇಂದ್ರರಾವ್‌, ಇಒಯು.ಎಚ್‌. ಸೋಮಶೇಖರ್‌ ಸೇರಿದಂತೆ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳ ಸಹಕಾರದಿಂದಾಗಿ ಈ ವರ್ಷದ ಮೈಲಾರ ಜಾತ್ರೆ ಪ್ರತಿ ವರ್ಷದ ಜಾತ್ರೆಗಿಂತಲೂ ಕೆಲವೊಂದು ವಿಶೇಷತೆಗೆ ಸಾಕ್ಷಿಯಾಗಿತ್ತು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.