ಹೆಣ್ಣಿನ ತ್ಯಾಗ ಎಲ್ಲಕ್ಕೂ ಮಿಗಿಲು: ಬಾಳೇಕುಂದ್ರಿ


Team Udayavani, Jan 8, 2018, 12:40 PM IST

gul-8.jpg

ಬೀದರ: ಮನುಷ್ಯ ಹುಟ್ಟಿನಿಂದ ಸಾಯುವವರೆಗೆ ಹೆಣ್ಣಿನ ಆಸರೆಯಲ್ಲಿ ಬದುಕುವನು. ಹೆತ್ತು ಧರೆಗಿಳಿಸಿ, ನಂತರ ಸತ್ತ ಮೇಲೂ ಭೂಮಿ ರೂಪದಲ್ಲಿ ತನ್ನೊಡಲಲ್ಲಿ ಕುಳ್ಳಿರಿಸಿಕೊಳ್ಳುವ ಹೆಣ್ಣಿನ ತ್ಯಾಗ ಮಿಗಿಲಾದದ್ದು. ಆದರೂ ಹೆಣ್ಣನ್ನು ಕುಟುಂಬದ ಕಣ್ಣಾಗಿ ಭಾವಿಸದೇ ಹುಣ್ಣು ಎಂದು ನೋಡುವುದು ದುರಂತ ಎಂದು ಖ್ಯಾತ ಚಿಂತಕಿ ಡಾ| ವಿಜಯಲಕ್ಷ್ಮೀ ಬಾಳೇಕುಂದ್ರಿ ಕಳವಳ ವ್ಯಕ್ತಪಡಿಸಿದರು.

ನಗರದ ಬಿವಿ ಭೂಮರೆಡ್ಡಿ ಕಾಲೇಜು ಮೈದಾನದಲ್ಲಿ ರವಿವಾರ ವಿಕಾಸ ಅಕಾಡೆಮಿ ಜಿಲ್ಲಾ ಸಮಿತಿ ಹಮ್ಮಿಕೊಂಡಿದ್ದ ಜ್ಞಾನ ವಿಕಾಸ ಸಂಗಮ ಕಾರ್ಯಕ್ರಮ ಉದ್ಘಾಟಿಸಿ “ವಾತ್ಸಲ್ಯ ಜಗದ ಬೆಳಕು ಮಾತೆ’ ವಿಷಯ ಕುರಿತು ಅವರು ಉಪನ್ಯಾಸ ನೀಡಿದರು. ಹೆಣ್ಣಿಲ್ಲದೆ ವಿಶ್ವ ನಿರ್ಮಾಣವೇ ಅಸಾಧ್ಯ. ಇಂದು ಭ್ರೂಣ ಹತ್ಯೆಯಿಂದ 10 ವರ್ಷದಲ್ಲಿ 10 ಕೋಟಿ ಹೆಣ್ಣು ಮಕ್ಕಳು ಕಡಿಮೆಯಾಗಿದ್ದಾರೆ. ಈ ಕೃತ್ಯದಲ್ಲಿ ವೈದ್ಯರ ಪಾಲು ಸಹ ಇದೆ ಎಂದರು.

ತಾಯಿ ಇರುವ ಮನೆ ಅದು ಅರಮನೆಗೆ ಸಮಾನ. ಆಕೆ ಇಲ್ಲದ ಮನೆ ಅದು ಬರೀ ಮರಳು ಮನೆಯಷ್ಟೆ. ಹಬ್ಬ, ಹರಿದಿನಗಳು, ಸಂಪ್ರದಾಯ ಉತ್ಸವಗಳು, ಪೂಜಾದಿ ಕಾರ್ಯಗಳು ನಡೆಯಲು ಕಡ್ಡಾಯವಾಗಿ ಹೆಣ್ಣು ಇರಲೇ ಬೇಕು. ಆದರೆ, ಇಂದಿನ ದಿನಮಾನಗಳಲ್ಲಿ ಹೆಣ್ಣಿಗೆ ನಮಸ್ಕಾರ ಮಾಡುವುದಿರಲಿ, ಆಕೆಯನ್ನೇ ನಾಶ ಮಾಡಲು ಹೊರಟಿರುವ ಪರಿ ದಾನವರಿಗಿಂತಲೂ ಕಡುಕಷ್ಟವಾದ ಬೆಳವಣಿಗೆ ಎಂದು ವಿಷಾದಿಸಿದರು.

ಹೆಣ್ಣು ವಾತ್ಸಲ್ಯ ಹಾಗೂ ಮಮಕಾರದ ಸಾಕಾರ ಮೂರ್ತಿ, ಆಕೆಯ ಎದೆ ಹಾಲಿನಲ್ಲಿ ಇಡೀ ಜಗತ್ತನ್ನು ಮೀರಿಸುವ ಅಗಾಧ ಶಕ್ತಿ ತುಂಬಿದೆ. ಹುಟ್ಟಿನಿಂದಲೇ ಆಕೆಯಲ್ಲಿ ಆತ್ಮವಿಶ್ವಾಸ ಹಾಗೂ ಸೌಂದರ್ಯ ಭಾವ ಬೆಳೆದು ಬಂದಿದೆ. ಆದರೆ, ಇಂದು ಹೆಣ್ಣನ್ನು ನಾಶ ಮಾಡಲು ಮತ್ತೂಂದು ಹೆಣ್ಣು ವೈದ್ಯರೊಂದಿಗೆ ಸೇರಿ ಹತ್ತು ವರ್ಷಗಳಲ್ಲಿ 10 ಕೋಟಿ ಹೆಣ್ಣು ಮಕ್ಕಳ ಭ್ರೂಣ ನಾಶ ಮಾಡಿರುವುದು ಕಳವಳಕಾರಿ ಸಂಗತಿ ಎಂದರು.

ಇಂದು ತಾಯಿ ತನ್ನ ಮಗುವಿಗೆ ಸಂಸ್ಕಾರದ ವಾತ್ಸಲ್ಯ ತೋರಬೇಕಿದೆ. ಉತ್ತಮ ಶಿಕ್ಷಣ ನೀಡಿ, ಸ್ವಾಭಿಮಾನಿ ಹಾಗೂ ದೇಶಪ್ರೇಮಿ ಪುತ್ರನನ್ನಾಗಿ ಮಾಡಬೇಕಿದೆ. ಬಾಲ್ಯದಲ್ಲಿ ಮಕ್ಕಳು ಮಾಡುವ ಉತ್ತಮ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ, ತಪ್ಪು ಎಸಗುವಾಗ ತಿದ್ದುವ ಕಾರ್ಯ ಸಹ ಆಕೆ ಮಾಡುವುದು ಅನಿವಾರ್ಯ. ಸನ್ಮಾರ್ಗದೆಡೆಗೆ ಸಾಗಲು ಮಕ್ಕಳಿಗೆ ತಾಯಿಯೇ ಪ್ರೇರಣೆ. ಆಕೆ ಉತ್ತಮ ಸಮಾಜ ನಿರ್ಮಾಣದಲ್ಲೂ ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.

ವಿಕಾಸ ಅಕಾಡೆಮಿ ಮುಖ್ಯ ಸಂಯೋಜಕ, ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಮಾತನಾಡಿ, ಪಾಲಕರು ತಮ್ಮ ಮಕ್ಕಳಿಗೆ ವೈದ್ಯ ಮತ್ತು ಇಂಜಿನಿಯರೇ ಆಗು ಎಂದು ಹೇಳುವ ಮೂಲಕ ಅವರ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದ್ದಾರೆ. ಇಂದು ದೇಶದಲ್ಲಿ 58 ಲಕ್ಷ ಯುವಕರು ಇಂಜಿನಿಯಗಳಿದ್ದು, ಕೇವಲ 5 ಸಾವಿರ ರೂ. ವೇತನದಲ್ಲಿ ದುಡಿಯಲು ಸಿದ್ಧರಿದ್ದಾರೆ. ಶಿಕ್ಷಣ ಜ್ಞಾನಕ್ಕಾಗಿ ಇರಬೇಕೆ ವಿನಹ ನೌಕರರಿಗಾಗಿ ಅಲ್ಲ. ಹಾಗಾಗಿ ನನ್ನ ಮಗ ಕೊಡುವವನಾಗಬೇಕೆ, ಹೊರತು ಬೇಡುವವನಾಗಬಾರದು ಎಂದು ಅತ್ಮಸ್ಥೈರ್ಯ ತಾಯಂದಿರಲ್ಲಿ ಇರಬೇಕು. ಆಗ ಮಾತ್ರ ಭಾರತ ಮಾತೆ ಜಗನ್ಮಾತೆ ಆಗಲು ಸಾಧ್ಯ ಎಂದು ಕರೆ ನೀಡಿದರು.

ಐಎಎಸ್‌ ಪಾಸ್‌ ಆದವರು ಪಂಜರದ ಹಕ್ಕಿಗಳಿದ್ದಂತೆ. ಪ್ರತಿ ಬಾರಿ 12 ಲಕ್ಷ ಯುವಕರು ಐಎಎಸ್‌ಗಾಗಿ ಪ್ರವೇಶ ಪಡೆದರೆ ಈ ಪೈಕಿ ಪಾಸ್‌ ಆಗುವರು 200 ಜನ ಮಾತ್ರ. ಅದರಲ್ಲಿ ಖುಷಿ ಅನುಭವಿಸುವರು 50 ಜನ ಮಾತ್ರ. ತನ್ನಿಷ್ಟದ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಹಾರುವ ಹಕ್ಕಿಗಳಾಗಿ ಬದುಕಬೇಕು ಎಂದು ಕಿವಿ ಮಾತು ಹೇಳಿದರು.

ವಿಜಯಪುರದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಅಕಾಡೆಮಿ ಜಿಲ್ಲಾ ಸಂಚಾಲಕ ಕರ್ನಲ್‌ ಶರಣಪ್ಪ ಸಿಕೆನಪುರೆ, ಗುತ್ತಿಗೆದಾರ ಗುರುನಾಥ ಕೊಳ್ಳುರ್‌, ಗುರುದ್ವಾರಾ ಪ್ರಬಂಧಕ ಕಮಿಟಿ ಅಧ್ಯಕ್ಷ ಬಲಬೀರಸಿಂಗ್‌, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಬಿ.ಜಿ. ಶಟಕಾರ ವೇದಿಕೆಯಲ್ಲಿದ್ದರು. ರೇವಣಸಿದ್ದಪ್ಪ ಜಲಾದೆ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕ ಶಾಂತಕುಮಾರ ಬಿರಾದಾರ ನಿರೂಪಿಸಿದರು. ಕಾಮಶಟ್ಟಿ ಚಿಕಬಸೆ ವಂದಿಸಿದರು. ನಾಟ್ಯಶ್ರೀ ನೃತ್ಯಾಲಯ ಸೇರಿದಂತೆ ಜಿಲ್ಲೆಯ ಇತರೆ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ದೇಶದಲ್ಲಿರುವ 18 ಕೋಟಿ ನಿರುದ್ಯೋಗಿಗಳಿಗೆ ಭತ್ಯೆ ನೀಡುವ ವಿಷಯ ಕುರಿತು ಸಂಸತ್‌ನಲ್ಲಿ ಚರ್ಚೆಯ ವೇಳೆ ಎಲ್ಲ ಸಂಸದರು ಸಹಮತ ವ್ಯಕ್ತಪಡಿಸಿರುವುದು ಬೇಸರದ ಸಂಗತಿ. ನಿರುದ್ಯೋಗಿಗಳಿಗೆ ಭತ್ಯೆ ನೀಡಿದರೆ ಯುವಕರಲ್ಲಿನ ಜ್ಞಾನ, ಬುದ್ದಿ ದುಡಿಮೆ ಸತ್ತು ಹೋಗುತ್ತದೆ. ದುಡಿಯುವ ಜನರು ಮನೆಯಲ್ಲಿ ಕುಳಿತರೆ ದೇಶ ಪ್ರಗತಿ ಸಾಧಿಸದು. ಜಗತ್ತಿನ ನಕಲು ಮಾಡಿದರೆ ಭಾರತ ಮುಂದೆ ಬರುವುದಿಲ್ಲ.
 ಬಸವರಾಜ ಪಾಟೀಲ ಸೇಂಡ, ರಾಜ್ಯಸಭಾ ಸದಸ್ಯ

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.