ಖೇಣಿ ವಿರುದ್ಧ ಅಬ್ರಾಹಂ ಅಖಾಡಕ್ಕೆ


Team Udayavani, Apr 2, 2018, 1:31 PM IST

bid-2.jpg

ಬೀದರ: ನೈಸ್‌ ಅಕ್ರಮ ಮತ್ತು ಅಮೆರಿಕದ ನಾಗರಿಕತ್ವಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ ಖೇಣಿ ವಿರುದ್ಧ ಕಳೆದ ಹಲವು ವರ್ಷಗಳಿಂದ ಕಾನೂನು ಸಮರ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಇದೀಗ ಖೇಣಿ ವಿರುದ್ಧ ಮತ್ತೂಮ್ಮೆ ಚುನಾವಣಾ ಅಖಾಡಕ್ಕಿಳಿದು ಮಣಿಸಲು ಸಜ್ಜಾಗಿದ್ದಾರೆ.

ನೈಸ್‌ ರಸ್ತೆ ನಿರ್ಮಾಣದಲ್ಲಿನ ಅಕ್ರಮ ಕುರಿತಂತೆ ಕಳೆದ ಕೆಲವು ವರ್ಷಗಳಿಂದ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಶುರು ಮಾಡಿದ್ದ ಅಬ್ರಾಹಂ, ನಂತರ ಖೇಣಿ ಅವರ ಪೌರತ್ವ ಪ್ರಶ್ನಿಸಿ ಮತ್ತು ಮತದಾನ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತು ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳಲ್ಲಿ ಮೊಕದ್ದಮೆಗಳನ್ನು ಹೂಡಿ, ಕಾನೂನು ಸಮರ ನಡೆಸುತ್ತ ಬಂದಿದ್ದಾರೆ.

ಈಗ ಎರಡನೇ ಬಾರಿಗೆ ಚುನಾವಣಾ ಕದನದಲ್ಲಿ ಖೇಣಿ ವಿರುದ್ಧ ಮುಖಾಮುಖೀ ಆಗಲು ನಿರ್ಧರಿಸಿದ್ದಾರೆ. ನೈಸ್‌ ಸಂಸ್ಥೆ ಮುಖ್ಯಸ್ಥ ಅಶೋಕ ಖೇಣಿ ಅವರು 2013ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ಮಕ್ಕಳ ಪಕ್ಷದಿಂದ ತವರು ಕ್ಷೇತ್ರ ಬೀದರ ದಕ್ಷಿಣದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆ ವೇಳೆ ಸಾಂಕೇತಿಕವಾಗಿ ಸ್ಪರ್ಧಿಸಿದ್ದ ಟಿ.ಜೆ. ಅಬ್ರಾಹಂ, ಈ ಬಾರಿ ಖೇಣಿಯವರನ್ನು ಸೋಲಿಸುವ ಶತಾಯಗತಾಯ ಪ್ರಯತ್ನಕ್ಕಿಳಿದಿದ್ದಾರೆ. ಇದಕ್ಕಾಗಿ ಜೆಡಿಎಸ್‌ ಮತ್ತು ಬಿಜೆಪಿಯ ಬಾಗಿಲು ತಟ್ಟಿದ್ದಾರೆ.

ಈ ಹಿಂದಿನ ಚುನಾವಣೆಯಲ್ಲಿ ಅಬ್ರಾಹಂ ಅವರು ಶಾಸಕ ಖೇಣಿ ವಿರುದ್ಧ ಸ್ವತಂತ್ರವಾಗಿ ಕಣಕ್ಕಿಳಿದಿದ್ದರು. ಖೇಣಿ ಒಬ್ಬ ಭ್ರಷ್ಟರಾಗಿದ್ದು, ಅಕ್ರಮಗಳ ಮೂಲಕ ವಂಚಿಸುತ್ತಿದ್ದಾರೆ. ಹಾಗಾಗಿ ತಮಗೆ ಮತ ಹಾಕದಿದ್ದರೂ ಪರವಾಗಿಲ್ಲ, ಖೇಣಿಗೆ ಓಟ್‌ ಹಾಕಬೇಡಿ ಎಂದು ಚುನಾವಣಾ ಪ್ರಚಾರದ ವೇಳೆ ಕರ ಪತ್ರಗಳನ್ನು ಹಂಚಿ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದರು. ಆಗ ಅತಿ ಕಡಿಮೆ ಮತಗಳನ್ನು ಪಡೆದಿದ್ದರು. 

ಸಧ್ಯ ಕಾಂಗ್ರೆಸ್‌ ಪಾಳಯಕ್ಕೆ ಜಿಗಿದಿರುವ ಖೇಣಿಗೆ ಟಿಕೆಟ್‌ ಸಿಗುವುದು ಬಹುತೇಕ ಖಚಿತವಾಗಿದೆ. ಇನ್ನೊಂದೆಡೆ ಖೇಣಿ ವಿರುದ್ಧ ತೊಡೆ ತಟ್ಟಿರುವ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತಿರುವ ಅಬ್ರಾಹಂ ಮತ್ತೂಮ್ಮೆ ಬೀದರ ದಕ್ಷಿಣ ಕ್ಷೇತ್ರದಿಂದ ನಾಮಪತ್ರ ಪತ್ರ ಸಲ್ಲಿಸಲು ಮುಂದಾಗಿದ್ದಾರೆ. 

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹಾಗೂ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ತಮ್ಮ ಪಕ್ಷದ ಚಿಹ್ನೆಯಡಿ ಖೇಣಿ ವಿರುದ್ಧ ಸ್ಪರ್ಧಿಸಲು ಸಮ್ಮತಿ ಸೂಚಿಸುವಂತೆ ಕೋರಿರುವ ಅವರು, ಪಕ್ಷಗಳಿಂದ ಟಿಕೆಟ್‌ ಕೊಡದಿದ್ದರೂ ಖೇಣಿ ವಿರುದ್ಧ ನಾನು ಸ್ಪ ರ್ಧಿಸುವುದು ಖಚಿತ ಎಂದು ಹೇಳಿದ್ದಾರೆ

ಜನ ಜಾಗೃತರಾಗಿದ್ದಾರೆ
ಅಶೋಕ್‌ ಖೇಣಿ ವಿರುದ್ಧ ಅಕ್ರಮಗಳ ಕುರಿತಂತೆ ಹಲವು ಮೊಕದ್ದಮೆಗಳನ್ನು ನ್ಯಾಯಾಲಯದಲ್ಲಿ ಹೂಡಿ ರೈತರು ಮತ್ತು ಸರ್ಕಾರಕ್ಕೆ ಅವರು ಮೋಸ ಮಾಡಿರುವುದನ್ನು  ಬಯಲಿಗೆಳೆದಿರುತ್ತೇನೆ. ಕಳೆದ ಬಾರಿ ಚುನಾವಣೆಯಲ್ಲಿ ಖೇಣಿ ವಿರುದ್ಧ ಸಾಂಕೇತಿಕವಾಗಿ ಸ್ಪ ರ್ಧಿಸಿ ಮತದಾರರಲ್ಲಿ ಅಕ್ರಮಗಳ ವಿರುದ್ಧ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದೆ. ಆದರೆ, ಬೀದರ ದಕ್ಷಿಣ ಕ್ಷೇತ್ರದ ಮುಗ್ಧ ಮತದಾರರು ಖೇಣಿಯವರ ಬಣ್ಣ ಬಣ್ಣದ ಮಾತುಗಳನ್ನು ನಂಬಿ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದರು. ಈಗ ಜನರು ಜಾಗೃತರಾಗಿದ್ದು, ಅಕ್ರಮದ ವಿರುದ್ಧ ಹೋರಾಡುತ್ತಿರುವ ತಮಗೆ ಈ ಬಾರಿ ಬೆಂಬಲಿಸುತ್ತಾರೆ ಎಂಬ ವಿಶ್ವಾಸ ಇದೆ.

„ವಿಶೇಷ ವರದಿ

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.