ವಿಶ್ವಶಕ್ತಿ ಸಂಕಲ್ಪಕ್ಕೆ ಕೈಜೋಡಿಸಲು ಕರ


Team Udayavani, Feb 15, 2018, 10:23 AM IST

bid-2.jpg

ಬೀದರ: ಭಾರತ ವಿಶ್ವ ಶಕ್ತಿಯಾಗಿ ಹೊರ ಹೊಮ್ಮಲು ಎಲ್ಲರು ಕೈ ಜೋಡಿಸುವ ಅವಶ್ಯಕತೆ ಇದೆ ಎಂದು ವಾಗ್ಮಿ ಚಕ್ರವರ್ತಿ
ಸೂಲಿಬೆಲೆ ಕರೆ ನೀಡಿದರು. ನಗರದ ಕರ್ನಾಟಕ ಕಾಲೇಜು ಆವರಣದಲ್ಲಿ ವಿಕಾಸ ಅಕಾಡೆಮಿ ಜಿಲ್ಲಾ ಘಟಕದಿಂದ ನಡೆದ “ಗಣ್ಯರೊಂದಿಗೆ ಸಂವಾದ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, ಮೊದಲಿನ 50 ವರ್ಷಗಳ ಕಾಲ ಭಾರತ ಆಮೆಗತಿಯಲ್ಲಿ
ಅಭಿವೃದ್ಧಿ ಕಂಡಿದೆ. ಬ್ರಿಟಿಷರು ಈ ದೇಶವನ್ನು ಆರು ದಶಕಗಳ ವರೆಗೆ ಆಳಿ ಮಾನಸಿಕವಾಗಿ ದುರ್ಬಲವಾಗಿಸಿದ್ದಾರೆ. ಇಲ್ಲಿ ಆಧ್ಯಾತ್ಮಿಕ ಶಕ್ತಿ ಬಲಿಷ್ಠವಾಗಿರುವುದರಿಂದ ಮತ್ತೆ ಜಗತ್ತು ನಿಬ್ಬೆರಗಾಗುವ ರೀತಿ ಬೆಳೆಯುತ್ತಿದೆ. ಪ್ರಗತಿಪರ ಮತ್ತು ಪ್ರಗತಿಶೀಲ ರಾಷ್ಟ್ರಗಳೊಂದಿಗೆ ಉತ್ತಮ ಬಾಂಧವ್ಯವಿರಿಸಿ ಶತ್ರು ರಾಷ್ಟ್ರಗಳ ಮನಸ್ಸು ಸಹ ಪರಿವರ್ತಿಸಿದೆ ಎಂದರು.

ಜಾಗತಿಕ ಯುವ ಪೀಳಿಗೆ ಬದಲಾವಣೆಯತ್ತ ಧಾವಿಸಿರುವಾಗ ನಮ್ಮ ಯುವ ಸಂಪತ್ತು ಮುಗ್ಗರಿಸಿದೆ. ಪಾಶ್ಚಾತ್ಯರ ಅನುಕರಣೆ ಹಾಗೂ ತಾಂತ್ರಜ್ಞಾನದ ದುರುಪಯೋಗದಿಂದ ಹೊರಬಂದು ದೇಶಾಭಿಮಾನ ಬೆಳೆಸಿಕೊಂಡು ಇಲ್ಲಿ ಕಲಿತ ಜ್ಞಾನ ಬೇರೆಡೆ ಖರ್ಚು ಮಾಡುವುದರ ಬದಲು ಇಲ್ಲೆ ಉಳಿದು ಹೊಸ ಅವಿಸ್ಕಾರದತ್ತ ಮುನ್ನಡೆಯಬೇಕಿದೆ. ಇದಕ್ಕೆ ಹಿರಿಯರಾದವರು ಮಾರ್ಗದರ್ಶನ ನೀಡಿ ಸಂಸ್ಕಾರ ಹಾಗೂ ಸಂಸ್ಕೃತಿ ಜೊತೆಗೆ ವಿಜ್ಞಾನ ಮತ್ತು ತತ್ವಜ್ಞಾನದ ಆಸರೆಯಲ್ಲಿ ಮಕ್ಕಳನ್ನು ಬೆಳೆಸಬೇಕಿದೆ ಎಂದು ಹೇಳಿದರು.

ಇಂದು ಈ ದೇಶದ ಎಲ್ಲ ಅಂಗಾಂಗಗಳು ಚೆನ್ನಾಗಿದ್ದರೂ ಕಾಶ್ಮಿರವೆಂಬ ಹಲ್ಲು ಅಲುಗಾಡುತ್ತಿದೆ. ಅದನ್ನು ಸರಿಪಡಿಸುವ ಕಾರ್ಯ ಸಹ ನಡೆಯುತ್ತಿದೆ. ಸ್ವಾತಂತ್ರ್ಯ ಬಂದು ಏಳು ದಶಕಗಳು ಕಳೆದರೂ ಭಾರತ ಶತ ಪ್ರತಿಶತ ಅಭಿವೃದ್ಧಿ ಕಾಣಲು ವಿಫಲವಾಗಿದೆ. ಅಪ್ರಾಮಾಣಿಕ ರಾಜಕಾರಣಿಗಳ ಹಿತಾಸಕ್ತಿಯಿಂದ ದೇಶ ಅನೇಕ ಸಮಸ್ಯೆಗಳಿಗೆ ಬಲಿಯಾಗಿ ತನ್ನ ಅಂತಸತ್ವ ಕಳೆದುಕೊಂಡಿತ್ತು. ಈಗ ಒಳ್ಳೆಯ ಕಾಲ ಕೂಡಿ ಬಂದಿದ್ದು, ಈಗಿರುವ ಕೇಂದ್ರ ಸರ್ಕಾರದ ಧೋರಣೆಗೆ ಜಗ ಮನ್ನಣೆ ಸಿಗುತ್ತಿದೆ. ಇದನ್ನು ಇಲ್ಲಿಯ ವಿಚಾರವಾದಿಗಳು ಅರ್ಥ ಮಾಡಿಕೊಂಡು ಶಕ್ತಿಯುತ ಭಾರತವಾಗಲು ಎಲ್ಲರು ಕೈ ಜೋಡಿಸಬೇಕಾಗಿದೆ ಎಂದರು. 

ವಿಕಾಸ ಅಕಾಡೆಮಿ ವಿಭಾಗೀಯ ಸಂಚಾಲಕ ರೇವಣಸಿದ್ದಪ್ಪ ಜಲಾದೆ ಸ್ವಾಗತಿಸಿದರು. ಕೆಆರ್‌ಇ ಸಂಸ್ಥೆ ಅಧ್ಯಕ್ಷ ಡಾ| ಬಸವರಾಜ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ಜಿಲ್ಲಾಧ್ಯಕ್ಷ ಕರ್ನಲ್‌ ಶರಣಪ್ಪ ಸಿಕೆನಪೂರೆ ವೇದಿಕೆಯಲ್ಲಿದ್ದರು. ಅನೇಕ ಹಿರಿಯರು ಚಕ್ರವರ್ತಿ ಜೊತೆ ಸಂವಾದ ನಡೆಸಿದರು.

ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಬಿ.ಜಿ. ಶಟಕಾರ, ರೈತ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನಶಟ್ಟಿ, ಸಾಹಿತಿ ಪ್ರೊ| ದೇವೇಂದ್ರ ಕಮಲ, ಜಿಎಸ್‌ಡಿ ಕಾಲೇಜಿನ ಪ್ರಾಚಾರ್ಯ ಡಾ| ಅಶೋಕ ಬಿರಾದಾರ, ಚಿದಂಬರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ| ಚನ್ನಬಸಪ್ಪ ಹಾಲಹಳ್ಳಿ, ಜಿಪಂ ಮಾಜಿ ಅಧ್ಯಕ್ಷ ಕುಶಾಲ ಪಾಟೀಲ ಗಾದಗಿ, ಉದ್ಯಮಿ ಕುಶಾಲ ಪಾಟೀಲ ಖಾಜಾಪುರ, ಸಾಹಿತಿ ಮಾನಶಟ್ಟಿ ಬೆಳಕೇರಿ, ಗುತ್ತಿಗೆದಾರ ವೀರಶಟ್ಟಿ ಮಣಗೆ ಸೇರಿದಂತೆ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.