ವಿಘ್ನಗಳ ದಾಟಿ ಮುನ್ನಡೆದರೆ ಯಶಸ್ಸು
Team Udayavani, Nov 21, 2017, 12:19 PM IST
ಬೀದರ: ಗ್ರಾಮಗಳು ಕೇವಲ ವಿಸ್ತಾರವಾಗದೇ ವಿಕಾಸವಾಗಬೇಕು. ಜನರು ಮನಸು ಸಂಕುಚಿತವಾಗಿರದೇ ವಿಶಾಲ ಮತ್ತು ಉದಾರವಾಗಿದ್ದಾಗ ಮಾತ್ರ ಇದು ಸಾಧ್ಯವಾಗುತ್ತದೆ ಎಂದು ಅಕ್ಕ ಅನ್ನಪೂರ್ಣ ತಾಯಿ ಹೇಳಿದರು.
ರಾಜಗೀರಾ ಗ್ರಾಮದಲ್ಲಿ ಗ್ರಾಮ ವಿಕಾಸ ಸಮಿತಿ ಹಮ್ಮಿಕೊಂಡಿದ್ದ “ಜೀವನ ದರ್ಶನ’ ಪ್ರವಚನ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಜೀವನದಲ್ಲಿ ಯಾವುದೂ ಶಾಶ್ವತವಾದದ್ದಲ್ಲ. ಇರುವಷ್ಟು ದಿನ ಎಲ್ಲರ ಜೊತೆ ಚೆನ್ನಾಗಿದ್ದುಕೊಂಡು ಒಳ್ಳೆಯ ಕಾಯಕಗಳನ್ನು ಮಾಡುತ್ತಿರಬೇಕು. ಒಳ್ಳೆ ಕೆಲಸಗಳಿಗೆ ವಿಘ್ನಗಳು ಎದುರಾಗುವುದು ಸಹಜ. ಆದರೆ, ಅವುಗಳಿಗೆ ಹೆದರದೇ ಮುನ್ನಡೆದರೆ ಯಶಸ್ಸು ನಿಶ್ಚಿತ ಎಂದು ಹೇಳಿದರು
ಸಾಮಾಜಿಕ ಕಾರ್ಯಕರ್ತ ರಾಜಶೇಖರ ಹುಬ್ಬಳ್ಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮದ ಯುವ ಸಮೂಹ ಯಾವುದೇ ಜಾತಿಯನ್ನದೇ ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗಾಗಿ ಗ್ರಾಮ ವಿಕಾಸ ಸಮಿತಿಯನ್ನು ರಚಿಸಿ ಪ್ರವಚನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಇತರ ಗ್ರಾಮಗಳಿಗೆ ಮಾದರಿಯಾಗಿದೆ ಎಂದರು.
ರಮೇಶ ಮಠಪತಿ ಮಾತನಾಡಿದರು. ಬಸವರಾಜ ರೆಡ್ಡಿ ಷಟ್ಸ್ಥಲ ಧ್ವಜಾರೋಹಣ ನೆರವೇರಿಸಿದರು. ಸಂತೋಷಿ ಮಠಪತಿ ವಚನ ಗಾಯನ ನಡೆಸಿಕೊಟ್ಟರು. ಶಿವಾನಂದ ದೇಶಪಾಂಡೆ ಸ್ವಾಗತಿಸಿದರು. ಅಶೋಕ ಚಿಂತಾ ವಂದಿಸಿದರು. ಉದ್ಯಮಿಗಳಾದ ಜಯರಾಜ ಖಂಡ್ರೆ, ರಾಚಪ್ಪಾ ಪಾಟೀಲ, ಗುರಪ್ಪಾ ಹತ್ತಿ, ಡಾ| ನೀಲಕಂಠ ಚೆನಶೆಟ್ಟಿ, ಗೋಪಾಲಸಿಂಗ್ ಠಾಕೂರ, ಲೊಕೇಶ ವರವಟ್ಟೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ