ಕುರಿ ಮಂದೆ ಮೇಲೆ ಚಿರತೆ ದಾಳಿ
Team Udayavani, Mar 16, 2019, 10:03 AM IST
ಕಂಪ್ಲಿ: ತಾಲೂಕಿನ ಚಿನ್ನಾಪುರದ ಹೊರ ವಲಯದ ಪ್ರದೇಶದಲ್ಲಿ ಬೀಡು ಬಿಟ್ಟಿದ್ದ ಕುರಿ ಮಂದೆ ಮೇಲೆ ಚಿರತೆಯೊಂದು ದಾಳಿ ನಡೆಸಿ ಕುರಿಯನ್ನು ತೀವ್ರವಾಗಿ ಗಾಯಗೊಳಿಸಿದ ಘಟನೆ ನಡೆದಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಗ್ರಾಮದ ಕರಿಗುಡ್ಡ ಹೊಲಯದಲ್ಲಿ ಶಿವಣ್ಣ ಎನ್ನುವವರ ಜಮೀನಿನಲ್ಲಿ ಅಂಜಿನಪ್ಪ ಎಂಬುವರು 200 ಕುರಿಗಳ ಮಂದೆ ಬೀಡು ಬಿಟ್ಟಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿದ ಚಿರತೆ ಒಂದು ಕುರಿಯ ಕೆಚ್ಚಲು ಮತ್ತು ಹೊಟ್ಟೆ ಭಾಗ ತಿಂದು ಹಾಕಿದೆ. ಈ ವೇಳೆ ಚಿರಾಡಿದ ಕುರಿಗಳ ಶಬ್ಧದಿಂದ ಎಚ್ಚೆತ್ತ ಕುರಿಗಾಹಿಗಳು ಚಿರತೆ ಓಡಿಸಿ ಕುರಿಯನ್ನು ರಕ್ಷಿಸಿದ್ದಾರೆ.
ಮೂರು ದಿನಗಳ ಹಿಂದೆಷ್ಟೆ ಇದೇ ಕರೆಗುಡ್ಡದ ಪ್ರದೇಶದ ದಾಳಿಂಬೆ ಹೊಲದಲ್ಲಿ ಚಿರತೆಯೊಂದು ಕುರಿಮರಿಯನ್ನು ಸಂಪೂರ್ಣ ತಿಂದು ಹಾಕಿತ್ತು. ಗ್ರಾಮದ ಅಕ್ಕ-ತಂಗಿ ಗುಡ್ಡದ ಬಳಿ ಮೂರು ಚಿರತೆಗಳು, ಬಿಂಚಿಮಟ್ಟಿ ಹಾಗೂ ಕರೇಗುಡ್ಡದ ಹತ್ತಿರ ಐದು ಚಿರತೆಗಳಿದ್ದು, ನಿರಂತರವಾಗಿ ಗ್ರಾಮಸ್ಥರಿಗೆ ಕಾಣಿಸಿಕೊಳ್ಳುತ್ತಿವೆ. ಅಲ್ಲದೆ, ಮೇಲಿಂದ ಮೇಲೆ ಚಿರತೆಗಳು ಜಾನುವಾರುಗಳ ಮೇಲೆ ಸರಣಿ ದಾಳಿ ನಡೆಸುತ್ತಿರುವ ಕಾರಣ ಹೊಲಗದ್ದೆಗಳಿಗೆ ತೆರಳುವ ರೈತರು ಭಯ ಭೀತರಾಗಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಸ್ಥಳದಲ್ಲಿ ಬೋನ್ ಗಳನ್ನು ಅಳವಡಿಸಿ ಚಿರತೆ ಸೆರೆ ಹಿಡಿಯಬೇಕೆಂದು ಕುರಿಗಾಹಿಗಳು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ