ಪಾರಂಪರಿಕ ನಗರಿಗೆ ಲಗ್ಗೆ ಇಟ್ಟ ಪ್ರವಾಸಿಗರು


Team Udayavani, Jan 16, 2018, 11:34 AM IST

bid-1.jpg

ಬೀದರ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪಾರಂಪರಿಕ ಜಿಲ್ಲೆ ಬೀದರಗೆ ಪ್ರವಾಸಿಗರು ಬರುವ ಸಂಖ್ಯೆ ಕೆಲ ವರ್ಷಗಳಿಂದ ಹೆಚ್ಚುತ್ತಿದೆ. ಸಧ್ಯ ಸಂಕ್ರಾಂತಿ ಹಬ್ಬ ಸೇರಿ ಸಾಲು ಸಾಲು ರಜೆ ಬಂದಿರುವುದರಿಂದ ಸ್ಮಾರಕಗಳ ಖಣಿ ಖ್ಯಾತಿಯ ಬೀದರನಲ್ಲಿ ಪ್ರವಾಸಿಗರ ಸಂಖ್ಯೆ ದುಪ್ಪಟ್ಟಾಗಿದೆ. ಜನರು ಐತಿಹಾಸಿಕ ತಾಣಗಳಲ್ಲಿ ಸುತ್ತಾಡಿ ರಜೆಯ ಮಜಾ ಪಡೆಯುತ್ತಿದ್ದಾರೆ.

ಸೋಮವಾರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಜತೆಗೆ ಶನಿವಾರ, ರವಿವಾರವೂ ರಜೆ ಒಟ್ಟೊಟ್ಟಿಗೆ 3 ದಿನ ರಜೆ ಸಿಕ್ಕಿವೆ. ಹಾಗಾಗಿ ನೌಕರರು ತಮ್ಮ ಕುಟುಂಬ ಸಮೇತ ಪ್ರವಾಸ ಕೈಗೊಂಡಿದ್ದಾರೆ. ಇದರಿಂದ ಬೀದರ ನಗರ ಮಾತ್ರವಲ್ಲ ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿವೆ. ಮಸೀದಿ- ಚರ್ಚ್‌ನಲ್ಲಿ ಹಬ್ಬದ ಸಂಭ್ರಮವಿದ್ದರೆ ಐತಿಹಾಸಿಕ ತಾಣಗಳಲ್ಲಿ ನಿಸರ್ಗದ ವೈಭವ. ಹಾಗಾಗಿ ಜನಜಂಗುಳಿ ಸೇರಿದೆ. ಈ ಬಾರಿ ಹೊರ ರಾಜ್ಯದ ಪ್ರವಾಸಿಗರು ಅಧಿಕವಾಗಿ ಭೇಟಿ ನೀಡಿರುವುದು ವಿಶೇಷವಾಗಿದೆ.

 ತಾಣಗಳಿಗೆ ಪ್ರವಾಸಿಗರ ಲಗ್ಗೆ: ನಗರದ ಐತಿಹಾಸಿಕ ಬಹುಮನಿ ಕೋಟೆ, ಗವಾನ ಮದರಸಾ, ಗುರುನಾನಕ ದೇವಸ್ಥಾನ, ನರಸಿಂಹ ಝರಣಾ, ಅಷ್ಟೂರಿನ ಗುಂಬಜ್‌ಗಳು, ಬಸವಕಲ್ಯಾಣದ ಬಸವಾದಿ ಶರಣರ ಸ್ಮಾರಕಗಳು, ನಾರಾಯಣಪೂರ ಮಂದಿರ, ಉಮಾಪೂರ ಮತ್ತು ಜಲಸಂಗಿ ದೇವಸ್ಥಾನ ಸೇರಿದಂತೆ ಅನೇಕ ಸ್ಮಾರಕಗಳನ್ನು ಹೊಂದಿರುವ ಬೀದರ ಜಿಲ್ಲೆಗೆ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ಒತ್ತಡದ ಬದುಕಿನಿಂದ ಬೇಸತ್ತವರು ತಮ್ಮ ಕುಟುಂಬ ಸಮೇತ ಕಣ್ಮನ ಸೆಳೆಯುವ ತಾಣಗಳನ್ನು ವೀಕ್ಷಿಸಿ ಆನಂದಿಸುತ್ತಿದ್ದಾರೆ.

ಪ್ರವಾಸಿ ತಾಣಗಳಿಗೆ ಸಾಮಾನ್ಯ ದಿನಗಳಲ್ಲಿ 500ರಿಂದ 600ರ ವರೆಗೆ ಪ್ರವಾಸಿಗರು ಬರುತ್ತಿದ್ದರು. ಆದರೆ, ಸತತ ನಾಲ್ಕು ದಿನಗಳ ರಜೆ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ 2 ಸಾವಿರದ ವಗೆರೆ ಏರಿಕೆಯಾಗಿತ್ತು. ಕಳೆದು ಐದು ವರ್ಷಗಳಿಗೆ ಹೋಲಿಸಿದರೆ ಪ್ರವಾಸಿಗರ ಸಂಖ್ಯೆ ಅತ್ಯಧಿಕ ಎನ್ನಬಹುದು. ಸಾಲು ರಜೆಗಳಿದ್ದರೆ ಈ ಸಂಖ್ಯೆ 1ಸಾವಿರದ ವರೆಗೆ ಇರುತಿತ್ತು. ಬಸವಕಲ್ಯಾಣ ಹೊರತುಪಡಿಸಿದರೆ ಉಳಿದ ತಾಣಗಳೆಲ್ಲವೂ ಒಂದಕ್ಕೊಂದು ಸಮೀಪದಲ್ಲಿಯೇ ಇರುವುದು ಯಾತ್ರಿಗಳಿಗೆ ಹೆಚ್ಚು ಅನುಕೂಲ.

ಐತಿಹಾಸಿಕ ಕೋಟೆ: ಪಾರಂಪರಿಕ ಬಹುಮನಿ ಕೋಟೆ, ಜಲಸಂಗಿ, ನಾರಾಯಣಪೂರ ದೇವಸ್ಥಾನಗಳಿಗೆ ರಜೆಯ ಪ್ರತಿ ದಿನ ಸಾವಿರಾರು ಪ್ರಯಾಣಿಕರು ಬಂದು ದಶ್ಯ ವೈಭವ ಕಣ್ತುಂಬಿಸಿಕೊಂಡರು. ರಾಜ್ಯದ ವಿವಿಧ ಜಿಲ್ಲೆ ಸೇರಿದಂತೆ ಮಹಾರಾಷ್ಟ್ರ, ತೆಲಂಗಾಣ, ಪಂಜಾಬ್‌ ಮತ್ತಿತರ ಹೊರ ರಾಜ್ಯಗಳ ಯಾತ್ರಿಗಳು ಐತಿಹಾಸಿಕ ಕೋಟೆಯ ವಿವಿಧ ಸ್ಥಳ ಮತ್ತು ಸ್ಮಾರಕಗಳನ್ನು ವೀಕ್ಷಿಸಿದರು. ಗೈಡ್‌ಗಳ ಕೊರತೆ ಜನರಲ್ಲಿ ನಿರಾಸೆಯನ್ನುಂಟು ಮಾಡಿತು. ವಸತಿ ಗೃಹ, ಹೊಟೇಲ್‌ ಗಳು ತುಂಬಿರುತ್ತಿವೆ

ಬೀದರ ಕೋಟೆ ಆಕರ್ಷಣೀಯ ಹೈದ್ರಾಬಾದನ ಗೋಲ್ಕೊಂಡ ಕೋಟೆ ಸೇರಿದಂತೆ ಪ್ರವಾಸಿ ತಾಣಗಳನ್ನು ಸಾಕಷ್ಟು ಬಾರಿ ವೀಕ್ಷಿಸಿದ್ದೇವೆ. ಬೀದರನ ಕೋಟೆ ಸಹ ಹೈದ್ರಾಬಾದನಂತೆ ನೋಡುಗರನ್ನು ಆಕರ್ಷಿಸುತ್ತಿದೆ. ಸರಿಯಾಗಿ ಪೋಷಣೆ ಮಾಡಿರುವುದೂ ಖುಷಿ ತಂದಿದೆ. ಜಿಲ್ಲೆಯ ವಿವಿಧ ತಾಣಗಳನ್ನು ವೀಕ್ಷಿಸುತ್ತ ಬಂದಿದ್ದು, ಮನಸ್ಸಿಗೆ ಆನಂದ ತಂದಿದೆ.
 ವಿನಾಯಕ, ಪ್ರವಾಸಿ ಹೈದ್ರಾದರಾಬಾದ

ನೋಡಬೇಕೆನ್ನುವ ತಾಣಗಳು ಸಂಕ್ರಾಂತಿ ಹಬ್ಬದಿಂದಾಗಿ ಸಾಲು ಸಾಲು ರಜೆ ಸಿಕ್ಕಿವೆ. ಹಾಗಾಗಿ ಮಕ್ಕಳೊಂದಿಗೆ ಸಮಯ ಕಳೆಯಲು ಇದೊಂದು ಅವಕಾಶ. ಐತಿಹಾಸಿಕ ಕೋಟೆಯನ್ನು ಕಣ್ತುಂಬಿಕೊಳ್ಳಲು ಗೆಳೆಯರ ತಂಡದೊಂದಿಗೆ ಬಂದಿರುವೆ. ಇಲ್ಲಿನ ಸ್ಮಾರಕಗಳನ್ನು ಎಷ್ಟು ಬಾರಿ ನೋಡಿದರೂ ನೋಡಬೇಕೆನ್ನಿಸುತ್ತದೆ. 
 ಬಸವರಾಜ, ಪ್ರವಾಸಿ ಔರಾದ

„ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.