ಶಿಕ್ಷಕರ ವೇತನ ತಾರತಮ್ಯ ನಿವಾರಣೆಗೆ ಒತ್ತಾಯ
Team Udayavani, Feb 23, 2018, 12:17 PM IST
ಭಾಲ್ಕಿ: ಕೇಂದ್ರ ಸರ್ಕಾರದ ಕೇಂದ್ರೀಯ ವಿದ್ಯಾಲಯಗಳ ಶಿಕ್ಷಕರಿಗೆ ನೀಡುವ ವೇತನದ ಸಮಾನ ವೇತನವನ್ನು ರಾಜ್ಯ
ಸರ್ಕಾರದ ಅಧೀನದಲ್ಲಿ ನಡೆಯುವ ಶಿಕ್ಷಕರಿಗೂ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘ ಒತ್ತಾಯಿಸಿದೆ.
ಈ ಕುರಿತು ಗುರುವಾರ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರಗೆ ಸಲ್ಲಿಸಿದ ಶಿಕ್ಷಕ ಸಂಘದ ಪದಾಧಿಕಾರಿಗಳು, ದೇಶದ ಬಹುತೇಕ ರಾಜ್ಯಗಳು ಕೇಂದ್ರ ಸರ್ಕಾರ ನಡೆಸುವ ಕೇಂದ್ರೀಯ ವಿದ್ಯಾಲಯದ, ನವೋದಯ ವಿದ್ಯಾಲಯಗಳ ಶಿಕ್ಷಕರಿಗೆ ನೀಡುವ ವೇತನವನ್ನು ತಮ್ಮ ರಾಜ್ಯ ಸರ್ಕಾರದ ಅಧೀನದ ಶಾಲೆಗಳ ಶಿಕ್ಷಕರಿಗೂ ನೀಡುತ್ತಿದ್ದು, ಕರ್ನಾಟಕದಲ್ಲಿ ಇದನ್ನು ಜಾರಿಗೆ ತರಬೇಕೆಂದು ಅನೇಕ ಸಲ ತಮ್ಮ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಈಗಲಾದರೂ ಒಂದೇ ರಾಷ್ಟ್ರ, ಒಂದೇ ಶಿಕ್ಷಣ, ಒಂದೇ ವೇತನ ಎನ್ನುವಂತೆ ರಾಜ್ಯ ಸರ್ಕಾರದ ಅಧಿಧೀನದ ಶಿಕ್ಷಕರಿಗೂ ವೇತನ ನಿಗದಿಪಡಿಸಬೇಕು.
ಅಲ್ಲದೇ 6ನೇ ವೇತನ ಆಯೋಗವು ಕರ್ನಾಟಕ ಸರ್ಕಾರಿ ನೌಕರರಿಗೆ ಶೇ.30ರಷ್ಟು ವೇತನ ಹೆಚ್ಚಳ ಮಾಡಲು ವರಿದ
ನೀಡಿರುವುದಾಗಿ ತಿಳಿಸಿದ್ದೀರಿ. ಆದರೆ ಕೇಂದ್ರ ಮತ್ತು ರಾಜ್ಯದ ಶಿಕ್ಷಕರ ವೇತನದಲ್ಲಿ ಶೇ.67 ವ್ಯತ್ಯಾಸವಿದೆ.
ಆದ್ದರಿಂದ ಶಿಕ್ಷಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ನಡೆಸುವ ಶಾಲೆಗಳ ಶಿಕ್ಷಕರಿಗೆ ನೀಡುವ ವೇತನವನ್ನು ರಾಜ್ಯ ಸರ್ಕಾರ ನಡೆಸುವ ಶಾಲೆಗಳ ಶಿಕ್ಷಕರಿಗೂ ನೀಡಬೇಕು ಎಂದು ಒತ್ತಾಯಿಸಿದರು. ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಗಣಪತಿ ಬೋಚರೆ, ಅಶೋಕ ಸಾವಳೆ, ವೀರಶೆಟ್ಟಿ ಉಮಾ ಸೇರಿದಂತೆ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ