ಕಾಲುವೆ, ಚರಂಡಿ ಸ್ವತ್ಛತೆ ಪರಿಶೀಲಿಸಿದ ಡಿಸಿ
Team Udayavani, Jun 12, 2018, 11:29 AM IST
ಬೀದರ: ನಗರದ ವಿವಿಧ ಬಡಾವಣೆಗಳಲ್ಲಿನ ಕಾಲುವೆ, ಚರಂಡಿಗಳ ಸ್ವತ್ಛತೆಯನ್ನು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್
ಅವರು ಸೋಮವಾರ ಖುದ್ದು ವೀಕ್ಷಿಸಿ ಪರಿಶೀಲಿಸಿದರು.
ಜನವಾಡ ರಸ್ತೆ ಬದಿಯ ಲೇಬರ್ ಕಾಲೋನಿ, ಶಾಹಗಂಜ್, ಡಿಸಿಸಿ ಬ್ಯಾಂಕ್ ಬಳಿಯ ಪ್ರದೇಶದಲ್ಲಿ ಸಂಚರಿಸಿ, ಅಲ್ಲಿನ
ರಾಜ ಕಾಲುವೆ ವೀಕ್ಷಿಸಿದ ಅವರು, ಕಾಲುವೆಗಳಲ್ಲಿ ತುಂಬಿದ್ದ ಕೊಳಚೆ ನೋಡಿ ನಗರಸಭೆ ಅಧಿಕಾರಿಗಳ ವಿರುದ್ಧ
ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕೊಳಕು ತುಂಬಿಕೊಂಡ ಚರಂಡಿ ಹಾಗೂ ಕಾಲುವೆಗಳನ್ನು ಸ್ವತ್ಛಗೊಳಿಸುವಂತೆ
ಸೂಚಿಸಿದರು.
ಮಳೆಗಾಲ ಆರಂಭವಾಗಿದೆ. ಹೀಗಾಗಿ ಕಾಲುವೆಗಳಲ್ಲಿ ನೀರು ಸರಳವಾಗಿ ಹರಿದು ಹೋಗುವಂತಾಗಬೇಕು. ಬಹಳಷ್ಟು
ಕಡೆಗಳಲ್ಲಿ ತುಂಬಿಕೊಂಡಿರುವ ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯ ತೆಗೆಯಲು ವ್ಯವಸ್ಥೆ ಮಾಡಬೇಕು. ಮಳೆ ನೀರು ಬಂದಾಗ ಕೆಲವೆಡೆ ಚರಂಡಿಗಳು ನೀರಿನಿಂದ ಮುಚ್ಚಿ ಹೋಗುತ್ತವೆ. ಕಾರಣ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕೆಂದು ಸೂಚಿಸಿದರು.
ಇದೇ ವೇಳೆ ಸಾರ್ವಜನಿಕರು ಕೂಡ ಚರಂಡಿಗಳ ಕುರಿತು ದೂರು ಹೇಳಿದರು. ಸಾರ್ವಜನಿಕರ ಮಾತಿಗೆ ಪ್ರತಿಕ್ರಿಯಿಸಿದ ಅವರು, ಕಾಲುವೆ, ಚರಂಡಿಗಳ ಸ್ವತ್ಛತೆ ಕೇವಲ ನಗರಸಭೆಯ ಕೆಲಸ ಮಾತ್ರ ಎಂದು ಭಾವಿಸಬೇಡಿ. ಇದರಲ್ಲಿ ಸಾರ್ವಜನಿಕರ ಪಾತ್ರವೂ ಬಹಳ ಮುಖ್ಯವಾಗಿದೆ. ಮನೆಯ ಕಸವನ್ನು ಚರಂಡಿಗೆ ಹಾಕದೇ ನಗರಸಭೆ ಗುರುತಿಸಿದ ಸ್ಥಳದಲ್ಲಿ ಹಾಕಬೇಕು. ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಹಾಕುವ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ನಗರಸಭೆ ಪೌರಾಯುಕ್ತ ಮನೋಹರ ಎಸ್. ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ