“ಸಹಾರ್ದ’ ರಾಜ್ಯದಲ್ಲೇ ಮಾದರಿ ತರಬೇತಿ ಸಂಸ್ಥೆ


Team Udayavani, Jul 7, 2017, 9:33 AM IST

BIDAR-1.jpg

ಬೀದರ: ಸಹಾರ್ದ ಸಂಸ್ಥೆಯು ಜಿಲ್ಲೆಯಲ್ಲಿ ನಡೆದಿರುವ ಸ್ವಸಹಾಯ ಗುಂಪುಗಳ ಮೂಲಕ ಮಹಿಳಾ ಸಬಲೀಕರಣದ ಮೌನ ಕ್ರಾಂತಿಯನ್ನು ಜಗತ್ತಿಗೆ ಪರಿಚಯಿಸುವ ಮತ್ತು ಹಬ್ಬಿಸುವ ಕೆಲಸವನ್ನು ತರಬೇತಿ ಮೂಲಕ ಸಮರ್ಥವಾಗಿ ಮಾಡುತ್ತಿದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು.

ನಗರದಲ್ಲಿ ಡಿಸಿಸಿ ಬ್ಯಾಂಕ್‌ನಿಂದ ಸ್ಥಾಪಿಸಲ್ಪಟ್ಟಿರುವ ಸಹಾರ್ದ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, ದೇಶದ 371 ಡಿಸಿಸಿ ಬ್ಯಾಂಕ್‌ಗಳ ಪೈಕಿ 256 ಬ್ಯಾಂಕ್‌ಗಳ ಅಧ್ಯಕ್ಷರು, ಆಡಳಿತ ಮಂಡಳಿ ಮತ್ತು ಹಿರಿಯ ಅ ಧಿಕಾರಿಗಳು ಸಂಸ್ಥೆಯಲ್ಲಿ ತರಬೇತಿ ಪಡೆದು ತಮ್ಮ ಜಿಲ್ಲೆಗಳಲ್ಲೂ ಇದೇ ಮಾದರಿ ಅಳವಡಿಸಿಕೊಂಡಿರುವುದು ಬೀದರಗೆ ಹೆಮ್ಮೆಯ ವಿಷಯ. ಬೀದರ ಮಾದರಿಯನ್ನು ತಮ್ಮ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲು ದೇಶಾದ್ಯಂತ ಉಳಿದ ಬ್ಯಾಂಕ್‌ಗಳಿಗೆ ಮಾರ್ಗದರ್ಶ, ನೆರವು ನೀಡಿದೆ ಎಂದರು.

ಸ್ವಸಹಾಯ ಗುಂಪುಗಳ ತರಬೇತಿಗಳಲ್ಲದೇ ಸಹಾರ್ದ ಸಂಸ್ಥೆಯು ಇತರ ಚಟುವಟಿಕೆಗಳಲ್ಲೂ ಪಾಲ್ಗೊಂಡಿದ್ದು, ಅದರಲ್ಲಿ ಸ್ವಸಹಾಯ ಸಂಘಗಳಲ್ಲಿ ಉದ್ಯಮಶೀಲತೆ ಬೆಳೆಸುವುದು, ಯುವಕರಿಗೆ ಜಂಟಿ ಬಾಧ್ಯತಾ ಗುಂಪುಗಳ ಮೂಲಕ ಆದಾಯ ಉತ್ಪನ್ನ ಚಟುವಟಿಕೆ ನಡೆಸುವಂಥ ತರಬೇತಿ ನೀಡುತ್ತಿರುವುದು, ಶಾಲೆಗಳಲ್ಲಿ ಉತ್ತಮ  ಕಲಿಕಾ ವರ್ಧನೆ ಚಟುವಟಿಕೆ, ರೈತರಿಗೆ ರೈತರ ಕೂಟದನಿರ್ವಹಣೆ ತರಬೇತಿ ಸೇರಿದಂತೆ ಇನ್ನಿತರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದೆ ಎಂದರು. 

ರೈತರ ಕೂಟಗಳನ್ನು ಕಾರ್ಯೋನ್ಮುಖಗೊಳಿಸುವ ನಿಟ್ಟಿನಲ್ಲಿ ಇಲ್ಲಿಯವರೆಗೆ ಸುಮಾರು 302 ಬುನಾದಿ ತರಬೇತಿಗಳನ್ನು 3,878 ರೈತರಿಗೆ ಮತ್ತು 10 ನಾಯಕತ್ವ ತರಬೇತಿಗಳ ಮೂಲಕ 757 ರೈತರಿಗೆ ತರಬೇತಿ ನೀಡಲಾಗಿದೆ. ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರಿಗೆ 6,182 ತರಬೇತಿಗಳನ್ನು ನೀಡಲಾಗಿದೆ. 10 ವರ್ಷಗಳಿಂದ ಸತತವಾಗಿ ಜಿಲ್ಲೆಯಲ್ಲಿ ತರಬೇತಿ ಪಡೆದ ಸ್ವಸಹಾಯ
ಗುಂಪುಗಳು ನಬಾರ್ಡ್‌ ಅತ್ಯುತ್ತಮ ಸ್ವಸಹಾಯ ಸಂಘ ರಾಜ್ಯ ಪ್ರಶಸ್ತಿಗೆ ಪಾತ್ರವಾಗುತ್ತಿರುವುದು ಅಭಿನಂದನಾರ್ಹ ಎಂದರು.

ದೇಶದಲ್ಲೇ ಒಂದು ಡಿಸಿಸಿ ಹೊಂದಿರುವ ಪ್ರಥಮ ತರಬೇತಿ ಸಂಸ್ಥೆಯೆಂದು ಸಹಾರ್ದ ಹೆಸರು ವಾಸಿಯಾಗಿದೆ. ಉಳಿದ ಬ್ಯಾಂಕ್‌ಗಳಿಗೆ ಮಾದರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ತರಬೇತಿ ಪಡೆದ ಬೆಳಗಾವಿ, ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತು ಕಲಬುರಗಿ ಜಿಲ್ಲೆಗಳ ಆಯ್ದ ಪಿಕೆಪಿಎಸ್‌ ಅಧ್ಯಕ್ಷರಿಗೆ ಪ್ರಮಾಣ ಪತ್ರ ವಿತರಿಸಿದರು. ನಬಾರ್ಡ್‌ ಜಿಲ್ಲಾ ಅಭಿವೃದ್ಧಿ ಅಧಿ ಕಾರಿ ಡಿವಿಎಸ್‌ ಜೋಶಿ, ಲೀಡ್‌ ಬ್ಯಾಂಕ್‌ ಪ್ರಬಂಧಕ ಪಂಡಿತ ಹೊಸಳ್ಳಿ, ಡಿಸಿಸಿ  ಬ್ಯಾಂಕ್‌ ಸಿಇಒ ಮಲ್ಲಿಕಾರ್ಜುನ ಮಹಾಜನ, ನಿರ್ದೇಶಕ ಜಗನ್ನಾಥ ರೆಡ್ಡಿ, ಉಪ ಪ್ರಧಾನ ವ್ಯವಸ್ಥಾಪಕ ಅನೀಲ ಪಾಟೀಲ, ಚನಬಸಯ್ನಾ ಸ್ವಾಮಿ ಉಪಸ್ಥಿತರಿದ್ದರು. ಸಹಾರ್ದ
ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ನಾಗಶೆಟ್ಟಿ ಘೋಡಂಪಳ್ಳಿ ಮತ್ತು ಅನೀಲ ಪರೇಷಣೆ ನಿರೂಪಿಸಿದರು.
ಎಸ್‌.ಜಿ. ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.