ಸಮಬಾಳು-ಸಮಪಾಲು ತತ್ವ ಪ್ರತಿಪಾದಿಸಿದ್ದ ಶರಣರು


Team Udayavani, Mar 3, 2018, 12:13 PM IST

bid-2.jpg

ಬೀದರ: ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ತತ್ವ ಹಾಗೂ ಸ್ವತ್ಛ ಸಮಾಜದ ಕನಸನ್ನು ಅಂದು ಬಸವಾದಿ ಶರಣರು ಕಂಡಿದ್ದರು. ಆ ಕನಸು ನನಸು ಮಾಡಿಸಿ ತೋರಿಸಿ ವಿಶ್ವಕ್ಕೆ ಶರಣರು ಮಾದರಿಯಾದರು ಎಂದು ಮಾತೆ ಸತ್ಯಾದೇವಿ ನುಡಿದರು.

ನಗರದ ಬಸವ ಮಂಟಪದಲ್ಲಿ ಜಿಲ್ಲಾ ರಾಷ್ಟ್ರೀಯ ಬಸವ ದಳ ಮತ್ತು ಲಿಂಗಾಯತ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಮಾಸಿಕ ಕಲ್ಯಾಣ ಕ್ರಾಂತಿ ಹುಣ್ಣಿಮೆ ಮತ್ತು ಬಸವ ಜ್ಯೋತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಜಾತಿ, ವರ್ಣ ಮತ್ತು ವರ್ಗರಹಿತ ಸಮಾಜ ನಿರ್ಮಾಣಕ್ಕೆ ಬಸವಣ್ಣನವರು ಸಮಗಾರ ಹರಳಯ್ಯನವರ ಮಗ ಶೀಲವಂತನಿಗೂ, ಬ್ರಾಹ್ಮಣರ ಮಧುವರಸರ ಮಗಳು ಲಾವಣ್ಯಳಿಗೂ ಅಂತರ್ಜಾತಿ ಮದುವೆ ಮಾಡಿಸಿದರು. ಇದಕ್ಕಾಗಿ ಅವರನ್ನು ಆನೆ ಕಾಲಿಗೆ ಕಟ್ಟಿ ಎಳೆಹೂಟೆ ಶಿಕ್ಷೆ ವಿ ಧಿಸಲಾಯಿತು. ಶರಣರೆಲ್ಲ ಕಲ್ಯಾಣದಿಂದ ಚದುರಿದರು. ವಚನ ಸಾಹಿತ್ಯವನ್ನು ಸುಡಲಾಯಿತು. ಹೀಗೆ ಕಲ್ಯಾಣ ಕ್ರಾಂತಿಯ ನೆನಪಿಗಾಗಿ ಈ ಹುಣ್ಣಿಮೆಯನ್ನು ಕಲ್ಯಾಣ ಕ್ರಾಂತಿ ಹುಣ್ಣಿಮೆ ಎಂದು ಆಚರಿಸಲಾಗುತ್ತಿದೆ ಎಂದು ಹೇಳಿದರು.

ಸಮಾಜ ಸೇವಕ ದಶಪ್ಪ ಬೋರಗೊಂಡ ಮಾತನಾಡಿ, ಬಸವಾದಿ ಶರಣರ ಷಡ್‌ಗಣಾಧೀಶರಲ್ಲಿ ಶಿವಯೋಗಿ ಸಿದ್ಧರಾಮೇಶ್ವರರು ಕೂಡಾ ಒಬ್ಬರಾಗಿದ್ದರು. ಹಾದಿ ಹಾದಿಗೆ ಗುಡಿಗಳನ್ನು ಕಟ್ಟುತ್ತ, ಬೀದಿ ಬೀದಿಗೆ ಕೆರೆಗಳನ್ನು ಕಟ್ಟಿಸುತ್ತ ಸಾಗಿದ್ದರು. ಅಜ್ಞಾನ ಅಂಧಕಾರದಲ್ಲಿ ಮುಳುಗಿದ್ದ ಸಿದ್ಧರಾಮರನ್ನು ಅಲ್ಲಮಪ್ರಭು ಮತ್ತು ಬಸವಣ್ಣನವರು ಪರಿವರ್ತಿಸಿ, ಚೆನ್ನಬಸವಣ್ಣನವರಿಂದ ಲಿಂಗದೀಕ್ಷೆ ಕೊಡಿಸಿ ಶಿವಯೋಗಿಯನ್ನಾಗಿ ಮಾಡಿದರು. ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ಸಿದ್ಧರಾಮರ ಕೊಡುಗೆ ಅಪಾರವಾಗಿತ್ತು. ಹಾಗಾಗಿ ಶರಣ ಸಂಕುಲದಲ್ಲಿ ಅವರ ಹೆಸರು ಅಮರವಾಗಿ ಉಳಿದಿದೆ ಎಂದು ಹೇಳಿದರು.

ಡಾ| ನಾಗಶೆಟ್ಟಿ ಪಾಟೀಲ ಗಾದಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಿಂಗಾಯತ ಸಮಾಜದ ಜಿಲ್ಲಾಧ್ಯಕ್ಷ ಕುಶಾಲರಾವ್‌ ಪಾಟೀಲ ಖಾಜಾಪುರ ಅಧ್ಯಕ್ಷತೆ ವಹಿಸಿದ್ದರು. ಶಿವರಾಜ ಪಾಟೀಲ ಅತಿವಾಳ ಧ್ವಜಾರೋಹಣ ನೆರವೇರಿಸಿದರು. ನಾಗಶೆಟ್ಟಿ ದಾಡಗಿ, ಕಾಶಪ್ಪ, ಸೀತಾ ಅಡಿವೆಪ್ಪ ಪಟೆ° ವೇದಿಕೆಯಲ್ಲಿದ್ದರು. 

ಈ ಸಂದರ್ಭದಲ್ಲಿ ಬಸವ ತತ್ವಕ್ಕಾಗಿ ದುಡಿದ ಹಿರಿಯ ನಾಗರಿಕರಾದ ಅಣ್ಣೆಪ್ಪ ಮಂಗಲಗಿ, ಬಂಡೆಪ್ಪ ಅಳ್ಳಿ, ಶಿವಕುಮಾರ ಪಾಟೀಲ ಹಾರೂರಗೇರಿ ದಂಪತಿಗಳನ್ನು ಸನ್ಮಾನಿಸಲಾಯಿತು. ಗಣಪತಿ ದೇಶಮುಖ, ಗಣಪತಿ ಬಿರಾದಾರ, ಮನ್ಮಥಯ್ಯ ಸ್ವಾಮಿ, ಅಶೋಕ ಶೀಲವಂತ, ವಿವೇಕ ಪಟೆ°, ಶಾಂತಾದೇವಿ ಬಿರಾದಾರ, ಚಂದ್ರಕಲಾ ದಾಡಗಿ, ಮಹಾಲಿಂಗ ಸ್ವಾಮಿ, ಕಾಶಿನಾಥ ಸೂರ್ಯವಂಶಿ ಮತ್ತಿತರರು ಇದ್ದರು. ಸುರೇಶ ಸ್ವಾಮಿ ಸ್ವಾಗತಿಸಿದರು. ಮಹಾರುದ್ರ ಡಾಕುಳಗಿ ನಿರೂಪಿಸಿದರು. ರವಿ ಪಾಪಡೆ ವಂದಿಸಿದರು. 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.