ಅನುಭವ ಮಂಟಪ ಸೈದ್ಧಾಂತಿಕ ಸಂಸತ್ತು


Team Udayavani, Dec 11, 2017, 12:30 PM IST

bid-2.jpg

ಬೀದರ: ಬಸವಾದಿ ಶರಣರು ಪ್ರಜಾಸತ್ತೆಯ ಹರಿಕಾರರಾಗಿದ್ದು, ಅವರು ಸ್ಥಾಪಿಸಿದ ಅನುಭವ ಮಂಟಪವೆಂದರೆ ಸೈದ್ಧಾಂತಿಕ ಪಾರ್ಲಿಮೆಂಟ್‌. ಮಹಿಳೆಯರಿಗೆ ಮೀಸಲಾತಿ ನೀಡಿದ ಪಾರ್ಲಿಮೆಂಟ್‌ ಎಂದರೆ ಅದು ಅನುಭವ ಮಂಟಪ ಎಂದು ಚಿತ್ರದುರ್ಗ ಮುರುಘಾಮಠದ ಡಾ| ಶಿವಮೂರ್ತಿ ಶರಣರು ನುಡಿದರು.

ನಗರದ ಕರ್ನಾಟಕ ಫಾರ್ಮಸಿ ಕಾಲೇಜು ಆವರಣದಲ್ಲಿ ಬಸವ ದರ್ಶನ ಪ್ರವಚನ ಸಮಿತಿ ಆಯೋಜಿಸಿದ್ದ ಪ್ರವಚನ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ವೈದಿಕರ ಜಪ ದೇವಸ್ಥಾನವಾದರೆ, ಶ್ರೀಮಂತರ ಜಪ ಶಾಂತಿ, ಸಹನೆ ಸಮಾಧಾನ.

ದಲಿತರು, ಶೋಷಿತರ ಜಪ ಸಾಮಾಜಿಕ ನ್ಯಾಯದ ಸಮತೆಯ ಸ್ಥಾನ. ಲಿಂಗಾಯತರ ಜಪ ಸ್ವತಂತ್ರ ಧರ್ಮದ ಸ್ಥಾನಮಾನ ಎಂದು ಹೇಳಿದರು. ಭಾರತದಲ್ಲಿ ಶೋಷಿತರು, ದಲಿತರು, ನಿಮ್ನ ವರ್ಗದವರು ಹೆಚ್ಚು ಸಂಖ್ಯೆಯಲ್ಲಿದ್ದಾರೆ.
 
ಅವರೆಲ್ಲರಿಗೂ ಸಾಮಾಜಿಕ ಸ್ಥಾನಮಾನ ಬೇಕಿದೆ. ಅಂಬೇಡ್ಕರ ಸಾಮಾಜಿಕ ನ್ಯಾಯಕ್ಕೆ ಹೋರಾಡಿದರೂ ಅದು ಇವತ್ತಿಗೂ ಸಾಧ್ಯವಾಗುತ್ತಿಲ್ಲ. ಬಸವಣ್ಣನಂತಹ ಮೇಧಾವಿಗಳು 900 ವರ್ಷಗಳ ಹಿಂದೆಯೇ ಇಂತಹ ಕಾರ್ಯಕ್ಕೆ ಮುಂದಾಗಿದ್ದರು ಎಂದರು.

ಶ್ರೀ ನಿಜಗುಣಾನಂದ ಮಹಾಸ್ವಾಮೀಜಿ ಮಾತನಾಡಿ, ದೇಶದಲ್ಲಿ ಧರ್ಮ ರಾಜಕಾರಣ ನಡೆಯುತ್ತಿದೆ. ಈ ಕುರಿತು ಗಂಭೀರ ಚಿಂತನೆ ಮಾಡಬೇಕು ಎಂದರು. ಭಾಲ್ಕಿಯ ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ನಮ್ಮದು ನಡೆ ನುಡಿ ಸಿದ್ಧಾಂತದ ತತ್ವ, ವಚನ ಸಾಹಿತ್ಯದೊಂದಿಗೆ,
ಅಂತರಂಗದೊಂದಿಗೆ ಸಂಬಂಧ ಬೆಳೆಸಿಕೊಳ್ಳಬೇಕು ಎಂದು ನುಡಿದರು. 

ಹುಲಸೂರಿನ ಶಿವಾನಂದ ಶ್ರೀಗಳು ಮಾತನಾಡಿ, ಒಳಸುಖ ನಡುಸುಖ, ಹೊರಸುಖ, ಪರಿಪೂರ್ಣ ಎನ್ನುವ ನಾಲ್ಕು ಸುಖಗಳಿದ್ದು, ನಿಜಗುಣಾನಂದ ಸ್ವಾಮಿಗಳ ಪ್ರವಚನ ಕೇಳಿ ಆನಂದಿಸಿದವರು ಪರಿಪೂರ್ಣ ಸುಖೀಗಳು. ಲಿಂಗಾಯತ ಧರ್ಮ ಸ್ವತಂತ್ರತೆಗಾಗಿ ಬಸವ ಲಿಂಗಾಯತ ಸ್ವಾಮಿಗಳ ಸಂಖ್ಯೆ ಕಡಿಮೆ ಇದ್ದರೂ ಬಸವ ತತ್ವನಿಷ್ಟ ಲಿಂಗಾಯತ ಜನರ ಸಂಖ್ಯೆ ಜಾಸ್ತಿಯಿದೆ. ಬೀದರಗೆ ಬಸವ ಜಿಲ್ಲೆ ಎಂದು ನಾಮಕರಣ ಮಾಡಬೇಕು ಎಂದರು.

ಅಥಣಿಯ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ವಿಚಾರವೆಂದರೆ ಎಲ್ಲರಿಗೂ ಇಷ್ಟ, ಆಚರಣೆಗೆ ತರುವುದು ಕಷ್ಟ. ಬಸವಣ್ಣ ಪರಿಪೂರ್ಣ ವ್ಯಕ್ತಿತ್ವ ಹೊಂದಿದವರಾಗಿದ್ದು, ಅವರು ಮೊಟ್ಟಮೊದಲ ಸ್ವತಂತ್ರ ವಿಚಾರಧಾರೆಯವರು. ಯುವಕರಿಗೆ ಸೇವೆ ಸಲ್ಲಿಸಲು ಪ್ರೋತ್ಸಾಹ ನೀಡಿದರೆ ಹುಲಿಗಳಾತ್ತಾರೆ. ಇಲ್ಲವಾದಲ್ಲಿ ನರಿಗಳಾಗುತ್ತಾರೆ ಎಂದು ಹೇಳಿದರು.

ಅಕ್ಕ ಅನ್ನಪೂರ್ಣ ತಾಯಿ ಮಾತನಾಡಿ, ಕಲ್ಯಾಣ ರಾಜ್ಯದ ಜ್ಯೋತಿ ಪ್ರಜ್ವಲಿಸುತ್ತಿದೆ. ವಚನಗಳ ಮಳೆಯಿಂದ ನಮ್ಮೆಲ್ಲರ ಮನದ ಕೊಳೆ ತೊಳೆಯಬೇಕು. ಮಗು ಹುಟ್ಟಿದಾಗಿ ನಿಂದ ಸಾಯುವತನಕ ಲಿಂಗಾಯತ ಧರ್ಮದ ಆಚಾರ ವಿಚಾರ ಮೈಗೂಡಿಸಿಕೊಳ್ಳಬೇಕು. ಜೀವನದಲ್ಲಿ ಗಟ್ಟಿ ನಿರ್ಧಾರ ಮಾಡಿ ಬಸವ ತತ್ವ ಪಾಲನೆ ಮಾಡಬೇಕು ಎಂದು ಕರೆ ನೀಡಿದರು.

ಡಾ| ಗಂಗಾಂಬಿಕಾ ಅಕ್ಕ ಮಾತನಾಡಿ, ಶರಣ ಸಂಸ್ಕೃತಿಯ ಉಳಿವು ಮಹಿಳೆಯರ ಕೈಯಲ್ಲಿದೆ. ಮಹಿಳೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂದರು. ಅಧ್ಯಕ್ಷತೆ ವಹಿಸಿದ್ದ ಬಸವರಾಜ ಧನ್ನೂರ ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮ. ಈ ಪ್ರವಚನದಲ್ಲಿ ಎಲ್ಲ ಧರ್ಮದವರು ಪಾಲ್ಗೊಂಡಿದ್ದಾರೆ. ಧರ್ಮಾಧಿಕಾರಿಗಳು ಯಾರ ಹಂಗಿನಲ್ಲಿಯೂ ಇರಬಾರದು. ನಮ್ಮ ಧರ್ಮ ಆ ಕಡೆ ಈ ಕಡೆ ಚೆಲ್ಲಾಪಿಲ್ಲಿಯಾಗಿದೆ. ಇನ್ನು ಮುಂದೆ ನಾವು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಬೇಕು. ಸ್ವತಂತ್ರ ಧರ್ಮಕ್ಕಾಗಿ ಪ್ರತಿಯೊಬ್ಬರೂ ಹೋರಾಡಬೇಕು. ಬಸವಣ್ಣನವರ ತತ್ವವನ್ನು ಎಲ್ಲರೂ ಅಳವಡಿಸಿಕೊಳ್ಳೋಣ. ಬಸವ ಕಾಯಕಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.

ಶಾಸಕ ರಹೀಮ್‌ ಖಾನ್‌, ಸೂರ್ಯಕಾಂತ ನಾಗಮಾರಪಳ್ಳಿ, ಬಿ.ನಾರಾಯಣ, ಬಸವರಾಜ ಬುಳ್ಳಾ ಹಾಗೂ ಸಂಗೀತ ಸೇವೆ ನೀಡಿದ ವೈಜಿನಾಥ ಸಜ್ಜನಶೆಟ್ಟಿ, ಚನ್ನಬಸಪ್ಪ ನೌಬಾದೆ ಅವರನ್ನು ಸನ್ಮಾನಿಸಲಾಯಿತು. ಮಲ್ಲಿಕಾರ್ಜುನ ಸ್ವಾಮೀಜಿ ಬರೆದ “ಕಿನ್ನರಿ ಬೊಮ್ಮಯ್ಯನ ವಚನಗಳ ವ್ಯಾಖ್ಯಾನ’ ಪುಸ್ತಕವನ್ನು ಮತ್ತು ಕಲಾವಿದ ಚ.ಭೀ. ಸೋಮಶೆಟ್ಟಿ ರಚಿಸಿರುವ ಬಸವಣ್ಣನವರ ಭಾವಚಿತ್ರವನ್ನು ಚಿತ್ರದುರ್ಗ ಶ್ರೀಗಳು ಬಿಡುಗಡೆ ಮಾಡಿದರು. ಪ್ರಭುರಾವ್‌ ವಸಮತೆ ಸ್ವಾಗತಿಸಿದರು, ಸುರೇಶ ಚನಶೆಟ್ಟಿ ನಿರೂಪಿಸಿದರು, ಶರಣಪ್ಪ ಮಿಠಾರೆ ವಂದಿಸಿದರು.

ಸಂವಿಧಾನ ಧರ್ಮ ಗ್ರಂಥವಾಗಲಿ ಕರ್ನಾಟಕದಲ್ಲಿ ಧರ್ಮ ಸಂಸತ್‌ ನಡೆದು, ಅಸ್ಪ್ರಶ್ಯತೆ ನಿವಾರಣೆ ಆಗಬೇಕೆಂಬ ಕುರಿತು ಚರ್ಚೆಯಾಯಿತು. ಆದರೆ, ಈ ನೆಲದಲ್ಲಿ ಬಸವಾದಿ ಪ್ರಥಮರು ಅಸ್ಪ್ರಶ್ಯತೆ ನಿವಾರಣೆ ಮಾಡಿ ಸಮಾನತೆ ಧಾರಿತ ಧರ್ಮ ಕಟ್ಟಿದ ಕುರಿತು ಮಾತೆತ್ತಿಲ್ಲ. ವೈದಿಕ ಪರಂಪರೆಯವರು ದೇಶದೊಳಗೆ ಸಂವಿಧಾನ ಬದಲಾವಣೆ ಮಾಡಲು ಬಯಸುತ್ತಿದ್ದಾರೆ. 

ಪುರೋಹಿತರು ಆರ್ಯ, ವಿಪ್ರ, ಹಿಂದೂ ಎನ್ನುವ ತಳಹದಿ ಮೇಲೆ ಆಳುತ್ತಿದ್ದಾರೆ. ಹಿಂದೂ ಎನ್ನುವ ಶಬ್ದದ ಧರ್ಮವಾದರೆ ನಾವು ಒಪ್ಪುವುದಿಲ್ಲ. ರಾಜಕಾರಣಿಗಳು ಪಕ್ಷಾತೀತವಾಗಿ ಬಸವಣ್ಣನ ಕಾರ್ಯಕ್ಕೆ ಕೈ ಜೋಡಿಸಬೇಕು. ಸಂವಿಧಾನ ಧರ್ಮ ಗ್ರಂಥವಾಗಬೇಕು. ಈ ದೇಶವನ್ನು ಉಳಿಸಿದವರು ಬುದ್ಧ-ಬಸವ-ಅಂಬೇಡ್ಕರ ಎನ್ನುವ ಸತ್ಯ ಅರಿಯಬೇಕು.
ಶ್ರೀ ನಿಜಗುಣಾನಂದ ಸ್ವಾಮಿಜಿ 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.