ಸಾಮೂಹಿಕ ವಿವಾಹ ಬಡವರಿಗೆ ವರ


Team Udayavani, Mar 5, 2019, 9:44 AM IST

dvg-3.jpg

ಹರಪನಹಳ್ಳಿ: ಸಾಮಾಜಿಕ ಸಂಸ್ಥೆಗಳು, ಮಠ-ಮಾನ್ಯಗಳು ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುವ ಮೂಲಕ ಬಡವರಿಗೆ ನೆರವಾಗಿರುವುದು ಸ್ತುತ್ಯಾರ್ಹ ಕಾರ್ಯವಾಗಿದೆ. ಸಮಾಜ ಇಂತಹ ಕಾರ್ಯಕ್ಕೆ ಬೆನ್ನುಲುಬಾಗಿ ನಿಲ್ಲಬೇಕು ಎಂದು ಬಾಳೇಹೊಸೂರು ದಿಂಗಾಲೇಶ್ವರ ಮಠದ ಪೀಠಾಧ್ಯಕ್ಷ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ತಾಲೂಕಿನ ನೀಲಗುಂದ ಗ್ರಾಮದ ಗುಡ್ಡದ ವಿರಕ್ತಮಠದಲ್ಲಿ ಜಂಗಮ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಹಾಗೂ ವಿದ್ಯಾರ್ಥಿ ನಿಲಯ ಹಾಗೂ ದಾಸೋಹ ಮಹಾಮನೆಯ ಉದ್ಘಾಟನೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀವರ್ಚನ ನೀಡಿದರು. 

ಮತ-ಪಂಥಗಳನ್ನು ಅಳಿಸಿ ಹಾಕುವ ನಿಟ್ಟಿನಲ್ಲಿ ಸರ್ವಧರ್ಮೀಯರ ಸಹಭಾಗಿತ್ವದಲ್ಲಿ ನಡೆಯುವ ಸರಳ ಸಾಮೂಹಿಕ ವಿವಾಹಗಳು ಸಾಮಾಜಿಕ ಹಾಗೂ ಆರ್ಥಿಕ ಹಿನ್ನೆಲೆಯಲ್ಲಿ ಬಡವರ ಪಾಲಿನ ಸಂಜೀವಿನಿಯಾಗಿವೆ. ಎಲ್ಲ ಆಶ್ರಮಗಳಿಗಿಂತ ಗೃಹಸ್ಥಾಶ್ರಮ ಶ್ರೇಷ್ಠ. ವಿವಾಹ ಎಂಬುವುದು ಕೇವಲ ಎರಡು ದೇಹಗಳ ನಡುವಿನ ಸಮ್ಮಿಲನ ಸಲ್ಲ, ಅದು ಎರಡು ಹೃದಯ ಬೆಸೆಯುವ ಪವಿತ್ರವಾದ ಜೀವನ ಪದ್ಧತಿ. ಸತಿಪತಿಗಳು ಹೊಂದಾಣಿಕೆಯಿಂದ ಜೀವನ ನಡೆಸಬೇಕು ಎಂದರು.

ಮಡಿವಾಳ ಮಾಚಿದೇವ ಸಂಸ್ಥಾನದ ಬಸವ ಮಾಚಿದೇವ ಸ್ವಾಮೀಜಿ ಮಾತನಾಡಿ, ಸಾಮೂಹಿಕ ವಿವಾಹಗಳು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವರದಾನವಾಗಿವೆ. ಇಂತಹ ವಿವಾಹ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ಜೊತೆಗೆ ಸಮಾಜದಲ್ಲಿ ಸಾಮರಸ್ಯದ ವಾತಾವರಣ ಮೂಡಿಸುತ್ತವೆ. ಯುವಕರು ದುಶ್ಚಟಗಳಿಂದ ದೂರವಿದ್ದು, ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸುಸಂಸ್ಕೃತರಾಗಬೇಕು. ಶರಣರು ಸದ್ಭಕ್ತರ ಹೃದಯದ ಆಳದಲ್ಲಿ ನೆಲೆಸಿರುತ್ತಾರೆ. ಅವರ ಮಾರ್ಗಗಳನ್ನು ಅನುಸರಿಸಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ತಿಳಿಸಿದರು.

ಹೂವಿನಹಡಗಲಿ ಗವಿಸಿದ್ದೇಶ್ವರ ಮಠದ ಡಾ| ಹಿರಿಯ ಶಾಂತವೀರ ಸ್ವಾಮೀಜಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ದುಂದು ವೆಚ್ಚದ ಆಡಂಬರದ ಮದುವೆಯಿಂದಾಗಿ ಮಧ್ಯಮ ವರ್ಗ ಹಾಗೂ ಬಡವರು ಸಾಲದ ಶೂಲಕ್ಕೆ ಸಿಕ್ಕಿ ನರಳುತ್ತಾರೆ. ಸಾಮೂಹಿಕ ವಿವಾಹದಿಂದ ನೆಮ್ಮದಿಯ ಜೀವನಕ್ಕೆ ನಾಂದಿ ಹಾಡಿದಂತಾಗುತ್ತದೆ. ಅಲ್ಲದೇ ಬರಗಾಲ ಸಂದರ್ಭದಲ್ಲಿ ಸಾಮೂಹಿಕ ವಿವಾಹಗಳಿಂದ ಆರ್ಥಿಕ ಸಂಕಷ್ಟ ತಪ್ಪಿಸಿದಂತಾಗುತ್ತದೆ ಎಂದರು. 

ಸಾನ್ನಿಧ್ಯ ವಹಿಸಿದ್ದ ನೀಲಗುಂದ ಗುಡ್ಡದ ವಿರಕ್ತಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ ಮಾತನಾಡಿ, ದುಂದು ವೆಚ್ಚ ತಗ್ಗಿಸಲು ಸಾಮೂಹಿಕ ವಿವಾಹ ಸಹಕಾರಿಯಾಗಿದೆ. ಬಡತನದಿಂದಾಗಿ ಕುಟುಂಬ ನಿರ್ವಹಣೆಯೇ ದುಸ್ತರವಾಗಿರುವ ಪ್ರಸಂಗಗಳನ್ನು ಹತ್ತಿರದಿಂದ ಕಂಡು ಅಂತವರಿಗೆ ನೆರವಾಗುವ ದೃಷ್ಟಿಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಬಂದಿದ್ದೇವೆ.

ಸರ್ಕಾರ ಸರಳ ಸಾಮೂಹಿಕ ವಿವಾಹವಾಗುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಪ್ರೋತ್ಸಾಹ ಧನ ನೀಡುವ ಮೂಲಕ ಬಡವರಿಗೆ ಅನುಕೂಲ ಮಾಡಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಮಠದಲ್ಲಿ 45 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಬಳ್ಳಾರಿ ಕಲ್ಯಾಣ ಸ್ವಾಮೀಜಿ, ಲಿಂಗಾನಾಯಕನಹಳ್ಳಿ ಚನ್ನವೀರ ಶಿವಯೋಗಿ ಸ್ವಾಮೀಜಿ, ಹಿರೇಮಲ್ಲನಕೇರಿ ಚನ್ನಬಸವ ಸ್ವಾಮೀಜಿ, ನಾಗತಿಬಸಾಪುರ ಶಿವಯೋಗಿ ತಾತಾ, ಉತ್ತಂಗಿ ಮಠದ ಮರೀದೇವರಾದ ಶಂಕರಲಿಂಗದೇವರು, ಶಿರಸಂಗಿ ಬಸವ ಮಹಾಂತ ದೇವರು, ಬಾಗಳಿ ಕೊಟ್ರೇಶಪ್ಪ, ನಿಚ್ಚವ್ವನಹಳ್ಳಿ ಭೀಮಪ್ಪ, ನೀಲಗುಂದ ಟಿ.ಮನೋಜ್‌, ವಕೀಲ ತೆಲಿಗಿ ಕರಿಬಸಪ್ಪ, ಹರಾಳ್‌ ಅಶೋಕ್‌, ತಿರುಪತಿ ಇನ್ನಿತರರಿದ್ದರು.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.