ರೈತರ ಹಿತಕ್ಕಾಗಿ ಜೆಡಿಎಸ್‌ ಸೇರ್ಪಡೆ: ಸಂಜಯ ಖೇಣಿ


Team Udayavani, Apr 30, 2018, 3:45 PM IST

gul-5.jpg

ಹುಮನಾಬಾದ: ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಮರುಆರಂಭಕ್ಕಾಗಿ ಹಾಗೂ ರೈತರ ಹಿತ ಕಾಪಾಡುವ ಉದ್ದೇಶದಿಂದ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದೇನೆ ಎಂದು ಸಂಜಯ ಖೇಣಿ ಹೇಳಿದರು.

ಮನ್ನಾಎಖೇಳ್ಳಿ ಗ್ರಾಮದ ಜರಿನ್‌ ಹಾಲ್‌ನಲ್ಲಿ ಅನ್ಯ ಪಕ್ಷದವರ ಜೆಡಿಎಸ್‌ಗೆ ಸೇರ್ಪಡೆ ಕಾರ್ಯಕ್ರಮದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜೆಡಿಎಸ್‌ ರೈತರ ಏಳ್ಗೆಗಾಗಿ ಶ್ರಮಿಸುತ್ತಿದೆ. ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಚುನಾವಣಾ ಪ್ರಣಾಳಿಕೆ ತಯಾರಿಸಲಾಗಿದೆ. ಈ ನಿಟ್ಟಿನಲ್ಲಿ ನಾನು ಜೆಡಿಎಸ್‌ಗೆ ಸೆರ್ಪಡೆಗೊಂಡಿದ್ದು, ನನ್ನ ಅನೇಕ ಬೆಂಬಲಿಗರು ಕೂಡ ನನ್ನೊಂದಿಗೆ ಬಂದಿದ್ದಾರೆ.

ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಕ್ತ ಬೀದರ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು. ಬೀದರ ಸಹಕಾರ ಸಕ್ಕರೆ ಕಾರ್ಖಾನೆಗೆ ಸರ್ಕಾರ ಸೂಕ್ತ ಸಮಯಕ್ಕೆ ಹಣ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಕಾರ್ಖಾನೆ ಬಂದ್‌ ಆಗಿದೆ. ಇದಕ್ಕೆ ಆಡಳಿತ, ಸರ್ಕಾರ ಹಾಗೂ ಸ್ಥಳೀಯ ಶಾಸಕರು ಕೂಡ ಕಾರಣ ಎಂದು ಆರೋಪಿಸಿದರು.

ಕೊನೆಯ ಹಂತದಲ್ಲಿ ಕಾರ್ಖಾನೆಗೆ ಬಿಡುಗಡೆಯಾದ 10 ಕೋಟಿ ರೂ. ಹಣದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಗಳು ಕೇಳಿಬರುತ್ತಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಆ ಹಣದಲ್ಲಿ ಅಕ್ರಮ ಮಾಡಿದರೆ ಈವರೆಗೆ ನಾನು ಜೈಲಿನಲ್ಲಿ ಇರುತ್ತಿದ್ದೆ. ಕಾರ್ಖಾನೆ ಪ್ರಾರಂಭಕ್ಕೂ ಮುನ್ನ ಸಭೆ ನಡೆಸಿ, ಕಾರ್ಖಾನೆಗೆ ಬೇಕಾದ ಎರಡು ಕೋಟಿ ರೂ. ಅನುದಾನ ತಂದು ಪ್ರಾರಂಭಿಸಿದ್ದು, ಹಣ ಬಿಡುಗಡೆಗೊಂಡ ನಂತರ ಆ ಹಣ ಮರು ಪಾವತಿಸಬೇಕು ಎಂಬ ಷರತ್ತಿಗೆ ಎಲ್ಲಾ ಆಡಳಿತ ಮಂಡಳಿ ಸದಸ್ಯರು ಸಹಿ ಹಾಕಿದ್ದಾರೆ. ಸಭೆಯ ನಡುವಳಿಕೆ ಅನುಸಾರ ಎರಡು ಕೋಟಿ ಹಣ ಪಾವತಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಈ ಬಾರಿ ಜೆಡಿಎಸ್‌ಗೆ ಎಲ್ಲಾ ರೈತ ವರ್ಗದವರು ಕೂಡ ಸಹಕಾರ ನೀಡುತ್ತಿದ್ದು, ಜೆಡಿಎಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಕಾರ್ಖಾನೆ ಮರು ಆರಂಭಗೊಂಡು ಈ ಭಾಗದ ರೈತರಿಗೆ ನೆರವಾಗಲಿದೆ ಎಂದರು.

2008ರ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಎದುರು ಚುನಾವಣೆಗೆ ಧುಮಿಕ್ಕಿದ್ದು, 2013ರ ಚುನಾವಣೆಯಲ್ಲಿ ಅಶೋಕ ಖೇಣಿ ಗೆಲುವಿಗೆ ಮುಂದಾದ ನೀವು ಇದೀಗ ಬಂಡೆಪ್ಪ ಖಾಶೆಂಪುರ ಪರ ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಶೋಕ ಖೇಣಿ ಅವರು ಹೇಳಿದಂತೆ ನಡೆದಿಲ್ಲ. ಅಭಿವೃದ್ಧಿ ಕಾರ್ಯ ಕೂಡ ನಡೆದಿಲ್ಲ. ಕಾರಣ ಬಂಡೆಪ್ಪ ಪರ ಕೆಲಸ ಮಾಡುತ್ತಿದ್ದೇನೆ ಎಂದರು.

ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ ಮಾತನಾಡಿ, ಬೀದರ ಸಹಕಾರ ಸಕ್ಕರೆ ಕಾರ್ಖಾನೆಯ ಸ್ಥಿತಿಗತಿಗೆ ರಾಜ್ಯ ಸರ್ಕಾರ ನೇರ ಕಾರಣ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಕ್ಷೇತ್ರದ ಸಚಿವರು ಕೂಡ ಕಾರಣ. ರೈತರ ಹಿತಕಾಪಾಡುವ ನಿಟ್ಟಿನಲ್ಲಿ ಕಾರ್ಖಾನೆಗೆ ಆರ್ಥಿಕ ನೇರವು ನೀಡಬೇಕಿತ್ತು. ಮಂಡ್ಯ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರ ವಿಶೇಷ ಸೌಲಭ್ಯಗಳನ್ನು ನೀಡುತ್ತಿದೆ. ಆದರೆ ನಮ್ಮ ಜಿಲ್ಲೆಯ ಕಾರ್ಖಾನೆ ಬಗ್ಗೆ ಯಾಕೆ ಕಾಳಜಿ ವಹಿಸಿಲ್ಲ ಎಂದು ಪ್ರಶ್ನಿಸಿದರು. 

ಸಂಜಯ ಖೇಣಿ ತನ್ನದೆ ಆದ ಘನತೆ ಹೊಂದಿದ್ದಾರೆ. ಅವರ ಜೊತೆಗೆ ಅವರ ಬೆಂಬಲಿಗರೂ ಕೂಡ ನಮ್ಮ ಪಕ್ಷಕ್ಕೆ ಬಂದಿದ್ದು, ಪಕ್ಷಕ್ಕೆ ಹೆಚ್ಚು ಶಕ್ತಿ ಬಂದಿದೆ ಎಂದರು. ನಸಿಮೊದ್ದೀನ್‌ ಪಟೇಲ್‌, ರಮೇಶ ಪಾಟೀಲ, ಸಂತೋಷ ರಾಸೂರ್‌, ಸಂಜುರೆಡ್ಡಿ ನಿರ್ಣಾ, ದತ್ತಾತ್ರೇಯ, ಶಿವರಾಜ ಹುಲಿ, ರಾಜು ಚಿಂತಾಮಣಿ ಇದ್ದರು.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.