ಠಾಣಾಕುಶನೂರನಲ್ಲಿ ಅಖಂಡ ಹರಿನಾಮ-ಶಿವನಾಮ ಸಪ್ತಾಹ


Team Udayavani, Jun 16, 2018, 3:12 PM IST

bidar-1.jpg

ಕಮಲನಗರ: ಠಾಣಾಕುಶನೂರ ಗ್ರಾಮದ ಮಹಾದೇವ ಮಂದಿರದಲ್ಲಿ ಅಖಂಡ ಹರಿನಾಮ, ಶಿವನಾಮ  ಸಪ್ತಾಹ ಹಾಗೂ ಸೇವೆಯಿಂದ ನಿವೃತ್ತರಾದ ಶಿಕ್ಷಕ ರಘುನಾಥ ಶರಣಪ್ಪಾ ರೊಟ್ಟೆ ಅವರ ಸನ್ಮಾನ  ಸಮಾರಂಭ ನಡೆಯಿತು.

ಏಳು ನಗಳ ಕಾಲ ಪ್ರತಿನಿತ್ಯ 7ರಿಂದ 9 ಗಂಟೆ ವರೆಗೆ ಶಿವಲಿಲಾಮೃತ ಪಾರಾಯಣ, ಬೆಳಗ್ಗೆ 11ರಿಂದ 1
ಗಂಟೆ ವರೆಗೆ ಗಾಥಾ ಭಜನೆ, ಮಧ್ಯಾಹ್ನ 3ರಿಂದ 4ರ ವರೆಗೆ ಶಿವಭಜನೆ, ಪ್ರತಿದಿನ ಸಂಜೆ 5 ರಿಂದ 6ರ ವರೆಗೆ ಪ್ರವಚನ, ಸಂಜೆ 7ರಿಂದ 8ರ ವರೆಗೆ ಹರಿಪಠಣ, ರಾತ್ರಿ 9ರಿಂದ 11ರ ವರೆಗೆ ಹರಿ ಕೀರ್ತನೆ, ರಾತ್ರಿ ಹರಿಜಾಗರಣ ಹಾಗೂ ಬೆಳಗ್ಗೆ 5 ಗಂಟೆಗೆ ಕಾಕಡಾರತಿ ಕಾರ್ಯಕ್ರಮಗಳು ಜರುಗಿದವು.

ಏಳು ದಿನಗಳ ಕಾಲ ವಿವಿಧ ಮಹಾತ್ಮರು, ಶರಣರು, ಕೀರ್ತನೆಕಾರರು, ಪ್ರವಚನಕಾರರು, ಗಾಯಕರು ಹಾಗೂ ಸುಮಾರು 30 ಗ್ರಾಮಗಳಿಂದ ಶಿವ-ಹರಿ ಭಜನಾ ತಂಡಗಳು ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ
ನಿವೃತ್ತ ಶಿಕ್ಷಕ ಹಾಗೂ ಈ ಕಾರ್ಯಕ್ರಮದ ರೂವಾರಿ ರಘುನಾಥ ಶರಣಪ್ಪಾ ರೊಟ್ಟೆ ದಂಪತಿಯನ್ನು ಗ್ರಾಮಸ್ಥರು ಸನ್ಮಾನಿಸಿದರು. 

ವಿರಕ್ತ ಮಠ, ಕನ್ನಡ ಸಾಹಿತ್ಯ ಪರಿಷತ್‌, ವಿವಿಧ ಸಂಘ ಸಂಸ್ಥೆ ಹಾಗೂ ಶಿಕ್ಷಕರು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಟ್ಟರು. ಈ ವೇಳೆ ಸಾನ್ನಿಧ್ಯ ವಹಿಸಿದ್ದ ಡಾ| ಶಿವಾನಂದ ಮಹಾಸ್ವಾಮಿಗಳು ಮಾತನಾಡಿ, ಶಿಕ್ಷಕ ರಘುನಾಥ ರೊಟ್ಟೆ ಅವರು ತಮ್ಮ ಜೀವನ ಪರ್ಯಂತ ಮಕ್ಕಳಿಗೆ ಒಳ್ಳೆ ಪಾಠ, ಬೋಧನೆ ಮಾಡಿ ಜೀವನ ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತಿದ್ದಾರೆ. 

ಶಿಕ್ಷಕ ವೃತ್ತಿಯೊಂದಿಗೆ ಶರಣ ತತ್ವ, ಸಂತರ ತತ್ವಗಳನ್ನು ಕೀರ್ತನೆ ಮತ್ತು ಪ್ರವಚನಗಳ ಮೂಲಕ ಜನಜಾಗೃತಿಗೊಳಿಸಿದ್ದಾರೆ ಎಂದರು. ಶ್ರೀ ಮುರಲಿಧರ ಮಹಾರಾಜ, ಜಗನ್ನಾಥ ಮೂಲಗೆ ಮಾತನಾಡಿದರು.
ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಣ ಇಲಾಖೆ ಅಧಿಕಾರಿಗಳಾದ ಉಮಾಕಾಂತ ಮಹಾಜನ ವೇದಿಕೆಯಲ್ಲಿದ್ದರು. ಪ್ರವಿಣ ಕಾರಬಾರಿ, ಶಿವಕುಮಾರ ಸಜ್ಜನಶೆಟ್ಟೆ, ಜಗನ್ನಾಥ ಜಿರ್ಗೆ, ಸತೀಶ ಜಿರ್ಗೆ, ರಾಮದಾಸ ಮಾಸ್ಟರ್‌, ವಸಂತ ದೆಸಾಯಿ, ಶರಣಪ್ಪಾ ಬೆಲ್ದಾಳ, ಮಹಾದಪ್ಪಾ ಸಜ್ಜನಶೆಟ್ಟೆ, ಬಾಬುರಾವ್‌ ಜಾಧವ ಡಾ| ರವಿಂದ್ರ ಬಾವಗೆ, ಬಾಲಾಜಿ ವಾಗಮೊಡೆ, ರಮೇಶ ಬೊಚರೆ, ಸೋಪಾನ ಕೊರೆಕಲ ಇನ್ನಿತರರು ಇದ್ದರು. ಸಂಜು ಕದಂ ಸ್ವಾಗತಿಸಿದರು. ರಾಮಶೇಟ್ಟಿ ಪನ್ನಾಳೆ ನಿರೂಪಿಸಿದರು. ಬಾಲಾಜಿ ವಾಗಮೊಡೆ ವಂದಿಸಿದರು.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.