ಅಮರೇಶ್ವರ ರಥೋತ್ಸವ ಸಂಪನ್ನ
Team Udayavani, Feb 16, 2018, 3:16 PM IST
ಔರಾದ: ಪಟ್ಟಣದ ಗ್ರಾಮ ದೇವತೆ ಹಾಗೂ ಉದ್ಭವಲಿಂಗ ಅಮರೇಶ್ವರ ರಥೋತ್ಸವ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಅಮರೇಶ್ವರ ಮಂದಿರ ಬಳಿ ಬಸವರಾಜ ದೇಶಮುಖ, ತಹಶೀಲ್ದಾರ ಎಂ. ಚಂದ್ರಶೇಖರ, ಪಪಂ ಸದಸ್ಯ ಕುಮಾರ ದೇಶಮುಖ, ಮಾಜಿ ಜಿಪಂ ಸದಸ್ಯ ವಸಂತ ಬಿರಾದರ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ಅಮರೇಶ್ವರ ಮಂದಿರದಿಂದ ಬಸವೇಶ್ವರ ವೃತ್ತದ ಮುಖ್ಯರಸ್ತೆ ಮಾರ್ಗವಾಗಿ ಅಗ್ನಿಕುಂಡದ ವರೆಗೂ ರಥೋತ್ಸವ ನಡೆಯಿತು.
ಶಾಸಕ ಪ್ರಭು ಚವ್ಹಾಣ, ಬೀದರ ಸಂಸದ ಭಗಂವತ ಖೂಬಾ, ಕಾಂಗ್ರೆಸ್ ಮುಖಂಡ ಡಾ| ಲಕ್ಷ್ಮಣ ಸೋರಳಿಕರ್, ದಯಾನಂದ ಘೂಳೆ, ವೀರೇಶ ಅಲ್ಮಾಜೆ, ಗಜಾನಂದ ಟೀಗೆ, ಆನಂದ ದ್ಯಾಡೆ, ಅನೀಲ ಹೇಡೆ, ಅನೀಲಕುಮಾರ ನಿರ್ಮಳೆ, ಸಂತೋಷ ಚಾಂಡೇಶ್ವರೆ, ಅಮರ ಔರಾದೆ, ಶ್ರೀನಿವಾಸ ಖೂಬಾ, ಶರಣಪ್ಪ ಪಾಟೀಲ್ ರಥೋತ್ಸವದಲ್ಲಿ ಹೆಜ್ಜೆ ಹಾಕಿದರು.
ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣಾ ಹಾಗೂ ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ಪಾಲ್ಗೊಂಡಿದ್ದರು.
ರಂಗೋಲಿ ಸ್ಪಥೆ: ರಥೋತ್ಸವನಿಮಿತ್ತ ಪಟ್ಟಣದ ಅಮರೇಶ್ವರ ದೇವಸ್ಥಾನ ಆಡಳಿತ ಮಂಡಳಿಯಿಂದ ರಂಗೋಲಿ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿತ್ತು. ಶಟಕಾರ ಬಡಾವಣೆ, ದೇಶಮುಖ ಬಡಾವಣೆ ಹಾಗೂ ಇನ್ನಿತರ ಬಡಾವಣೆಯಲ್ಲಿನ ಮಹಿಳೆಯರು, ಯುವತಿಯರು ರಂಗೋಲೆ ಬಿಡಿಸಿ ಜಾತ್ರೆಗೆ ಮೆರಗು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ