ಪರಂಪರೆ ತಿಳಿಸುವುದು ಕಮಲ ಜಾತ್ರೆ ಉದ್ದೇಶ: ಖೂಬಾ
Team Udayavani, Mar 4, 2018, 12:34 PM IST
ಭಾಲ್ಕಿ: ಭಾರತೀಯ ಭವ್ಯ ಪರಂಪರೆಯನ್ನು ಜನರಿಗೆ ತಿಳಿಸಿಕೊಡುವುದೇ ಕಮಲ ಜಾತ್ರೆಯ ಮೂಲ ಉದ್ದೇಶವಾಗಿದೆ. ಹೀಗಾಗಿ ಈ ಜಾತ್ರೆಯಲ್ಲಿ ಭಾರತೀಯ ಮೂಲ ಸಂಸ್ಕೃತಿಗೆ ಸಂಬಂಧಪಟ್ಟ ಎಲ್ಲಾ ಅಂಶಗಳಿಗೆ ಒತ್ತು ನೀಡಲಾಗಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದರು.
ಪಟ್ಟಣದ ಚನ್ನಬಸವಾಶ್ರಮದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಕಮಲ ಜಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಮಲ ಜಾತ್ರೆಯ ಮೂಲಕ ಮನರಂಜನೆಯೊಂದಿಗೆ ದೇಶೀ ಸಂಸ್ಕೃತಿ ಗಟ್ಟಿಗೊಳಿಸಲಾಗುವುದು.
ಹೀಗಾಗಿ ಭಾರತೀಯರಾದ ನಾವು ಈ ಜಾತ್ರೆಯ ಆನಂದ ಸವಿಯಬೇಕು ಎಂದು ಹೇಳಿದರು. ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ, ಕೆಲವು ದಿನಗಳ ಹಿಂದೆ ಜೇವರ್ಗಿಯಲ್ಲೂ ಕಮಲ ಜಾತ್ರೆ ಆಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಸುಮಾರು 40 ಸಾವಿರ ಜನರು ಜಾತ್ರೆಯಲ್ಲಿ ಭಾಗವಹಿಸಿದ್ದರು. ಆದರೆ ಭಾಲ್ಕಿಯಲ್ಲಿ ಇಂದು ಮತ್ತು ನಾಳೆ ನಡೆಯಲಿರುವ ಕಮಲ ಜಾತ್ರೆಯಲ್ಲಿ ಸುಮಾರ ಒಂದು ಲಕ್ಷ ಜನರು ಬಾಗವಹಿಸುವರು ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ, ಗುರುನಾಥ ಜಾಂತಿಕರ, ಪ್ರಕಾಶ ಮಾಶೆಟ್ಟೆ, ಈಶ್ವರ ಸಿಂಗ್ ಠಾಕೂರ, ಸೂರಜಸಿಂಗ್ ರಜಪೂತ, ಬಿಜೆಪಿ ತಾಲೂಕು ಅಧ್ಯಕ್ಷ ಗೋವಿಂದರಾವ್ ಬಿರಾದಾರ, ಅಶೋಕ ಮಡ್ಡೆ, ಸುಭಾಷ ಮಾಶೆಟ್ಟೆ, ಸೂರಜ ಮಜಗೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ