ಅಂಬೇಡ್ಕರರಲ್ಲಿಬುದ್ಧ-ಬಸವನ ಕಾಣಿ


Team Udayavani, Apr 15, 2018, 11:48 AM IST

bid-1.jpg

ಬೀದರ: ಭಗವಾನ್‌ ಬುದ್ಧ ಬಿತ್ತಿದ ಸಮಾನತೆ ಬೀಜವನ್ನು ಬಸವಣ್ಣ ಕಾರ್ಯ ರೂಪಕ್ಕೆ ತಂದಿದ್ದರೆ, ಡಾ| ಅಂಬೇಡ್ಕರ ಅವರು ಅದಕ್ಕೆ ಸಾಂವಿಧಾನಿಕ ಮಾನ್ಯತೆ ಕೊಟ್ಟಿದ್ದರು. ಹಾಗಾಗಿ ನಾವು ಬಸವಣ್ಣನಲ್ಲಿ ಬುದ್ಧನನ್ನ ಕಂಡರೆ, ಅಂಬೇಡ್ಕರರಲ್ಲಿ ಬಸವಣ್ಣನನ್ನು ಕಾಣಬೇಕು. ಆಗ ಸೌಹಾರ್ದ ಮತ್ತು ಸ್ವಸ್ಥ ಸಮಾಜ ಕಟ್ಟಡಲು ಸಾಧ್ಯ ಎಂದು ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಶರಣಪ್ಪ ಮಿಠಾರೆ ಹೇಳಿದರು.

ನಗರದ ಅಂಬೇಡ್ಕರ ವೃತ್ತದಲ್ಲಿ ಡಾ| ಅಂಬೇಡ್ಕರ ಅವರ 127ನೇ ಜಯಂತ್ಯುತ್ಸವ ನಿಮಿತ್ತ ಶನಿವಾರ ಆಯೋಜಿಸದ್ದ ಬೃಹತ್‌ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ಎಂಬುದು ಮಾನವ ನಿರ್ಮಿತವಾದದ್ದು. ಯಾರು ಯಾವುದೇ ಜಾತಿಯಲ್ಲಿ ಹುಟ್ಟಬೇಕು ಎಂಬ ಉದ್ದೇಶ ಹೊಂದಿರುವುದಿಲ್ಲ. ಆದರೆ, ನಾವು ಮಾಡುವ ಕಾಯಕವೇ ಜಾತಿಗಳಾಗಿರುವುದು ದೇಶದ ದೊಡ್ಡ ದುರಂತ ಎಂದು ಬೇಸರ ವ್ಯಕ್ತಪಡಿಸಿದರು. ಅಂಬೇಡ್ಕರರ ಚಿಂತನೆಗಳು ದೇಶದ ದಿನ ದಲಿತರ, ಬಡವರ ಪರವಾಗಿದ್ದವು. ಬಾಬಾ ಸಾಹೇಬರು ಮನುಕುಲದ ಏಳ್ಗೆಗಾಗಿ ಹೋರಾಟ ನಡೆಸಿದರೆ ಹೊರತು ಯಾವುದೇ ಜಾತಿಯ ವಿರುದ್ಧ ಅಲ್ಲ. ಸಮಾಜದಲ್ಲಿ ಹರಡಿರುವ ಜಾತಿಯ ವಿಷ ಬೀಜ ನಿರ್ನಾಮವಾಗಿ ಸಾತ್ವಿಕ ಬದುಕು ಬದುಕುವಂತಾಗಬೇಕು. ಮಹಾತ್ಮರ ಜಯಂತಿಗಳನ್ನು ವೇದಿಕೆಗೆ ಸೀಮಿತಗೊಳಿಸದೇ ಅವರ ತತ್ವಾದರ್ಶಗಳನ್ನು ದಿನ ನಿತ್ಯದ ಬದುಕಿನಲ್ಲಿ ಆಚರಣೆಯಲ್ಲಿ ತಂದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಗುಲಬರ್ಗಾ ವಿವಿ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ| ಎಚ್‌.ಟಿ. ಪೋತೆ ಮಾತನಾಡಿ, ಅಂಬೇಡ್ಕರ ಒಬ್ಬ ಶ್ರೇಷ್ಠ ಜ್ಞಾನಿಯಾಗಿದ್ದು, ವಿಶ್ವದಲ್ಲಿ ಪ್ರಖ್ಯಾತಿ‌ ಪಡೆದಿದ್ದರು. ನಾವೆಲ್ಲರೂ ನಮಗಾಗಿ, ಹೆಂಡತಿ ಮಕ್ಕಳಿಗಾಗಿ ಓದಿದ್ದರೆ ಅವರು ಶೋಷಿತ ಸಮುದಾಯವರ ಏಳ್ಗೆಗಾಗಿ ಓದಿದ್ದರು. ಬುದ್ಧ, ಬಸವ ನಾಡಿನಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಯಾವೊಬ್ಬ ಮನುವಾದಿಗಳು ಮಾತನಾಡುವುದಿಲ್ಲ. ಅಸ್ಪೃಶ್ಯರ ನೋವು ಅಸ್ಪೃಶ್ಯರಿಗೆ ಮಾತ್ರ ಗೊತ್ತು. ಇದರಿಂದ ಮುಕ್ತಿ ಪಡೆಯಬೇಕಾದರೆ ಸಮಾನತೆಯ ಹಕ್ಕು ಉಳಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಇದು ಅಂಬೇಡ್ಕರ ಭಾರತ ಎಂದು ಪ್ರಧಾನಿಗಳ ಹೇಳಿಕೆ ನಿಜವಾಗಿದ್ದರೆ ಧರ್ಮ ಸಂಸತ್ತಿನ ಮಠಾಧೀಶರು ಬಾಯಿ ಮುಚ್ಚಿಸಲಿ. ಮೀಸಲಾತಿ ಸೌಲಭ್ಯ ತೆಗೆಯಬೇಕು ಎಂದಾದರೆ ರಾಷ್ಟ್ರದ ಸಂಪತ್ತನ್ನು ಎಲ್ಲರಿಗೂ ಸಮಾನವಾಗಿ ಹಂಚಿಕೆ ಮಾಡಲಿ. 

ಕೇವಲ ಶೇ.15ರಷ್ಟು ಮೀಸಲಾತಿ ಸೌಲಭ್ಯ ಪಡೆಯುವ ಪರಿಶಿಷ್ಟ ಜಾತಿಯವರು ಅಂಬೇಡ್ಕರ ಜಯಂತಿ ಆಚರಣೆ ಮಾಡುತ್ತಿದ್ದರೆ, ಅತಿ ಹೆಚ್ಚು ಮೀಸಲಾತಿ ಪಡೆಯುವ ಹಿಂದುಳಿದ ವರ್ಗದವರು ಮನೆಯಲ್ಲಿ ಕುಳಿತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಣದೂರ ಧಮ್ಮ ದರ್ಶನ ಭೂಮಿಯ ಶ್ರೀ ಭಂತೆ ವರಜ್ಯೋತಿ ಅವರ ಸಾನಿಧ್ಯ ಮತ್ತು ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಮಾರುತಿ ಬೌದ್ಧೆ ಅಧ್ಯಕ್ಷತೆ ವಹಿಸಿದ್ದರು. ಚಾಮರಾಜನಗರದ ಪ್ರಗತಿಪರ ಚಿಂತಕ ಅರಕಲವಾಡಿ ನಾಗೇಂದ್ರ ಮತ್ತು ಸಂಬಾಜಿ ಬ್ರಿಗೇಡ್‌ ಅಧ್ಯಕ್ಷ ಸುಭಾಷ ಶೆಡೋಳೆ ಉಪನ್ಯಾಸ ನೀಡಿದರು. ಸಮಿತಿಯ ಗೌರವಾಧ್ಯಕ್ಷ ಫರ್ನಾಂಡಿಸ್‌ ಹಿಪ್ಪಳಗಾಂವ್‌, ಉಪಾಧ್ಯಕ್ಷ ಬಾಬುರಾವ ಪಾಸ್ವಾನ್‌, ಮೆರವಣಿಗೆ ಸಮಿತಿ ಅಧ್ಯಕ್ಷ ವಿಜಯಕುಮಾರ ಸೋನಾರೆ, ಪ್ರಚಾರ ಸಮಿತಿ ಅಧ್ಯಕ್ಷ ಮಹೇಶ ಗೋರನಾಳಕರ್‌, ಪ್ರಮುಖರಾದ ಅರುಣ ಪಾಟೀಲ, ವಿಷ್ಣುವರ್ಧನ ವಾಲೊªಡ್ಡಿ ಮತ್ತಿತರರು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.