ಹೆಣ್ಣು ಭ್ರೂಣ ಹತ್ಯೆ ಪ್ರಮಾಣ ಹೆಚ್ಚಳ: ನ್ಯಾ| ಪ್ರೇಮಾವತಿ
Team Udayavani, Aug 4, 2018, 11:49 AM IST
ಬೀದರ: ಕೆಲವು ವರ್ಷಗಳಿಂದ ಹೆಣ್ಣು ಭ್ರೂಣ ಹತ್ಯೆ ಪ್ರಮಾಣ ಹೆಚ್ಚಾಗುತ್ತಿದೆ. ಇದು ಅಪರಾಧವಾಗಿದ್ದು, ಜನರಲ್ಲಿ ಈ ಬಗ್ಗೆ ಹೆಚ್ಚು ತಿಳಿವಳಿಕೆ ಮೂಡಿಸುವ ಅಗತ್ಯವಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮನಗೊಳಿ ಪ್ರೇಮಾವತಿ ಮಲ್ಲಿಕಾರ್ಜುನ ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಜವಾಬ್ದಾರಿ ವಹಿಸಿಕೊಂಡು ತಮ್ಮ ಸುತ್ತಮುತ್ತಲಿನ ಜನರಿಗೆ ತಿಳಿವಳಿಕೆ ನೀಡಲು ಮುಂದಾಗಬೇಕು ಎಂದರು.
ಸಂವಿಧಾನದ ಆಶಯದಡಿ ಸರ್ಕಾರವು ವಿದ್ಯಾರ್ಥಿನಿಯರಿಗೆ ಕಡ್ಡಾಯ ಶಿಕ್ಷಣ ನೀಡುತ್ತಿದ್ದು, ಎಲ್ಲ ವಿದ್ಯಾರ್ಥಿನಿಯರು ಇದರ ಸೌಲಭ್ಯ ಪಡೆಯಬೇಕು. ಹಾಗೆಯೇ ಮೂಲಭೂತ ಕರ್ತವ್ಯಗಳನ್ನು ತಪ್ಪದೇ ಪಾಲಿಸಬೇಕು ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ರಾಘವೇಂದ್ರ ಮಾತನಾಡಿ, ರಾಷ್ಟ್ರಧ್ವಜ, ರಾಷ್ಟ್ರಗೀತೆಯನ್ನು ಎಲ್ಲ ಸಮಯದಲ್ಲಿ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅದರಂತೆ ನಮ್ಮ ರಾಷ್ಟ್ರದ ಸಂಪತ್ತು ರಕ್ಷಣೆ ಮಾಡುವುದು ಎಲ್ಲರ ಹೊಣೆಯಾಗಿದೆ ಎಂದು ಹೇಳಿದರು.
ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ವಿಠಲದಾಸ ಪ್ಯಾಗೆ, ಉಪ ಪ್ರಾಂಶುಪಾಲ
ಸಂಜುಕುಮಾರ ಹೆಗ್ಡೆ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ ತರನಳ್ಳಿ, ಜಿಲ್ಲಾ ಕಾನೂನು
ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಶಂಕರೆಪ್ಪ ಜನಕಟ್ಟಿ, ಅನೀಲ ಬಿ.ಮೇತ್ರೆ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು
ಉಪಸ್ಥಿತರಿದ್ದರು. ಸಹ ಶಿಕ್ಷಕ ಬಸಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್