ದುಃಖಕ್ಕೆ ಧರ್ಮವೇ ದಿವ್ಯ ಔಷಧ: ಘನಲಿಂಗಶ್ರೀ


Team Udayavani, Aug 30, 2018, 4:37 PM IST

bid-2.jpg

ಬಸವಕಲ್ಯಾಣ: ಗವಿಮಠದ ಮೂಲ ಜಗದ್ಗುರುಗಳಾದ ಘನಲಿಂಗ ರುದ್ರಮುನಿಗಳು ಶ್ರೇಷ್ಠ ಶಿವಯೋಗ ಸಾಧಕರಾಗಿದ್ದರು ಎಂದು ತ್ರಿಪುರಾಂತ ಗವಿಮಠದ ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು
ಹೇಳಿದರು. 

ನಗರದ ಗವಿಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಶ್ರೀ ಜಗದ್ಗುರು ಘನಲಿಂಗ ರುದ್ರಮುನಿ ಶಿವಾಚಾರ್ಯರ ಗವಿಮಠ
ಟ್ರಸ್ಟ್‌, ಶ್ರೀ ಮದ್ವೀರಶೈವ ಸದೊಧನ ಸಂಸ್ಥೆ ತಾಲೂಕು ಘಟಕ, ವೀರಶೈಶ ಲಿಂಗಾಯತ ಸಂಘಟನಾ ವೇದಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವೀರಶೈವ ಲಿಂಗಾಯತ ಧರ್ಮ ಗ್ರಂಥವಾದ ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ವಿಶೇಷ ಉಪನ್ಯಾಸ ಮಾಲೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು.

ದೀರ್ಘ‌ಕಾಲ ಯೋಗ ಸ್ಥಿತಿಯಲ್ಲಿ ಕುಳಿತಾಗ ಹಾವು ಮೊದಲಾದ ವಿಷ ಜಂತುಗಳು ಮೈಮೆಲೆ ಹರಿದಾಡಿದ್ದರೂ ವಿಚಲಿತಗೊಳ್ಳದೇ ಏಕಾಗ್ರತೆಯಲ್ಲಿ ತಪಸ್ಸು ಮಾಡುತ್ತಿದ್ದರು. ಇದರಿಂದಲೇ ರುದ್ರಮುನಿಗಳು ಘನಲಿಂಗ ರುದ್ರಮುನಿ ಎಂದು ಪ್ರಸಿದ್ಧರಾಗಿದ್ದಾರೆ ಎಂದು ನುಡಿದರು.

ಹಿಂದಿನ ಕಾಲದಲ್ಲಿ ಸತ್ಯಕ್ಕಾಗಿ ಶಿವನಿಗಾಗಿ ಬದುಕಿ ಪ್ರಾಣಗೈದವರು ಅನೇಕರಿದ್ದಾರೆ. ಆದರೆ ಈಗ ಸತ್ಯಕ್ಕಾಗಿ ಹಾಗೂ ಶಿವನಿಗಾಗಿ ಬದುಕುವವರು ಕಡಿಮೆಯಾಗುತ್ತಿರುವುದು ದುರ್ದೈವದ ಸಂಗತಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸಂಸ್ಥೆ ತಾಲೂಕು ಘಟಕದ ಅಧ್ಯಕ್ಷ ನಿವೃತ್ತ ಕೃಷಿ ಅಧಿಕಾರಿ ಹಾಗೂ ಅಧ್ಯಕ್ಷತೆ ವಹಿಸಿದ್ದ ಬಸವಂತಪ್ಪ ಲವಾರೆ ಮಾತನಾಡಿ, ಜಗದ್ಗುರು ಘನಲಿಂಗರಲ್ಲಿ ಅಪಾರ ಶ್ರದ್ಧಾ ಭಕ್ತಿ ಉಳ್ಳವರು ಗುರುವಿನ ಅಮೂಲ್ಯ ಸೇವೆ ಸಲ್ಲಿಸಬೇಕು
ಎಂಬ ಉದ್ದೇಶದಿಂದ ಲಕ್ಷಾಂತರ ರೂ. ಖರ್ಚು ಮಾಡಿ ಗವಿಮಠದ ಗುರುವೆ ಎಂಬ ಧ್ವನಿ ಸುರುಳಿ ಸಿಡಿ ಮಾಡಲಾಗಿದೆ ಎಂದು ಹೇಳಿದರು.

ಖ್ಯಾತ ಮಕ್ಕಳ ತಜ್ಞ ಡಾ| ಜಿ.ಎಸ್‌. ಭುರಾಳೆ ಮಾತನಾಡಿ, ಶ್ರೀ ಅಭಿನವ ಗುರುಗಳು ಶ್ರಾವಣ ಮಾಸದಲ್ಲಿ ಗವಿಮಠದಲ್ಲಿ ಧರ್ಮಮಾರ್ಗ ಬೋಧಿಸುವ ಶ್ರೇಷ್ಠ ಕಾರ್ಯ ಮಾಡುತ್ತ ಭಕ್ತರದಲ್ಲಿ ಜಾಗೃತಿ ಮುಡಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.

ಪ್ರೊ| ಸೂರ್ಯಕಾಂತ ಶೀಲವಂತ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಮಲ್ಲಿಕಾರ್ಜುನ ಜಾಫರ್‌ ವಾಡಿ,
ಟ್ರಸ್ಟ್‌ ಕಾರ್ಯಾಧ್ಯಕ್ಷ ಶರಣಪ್ಪ ಬಿರಾದಾರ, ಬಸವೇಶ್ವರ ಬೆರಳಚ್ಚು ಸಂಸ್ಥೆ ಪ್ರಾಚಾರ್ಯ ಎ.ಜಿ. ಪಾಟೀಲ, ಪ್ರೊ| ರುದ್ರೇಶ್ವರ ಸ್ವಾಮಿ ಗೋರ್ಟಾ ಇದ್ದರು. ಪ್ರಭುಲಿಂಗಯ್ಯ ಟಂಕಸಾಲಿಮಠ ನಿರೂಪಿಸಿದರು. ಕಾಶಿನಾಥಸ್ವಾಮಿ ವಂದಿಸಿದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.