ನರೇಗಾ ಕಾಮಗಾರಿ-ಬೆಳೆ ವೈಫಲ್ಯ ವೀಕ್ಷಣೆ
Team Udayavani, Mar 1, 2019, 11:36 AM IST
ಹೂವಿನಹಡಗಲಿ: ತಾಲೂಕಿನ ಹಗರನೂರು ಗ್ರಾಮಕ್ಕೆ ಗುರುವಾರ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ನರೇಗಾದಡಿ ಕೈಗೊಂಡಿರುವ ಕಾಮಗಾರಿ ಹಾಗೂ ಬೆಳೆ ವೈಫಲ್ಯ ಕುರಿತು ಜಿಲ್ಲಾಡಳಿತದಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿತು.
ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣದ ಜಂಟಿ ನಿರ್ದೇಶಕ ಡಾ| ಅಭಿಲಾಷ್ ಲಿಖೀ, ತೈಲಬೀಜ ಅಭಿವೃದ್ಧಿ ನಿರ್ದೇಶನಾಲಯದ ಬಿ.ಕೆ.ಶ್ರೀವಾಸ್ತವ್ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ದೇಶನಾಲಯದ ಎಸ್.ಸಿ.ಶರ್ಮಾ ನೇತೃತ್ವದ ತಂಡ ತಾಲೂಕಿನ ಹಗರನೂರು ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿದ್ದ ಕಾಮಗಾರಿಗಳು ಹಾಗೂ ಬೆಳೆ ವೈಫಲ್ಯವನ್ನು ವೀಕ್ಷಿಸಿತು.
ಜಿಲ್ಲೆಯಲ್ಲಿ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ 100 ದಿನಕ್ಕೆ ನಿಗದಿಯಾಗಿದ್ದ ನರೇಗಾ ಕಾಮಗಾರಿಯನ್ನು 150 ದಿನಕ್ಕೆ ನಿಗದಿ ಮಾಡಲಾಗಿದ್ದು, ಫೆಬ್ರವರಿ 1ನೇ ತಾರೀಕಿನವರೆಗೆ ನರೇಗಾ ಕಾಮಗಾರಿಯಲ್ಲಿ ಭಾಗವಹಿಸಿದ್ದ ಕಾರ್ಮಿಕರಿಗೆ ಹಣ ಸಂದಾಯವಾಗಿರುವ ಕುರಿತು ಮಾಹಿತಿ ಪಡೆದುಕೊಂಡಿತು.
ಈ ಸಂದರ್ಭದಲ್ಲಿ ರೈತ ಚರಣಗುಂಡಿ, ತಾಲೂಕಿನಲ್ಲಿ ಬರಗಾಲ ಎದುರಾಗಿದೆ. ಆದರೆ ಈವರೆಗೂ ಬೆಳೆನಷ್ಟ ವಿಮೆಯಾಗಲಿ ಅಥವಾ ಬೆಳೆ ನಷ್ಟ ಪರಿಹಾರವಾಗಲಿ ಯಾವುದೇ ಹಣ ರೈತರಿಗೆ ಸಂದಾಯವಾಗಿಲ್ಲ. ಹೀಗಾದರೆ ರೈತರು ಜೀವನ ನಡೆಸುದಾದರೂ ಹೇಗೆ ಎಂದು ಬರ ಅಧ್ಯಯನ ತಂಡದ ಅಧಿಕಾರಿಗಳನ್ನು ಪ್ರಶ್ನಿಸಿದರು. ರೈತರ ಸಮಸ್ಯೆ ಆಲಿಸಿದ ಬರ ಅಧ್ಯಯನ ತಂಡದ ಅಧಿಕಾರಿಗಳು, ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿತು.
ಬಳಿಕ ಕೇಂದ್ರ ಬರ ಅಧ್ಯಯನ ತಂಡ ಬೆಳೆ ವೈಫಲ್ಯ ವೀಕ್ಷಿಸಿ ಹಿಂದಿರುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ| ರಾಮ್ ಪ್ರಸಾತ್ ಮನೋಹರ್, ಈಗಾಗಲೇ ಜಿಲ್ಲೆಯಲ್ಲಿ ಹಿಂಗಾರು ಮಳೆ ಸಾಕಷ್ಟು ಪ್ರಮಾಣದಲ್ಲಿ ಕೊರತೆಯಾಗಿದೆ. ವಾಡಿಕೆಯಂತೆ ಜಿಲ್ಲೆಯಲ್ಲಿ 150 ಮಿ.ಮೀ. ಮಳೆ ಆಗಬೇಕಿತ್ತು. ಆದೆರ ಕೇವಲ 92 ಮಿ.ಮೀ. ಮಳೆಯಾಗಿದ್ದು, ಸುಮಾರು 72 ಮಿ.ಮೀ.ನಷ್ಟು ಮಳೆ ಕೊರತೆಯಾಗಿದೆ. ಹೀಗಾಗಿ ಜಿಲ್ಲೆಯಲ್ಲಿ 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕರಿ ಕಡ್ಲೆ, 9 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸೂರ್ಯಕಾಂತಿ ಹಾಗೂ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಜೋಳದ ಬೆಳೆ ನಷ್ಟವಾಗಿದೆ. ಒಟ್ಟು 37.55 ಕೋಟಿ ರೂ. ಬೆಳೆ ನಷ್ಟ ಪರಿಹಾರಕ್ಕೆ ಪ್ರಸ್ತಾವನೆಯನ್ನು ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಜಿಲ್ಲೆಯಲ್ಲಿ 218 ಹೆಕ್ಟೇರ್ ಪ್ರದೇಶದಲ್ಲಿ ದಾಳಿಂಬೆ ನಷ್ಟವಾಗಿದ್ದು, ಸುಮಾರು 1.16 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲೆಯ 116 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 22 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ತೆ ಕಲ್ಪಿಸಲಾಗಿದೆ. ಇನ್ನುಳಿದ 65 ಹಳ್ಳಿಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಇನ್ನೂ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬರಗಾಲ ಹಿನ್ನೆಲೆಯಲ್ಲಿ ಸುಮಾರು 509 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳಲ್ಲಿ ಈಗಾಗಲೇ 455 ಪೂರ್ಣಗೊಂಡಿವೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮೇವಿನ ಸಮಸ್ಯೆ ಆಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಂಡು ಬಂದಿಲ್ಲ. ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಜನರ ಬೇಡಿಕೆ ಮೇರಿಗೆ 1 ಗೋಶಾಲೆ ಪ್ರಾರಂಭ ಮಾಡಲಾಗಿದೆ. ಮೇವು ಸಮಸ್ಯೆ ನೀಗಿಸಲು ರೈತರಿಂದ ನೇರವಾಗಿ ಮೇವು ಖರೀದಿ ಮಾಡಲಾಗಿದ್ದು, ಅಲ್ಲದೆ, ಜಿಲ್ಲೆಯಲ್ಲಿಯೇ ಸುಮಾರು 8 ಸಾವಿರ ಮೆಟ್ರಿಕ್ ಟನ್ ಮೇವು ಉತ್ಪಾದನೆ ಮಾಡಲಾಗಿದೆ.
ಇನ್ನೂ ಬರಗಾಲಕ್ಕೆ ಸಂಬಂಧ ಪಟ್ಟಂತೆ ಕುಡಿಯುವ ನೀರಿನ ಕಾಮಗಾರಿಗೆ ಒತ್ತು ಕೊಡಲಾಗಿದ್ದು, ವೈಯಕ್ತಿಕ ಕಾಮಗಾರಿಗಳಿಗೂ ಸಹ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಉದ್ಯೋಗ ಯೋಜನೆಯಡಿ ಫೆ.1ರ ನಂತರದಲ್ಲಿ ಕೂಲಿ ಕಾರ್ಮಿಕರ ಹಣ ಸುಮಾರು 5.5 ಕೋಟಿ ರೂ. ಬಾಕಿ ಇದ್ದು, ಇಷ್ಟರಲ್ಲಿಯೇ ಸರ್ಕಾರದಿಂದ ಹಣ ಪಾವಾತಿಯಾಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ.ರಾಘವೇಂದರಾವ್, ತಾಪಂ ಇಒ ಯು.ಎಚ್. ಸೋಮಶೇಖರ್, ಸಿದ್ದೇಶ್, ಚಿದಾನಂದಪ್ಪ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಜಿಲ್ಲೆಯಲ್ಲಿ 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕರಿ ಕಡ್ಲೆ, 9 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸೂರ್ಯಕಾಂತಿ ಹಾಗೂ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಜೋಳದ ಬೆಳೆ ನಷ್ಟವಾಗಿದೆ. ಒಟ್ಟು 37.55 ಕೋಟಿ ರೂ. ಬೆಳೆ ನಷ್ಟ ಪರಿಹಾರಕ್ಕೆ ಪ್ರಸ್ತಾವನೆಯನ್ನು ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಲ್ಲಿಸಲಾಗಿದೆ.
ಡಾ| ರಾಮ್ ಪ್ರಸಾತ್ ಮನೋಹರ್, ಜಿಲ್ಲಾಧಿಕಾರಿ.
ತಡವಾಗಿ ಬಂದ ಅಧ್ಯಯನ ತಂಡ ತಾಲೂಕಿನ ಹಗರನೂರು ಗ್ರಾಮಕ್ಕೆ ಬೆಳಗ್ಗೆ 11 ಗಂಟೆಗೆ ಬರ ವೀಕ್ಷಣೆಗೆ ಆಗಮಿಸಬೇಕಾಗಿದ್ದ ಕೇಂದ್ರ ಬರ ಅಧ್ಯಯನ ತಂಡ, ಸುಮಾರು ಎರಡು ತಾಸು ತಡವಾಗಿ ಆಗಮಿಸಿತು. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ನರೇಗಾ ಕೂಲಿ
ಕಾರ್ಮಿಕರು ತಂಡ ಆಗಮನಕ್ಕಾಗಿ ಕಾದು ಕುಳಿತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ