ಬೋಧನೆಯೊಂದಿಗೆ ಸಮಾಜ ತಿದ್ದಿ


Team Udayavani, Sep 12, 2017, 12:15 PM IST

bid-6.jpg

ಔರಾದ: ವಿದ್ಯಾರ್ಥಿಗಳಿಗೆ ಪಠ್ಯ ಬೋಧನೆ ಮಾಡುವುದರೊಂದಿಗೆ ಸಮಾಜ ತಿದ್ದುವವನೇ ನಿಜವಾದ ಶಿಕ್ಷಕ ಎಂದು ಮಾಜಿ ಗೃಹ ಸಚಿವ ಆರ್‌. ಆಶೋಕ ಹೇಳಿದರು.

ಪಟ್ಟಣದ ಅಮರೇಶ್ವರ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಅವರು, ದಾರಿ ತಪ್ಪುತ್ತಿರುವ ಮಕ್ಕಳಿಗೆ ಉತ್ತಮ ಮಾರ್ಗದರ್ಶನ ನೀಡುವುದರ ಜೊತೆಗೆ ಸಮಾಜದ ತಿರುಳು ಪರಿಚಯಿಸುವ ಮೂಲಕ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದರು.

ಹಿಂದಿನ ಕಾಲದಲ್ಲಿ ಶಿಕ್ಷಕರನ್ನು ಕಂಡರೇ ಮಕ್ಕಳು ಭಯ ಪಡುತ್ತಿದ್ದರು. ಆದರೆ ಈಗ ಮಕ್ಕಳನ್ನು ಕಂಡು ಶಿಕ್ಷಕರೇ ಭಯದಿಂದ ಶಾಲೆಯಲ್ಲಿ ವಿದ್ಯಾಭಾಸ ಮಾಡಿಸುವಂತಹ ಅನಿವಾರ್ಯತೆ ಇದೆ. ಪರಿವರ್ತನೆ ಜಗದ ನಿಯಮವಾಗಿದೆ ಎಂದರು.

ನಾಡಿನ ಶಿಕ್ಷಕರ ಹಲವು ದಶಕಗಳ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗದೇ ಇರುವುದು
ದುರಾದೃಷ್ಟದ ಸಂಗತಿ. ಆದಿಕಾಲದಿಂದ ಆಧುನಿಕ ಯುಗದ ವರೆಗೂ ವಿಶ್ವದಲ್ಲಿ ಎಲ್ಲಾ ಸರ್ಕಾರಿ ನೌಕರರಿಗಿಂತ ಶಿಕ್ಷಕರಿಗೆ ಹೆಚ್ಚು ಗೌರವ ನೀಡಲಾಗುತ್ತಿದೆ. ಶಿಕ್ಷಕರು ತಮ್ಮ ಕರ್ತವ್ಯಕ್ಕೆ ಚುತಿ ಬರದಂತೆ ಜಾಗ್ರತೆಯಿಂದ ಕೆಲಸ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಗಡಿ ತಾಲೂಕಿನಲ್ಲಿ ಶಿಕ್ಷಕ ದಿನವನ್ನು ಅದ್ಧೂರಿಯಾಗಿ ಆಚರಿಸುತ್ತಿರುವ ಶಾಸಕ ಪ್ರಭು ಚವ್ಹಾಣ ಅವರ ಕಾಳಜಿ ನಿಜಕ್ಕೂ ಅನನ್ಯವಾದದ್ದು. ಇವರಂತೆ ನಾನೂ ಕೂಡ ನಮ್ಮ ಕ್ಷೇತ್ರದಲ್ಲಿ ಶಿಕ್ಷಕರ ದಿನಾಚರಣೆ ಮಾಡಿ ಗುರು ವಂದನೆ ಸಲ್ಲಿಸುವುದಾಗಿ ಭರವಸೆ ನೀಡಿದರು. ಶಾಸಕ ಪ್ರಭು ಚವ್ಹಾಣ ಮಾತನಾಡಿ, ಶೈಕ್ಷಣಿಕವಾಗಿ ತೀರಾ ಹಿಂದುಳಿದಿರುವ ತಾಲೂಕಿನಲ್ಲಿ ಶೈಕ್ಷಣಿಕ ವ್ಯವಸ್ಥೆ ಸುಧಾರಣೆ ಮಾಡಬೇಕೆನ್ನುವ ಉದ್ದೇಶದಿಂದ 7 ವರ್ಷಗಳಿಂದ ಶಿಕ್ಷಕ ಹಾಗೂ ಮಕ್ಕಳ ದಿನವನ್ನು ಅದ್ಧೂರಿಯಾಗಿ ಆಚರಿಲಾಗುತ್ತಿದೆ. ಅದರಂತೆ ಕೇವಲ ಶೇ.34ಕ್ಕೆ ಸೀಮಿತವಾಗಿದ್ದ ತಾಲೂಕಿನ ಫಲಿತಾಂಶ ಹಂತ ಹಂತವಾಗಿ ಸುಧಾರಣೆಯಾಗಿ ಇದೀಗ ಶೇ.74ಕ್ಕೆ ಬಂದಿದೆ ಎಂದು ಹೇಳಿದು.

ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ದೇವರು, ಶಿವನಾಂದ ಶಿವಾಚಾರ್ಯ ಸ್ವಾಮೀಜಿ ತಮಲೂರ, ಶಿಕ್ಷಣಾಧಿಕಾರಿ ಚವ್ಹಾಣ ಶೆಟ್ಟಿ, ಜಿಪಂ ಸದಸ್ಯ ಮಾರುತಿ ಚವ್ಹಾಣ, ವೀಣಾ ಮಾಣಿಕ, ಅನೀಲಗುಂಡಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಬಾಬುರಾವ್‌ ಮಲ್ಕಾಪುರೆ, ಸುಭಾಶ ಕಲ್ಲೂರ ತಾಲೂಕಿನ ವಿವಿಧ ಶಾಲೆಯ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.