ಲಿಂಗಾಯತ ಪ್ರತ್ಯೇಕ ಧರ್ಮ ಅಂತ ಘೋಷಿಸಿ; ಬೀದರ್ ನಲ್ಲಿ ಬೃಹತ್ ಹೋರಾಟ
Team Udayavani, Jul 20, 2017, 3:38 PM IST
ಬೀದರ್: ವೀರಶೈವರೇ ಬೇರೆ, ಲಿಂಗಾಯತರೇ ಬೇರೆ, ಲಿಂಗಾಯತರಿಗೆ ಸ್ವತಂತ್ರ ಧರ್ಮದ ಸ್ಥಾನ ಕೊಡಬೇಕು ಎಂದು ಆಗ್ರಹಿಸಿ ಬೀದರ್ ನಲ್ಲಿ ಲಕ್ಷಾಂತರ ಲಿಂಗಾಯತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ನೆರೆಯ ತೆಲಂಗಾಣ, ಮಹಾರಾಷ್ಟ್ರ ಜಿಲ್ಲೆಗಳಿಂದ ಬಂದಿದ್ದ ಸಾವಿರಾರು ಲಿಂಗಾಯತರು ಬೃಹತ್ ರಾಲಿ ನಡೆಸಿದರು. ಲಿಂಗಾಯತ ಸ್ವತಂತ್ರ ಧರ್ಮ ಎಂದು ಬರೆಯಲಾಗಿದ್ದ ಟೋಪಿಯನ್ನು ಹಾಕಿಕೊಂಡಿದ್ದ ಯುವಕರು ಸೇರಿದಂತೆ ಲಿಂಗಾಯತ ಸಮಾಜದ ಪ್ರತಿನಿಧಿಗಳು ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.
ಹಿಂದೂ ಧರ್ಮಕ್ಕೂ ನಮಗೂ ಸಂಬಂಧ ಇಲ್ಲ. ನಮ್ಮದು ಲಿಂಗಾಯತ ಧರ್ಮ, ಬಸವ ಸಿದ್ಧಾಂತ ನಂಬಿದ್ದೇವೆ. ಆ ನಿಟ್ಟಿನಲ್ಲಿ ಲಿಂಗಾಯ ಪ್ರತ್ಯೇಕ ಧರ್ಮ ಎಂದು ಘೋಷಿಸಬೇಕು. ಇದರಿಂದಾಗಿ ಸರ್ಕಾರದ ಅನೇಕ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಬಸ ಮಠ ಪೀಠಾಧ್ಯಕ್ಷೆ ಮಾತೆಮಹಾದೇವಿ ಖಾಸಗಿ ಟಿವಿ ಚಾನೆಲ್ ಜತೆ ಮಾತನಾಡುತ್ತ ತಿಳಿಸಿದರು.
ವೀರಶೈವ, ಲಿಂಗಾಯತ ಪ್ರತ್ಯೇಕ ಪಂಥ ಅಲ್ಲ; ಚಿದಾನಂದ ಮೂರ್ತಿ
ವೀರಶೈವ, ಲಿಂಗಾಯತ ಪ್ರತ್ಯೇಕ ಪಂಥ ಅಲ್ಲ. ಮಾತೆಮಹಾದೇವಿಗೆ ಪ್ರಚಾರದ ಹುಚ್ಚು ಎಂದು ಹಿರಿಯ ಸಂಶೋಧಕ ಚಿದಾನಂದ ಮೂರ್ತಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್