ಬಳಕೆಗೆ ಮುನ್ನವೇ ತುಕ್ಕು ಹಿಡಿದ ಸೈಕಲ್‌


Team Udayavani, Jul 24, 2018, 12:47 PM IST

bid-3.jpg

ಬಸವಕಲ್ಯಾಣ: ಅಂಗವಿಕಲರಿಗಾಗಿ ನಗರಸಭೆಯಿಂದ ಮಂಜೂರಾದ ಸೈಕಲ್‌ಗ‌ಳು ಆಯ್ಕೆಯಾದ ಫಲಾನುಭವಿಗಳಿಗೆ ಸೇರದೇ, ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸೈಕಲ್‌ಗ‌ಳು ಉಪಯೋಗಕ್ಕೆ ಬರುವ ಮುನ್ನವೇ ತುಕ್ಕು ಹಿಡಿದು ಸಂಪೂರ್ಣ
ಹಾಳಾಗಿವೆ.

ಲಕ್ಷಾಂತರ ರೂ. ಖರ್ಚು ಮಾಡಿ ಖರೀದಿ ಮಾಡಿದ್ದ 150ಕ್ಕೂ ಹೆಚ್ಚು ಸೈಕಲ್‌ಗ‌ಳು ನಗರದ ಹೊರವಲಯದ ನೀರು ಶುದ್ಧೀಕರಣ ಘಟಕದ ಆವರಣದಲ್ಲಿ ಇಟ್ಟ ಸ್ಥಳದಲ್ಲಿಯೇ ತುಕ್ಕು ಹಿಡಿದು, ಟೂಬ್‌ ಮತ್ತು ಟೈರ್‌ಗಳು ಮಣ್ಣು ಪಾಲಾಗಿವೆ. ಮೂರು ವರ್ಷಗಳ ಹಿಂದೆ ನಗರಸಭೆಯ ಬಜೆಟ್‌ನ ಶೇ.3ರಷ್ಟು ಅಂಗವಿಕಲರ ಮೀಸಲಾತಿ ಅನುದಾನದಲ್ಲಿ ಸೈಕಲ್‌ ಖರೀದಿ ಮಾಡಿ ಇಡಲಾಗಿತ್ತು. ಆದರೆ ಆಯ್ಕೆಯಾದ ಫಲಾನುಭವಿಗಳಿಗೆ ವಿತರಣೆ ಮಾಡದೆ ಇರುವುದು ನೋವಿನ ಸಂಗತಿಯಾಗಿದೆ.

ಕಳೆದ ಕೆಲವು ವರ್ಷಗಳಿಂದ ಸೈಕಲ್‌ಗಳನ್ನು ನೀರು ಶುದ್ಧೀಕರಣ ಘಟಕದಲ್ಲಿ ಇಡಲಾಗಿತ್ತು. ಈವರೆಗೂ ಸೈಕಲ್‌ಗ‌ಳು ಇವೆಯೋ ಅಥವಾ ಇಲ್ಲವೊ ಎಂಬುದನ್ನು ನೋಡಲಿಕ್ಕೂ ಬಂದಿಲ್ಲ. ಇದರಿಂದ ಉಪಯೋಗಕ್ಕೆ ಬರುವ ಮುನ್ನವೇ ಅವುಮಣ್ಣುಪಾಲಾಗಿವೆ ಎಂದು ಸಿಬ್ಬಂದಿ ವೊಬ್ಬರು ಮಾಹಿತಿ ನೀಡಿದರು. 

ಆಯ್ಕೆಯಾದ ಫಲಾನುಭವಿಗಳಿಗೆ ಸೈಕಲ್‌ ಹಂಚದೇ ಹಾಗೆ ಇಟ್ಟಿರುವುದನ್ನು ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿ ಮುಖ್ಯ
ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ. ಇದರಿಂದ ಅಂಗವಿಕಲರ ಹಿತದೃಷ್ಟಿಯಿಂದ ಸರಕಾರ ಅನುದಾನ ನೀಡಿ ಮಂಜೂರು ಮಾಡಿದ ಸೈಕಲ್‌ಗಳು ಉಪಯೋಗಕ್ಕೆ ಬರುವ ಮುನ್ನವೇ ಹಾಳಾಗಲು ಕಾರಣವಾಯಿತು ಎಂದು ಎಂಆರ್‌ಡಬ್ಲೂ ಕಾರ್ಯಕರ್ತರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಮೂರು ವರ್ಷಗಳ ಹಿಂದೆ ಅಂಗವಿಕಲರಿಗಾಗಿ ಮಂಜೂರಾದ ಸೈಕಲ್‌ಗ‌ಳನ್ನು ಫಲಾನುಭವಿಗಳಿಗೆ ವಿತರಣೆ ಮಾಡದೆ ಇರುವುದನ್ನು ನೋಡಿದರೆ ಅಧಿಕಾರಿಗಳ ನಿರ್ಲಕ್ಷ ತಿಳಿಯುತ್ತದೆ.

ಈ ವಿಷಯಕ್ಕೆ ಸಂಬಂಧ ಪಟ್ಟಂತೆ ಪ್ರತಿಭಟನೆ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕೂಡ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಆಯ್ಕೆಯಾದ ಫಲಾನುಭವಿಗಳಿಗೆ ಸೇರಬೇಕಾದ ಸೈಕಲ್‌ಗ‌ಳು ಇಟ್ಟ ಸ್ಥಳದಲ್ಲಿ ತುಕ್ಕು ಹಿಡಿದಿವೆ.
 ಶಿವಕುಮಾರ, ಎಂಆರ್‌ಡಬ್ಲೂ ಕಾರ್ಯಕರ್ತ

ನೀರು ಶುದ್ಧೀಕರಣ ಘಟಕದಲ್ಲಿ ನಾಲ್ಕು ವರ್ಷಗಳಿಂದ ಅಂಗವಿಕಲರ ಸೈಕಲ್‌ಗ‌ಳು ಬಿದ್ದಿವೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಆದರೆ ನಾನು ಅಧಿಕಾರ ವಹಿಸಿಕೊಳ್ಳುವ ಮುಂಚೆ ಮಂಜೂರಾಗಿರುವುದು. ಹೀಗಾಗಿ ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ.
 ಮೀನಾಕುಮಾರಿ, ಸಿಎಂಸಿ ಅಧಿಕಾರಿ

ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.