ಮೊರಾರ್ಜಿ ವಸತಿ ಶಾಲೆ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
Team Udayavani, Aug 13, 2018, 12:23 PM IST
ಹುಮನಾಬಾದ: ಮಾಣಕನಗರದ ಮಾಣಿಕಪ್ರಭು ಕ್ರೀಡಾಂಗಣದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಖೋಖೋ ಸ್ಪರ್ಧೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ| ಚಂದ್ರಶೇಖರ ಬಿ. ಪಾಟೀಲ, ಕ್ರೀಡೆ ಒಳಗೊಂಡಂತೆ ಯಾವುದೇ ಕ್ಷೇತ್ರ ಆಗಿದ್ದರೂ ಸರಿ ಸಾಧಿಸುವ ಛಲ ಇದ್ದರೇ ಅಸಾಧ್ಯವಾದದ್ದು ಸಾಧ್ಯವಾಗುತ್ತದೆ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಚಪ್ಪ ವಾಲಿ, ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ಲಿಂಗರಾಜ ಎಖ್ಖೆಳ್ಳಿಕರ್, ಶಿಕ್ಷಣ ಸಂಯೋಜಕ ರಮೇಶ ರಾಜೋಳೆ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಉಮಾಕಾಂತ ಕುಂಬಾರ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಶೇಖ್ ಮೆಹಬೂಬ್, ಸುರೇಂದ್ರನಾಥ ಹುಡಗೀಕರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ