ಚುಳಕಿನಾಲಾಕ್ಕಿಲ್ಲ ಒಳ ಹರಿವು


Team Udayavani, Aug 31, 2018, 12:22 PM IST

bid-2.jpg

ಬಸವಕಲ್ಯಾಣ: ಮಳೆಗಾಲ ಪ್ರಾರಂಭವಾಗಿ ಮೂರು ತಿಂಗಳು ಗತಿಸುತ್ತ ಬಂದರೂ, ನಗರ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರಿಗೆ, ರೈತರಿಗೆ ಕುಡಿಯುವ ನೀರಿಗೆ ಆಸರೆಯಾದ ಚುಳಕಿನಾಲಾ ಜನಾಶಯದಲ್ಲಿ ಈ ಪ್ರಸಕ್ತ ವರ್ಷದಲ್ಲಿ ಒಂದುಹನಿಯೂ ಹೊಸ ನೀರು ಸಂಗ್ರಹವಾಗಿಲ್ಲ.

ಜನಾಶಯದ ಗರಿಷ್ಠ ನೀರಿನ ಸಾಮರ್ಥ್ಯ 1.18 ಟಿಎಂಸಿ, ಶೇಖರಣಾ ಸಾಮರ್ಥ್ಯ ಒಟ್ಟು 0.983 ಟಿಎಂಸಿ ಹಾಗೂ ಕ್ರೇಸ್ಟನ್‌ ಮಟ್ಟ 58,700 ಮೀ. ಮತ್ತು ತೂಬಿನ ತಳಮಟ್ಟ 584.30 ಮೀ. ಇದೆ. ಎರಡು ವರ್ಷಗಳ ಹಿಂದೆ ಮಳೆ ಕೊರತೆಯಿಂದ ಜಲಾಶಯ ಸಂಪೂರ್ಣ ಬತ್ತಿ ಉಪಯೋಗಕ್ಕೆ ಬಾರದಂತಾಗಿ, ಕೋಟ್ಯಂತರ ರೂ. ವೆಚ್ಚದಲ್ಲಿ ಯೋಜನೆ ರೂಪಿಸಿ 10 ಕಿ.ಮೀ. ದೂರ ಇರುವ ನಗರಕ್ಕೆ ನೀರು ಸರಬರಾಜು ಮಾಡಲಾಗುತ್ತಿತ್ತು. 

ಕಳೆದ ವರ್ಷ ಅತಿವೃಷ್ಠಿಯಿಂದ ಜಲಾಶಯ ಭರ್ತಿ ಆಗಿರುವುದರಿಂದ ಜಲಾಶಯದ ಸಾಮರ್ಥ್ಯ ನೋಡಿಕೊಂಡು ಒಂದು ದಿನದಲ್ಲಿ ಎರಡು ಗೇಟ್‌ ನೀರು ಹೊರಗಡೆ ಹರಿಸುವ ಜೊತೆಗೆ, ಕೋಟ್ಯಂತರ ರೂ. ವೆಚ್ಚದ ಯೋಜನೆಗೆ ಮರು ಜೀವ ಸಿಕ್ಕಂತಾಗಿದ್ದು, ಬಸವಕಲ್ಯಾಣಕ್ಕೆ ನಿತ್ಯ ಇಂದು 1.94 ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ.

ಪ್ರಸಕ್ತ ವರ್ಷದ ಮಳೆಗಾಲ ಆರಂಭ ತಿಂಗಳಲ್ಲಿ 100 ಎಂ.ಎಂ. ಮಳೆ ಬಂದಾಗ 591 ಮೀ. ಹೊಸ ನೀರು ಸಂಗ್ರಹವಾಗಿತ್ತು. ಆದರೆ ಮಧ್ಯದಲ್ಲಿ ಒಂದು ತಿಂಗಳು ಮಳೆ ಬಾರದ ಹಿನ್ನೆಲೆಯಲ್ಲಿ 590.87 ಮೀ.ಗೆ ಇಳಿಕೆ ಆಗಿರುವುದು ಸಾರ್ವಜನಿಕರು ಮತ್ತು ರೈತರು ಆತಂಕ ಪಡುವಂತಾಗಿದೆ. ಕಾರಣ ಜಲಾಶಯದಲ್ಲಿ ನೀರು ಇದ್ದರೆ ಮಾತ್ರ ಸುತ್ತಮುತ್ತಲಿನ ಕೊಳವೆ ಬಾವಿ ಹಾಗೂ ತೋಟದ ಬಾವಿಗಳಲ್ಲಿ ಬೇಸಿಗೆಯಲ್ಲಿ ನೀರು ಇರುತ್ತವೆ.

ಇದರಿಂದ ಬೆಳೆಗಳಿಗೆ ಮತ್ತು ಜಾನುವಾರುಗಳಿಗೆ ನೀರು ಕಡಿಮೆ ಆಗುವುದಿಲ್ಲ. ಒಂದು ವೇಳೆ ಮಳೆ ಬಾರದಿದ್ದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ ಎಂಬುದು ರೈತರ ಅಭಿಪ್ರಾಯವಾಗಿದೆ.

ಪ್ರತಿವರ್ಷ ಸೆಪ್ಟೆಂಬರ್‌ ತಿಂಗಳಲ್ಲಿ ಬರುವ ಮಳೆಯಿಂದ ಜಲಾಶಯಕ್ಕೆ ಹೆಚ್ಚು ನೀರು ಸಂಗ್ರಹವಾಗುತ್ತವೆ ಎನ್ನುವುದು
ಅಧಿಕಾರಿಗಳ ಮಾತು. ಮುಂದಿನ ತಿಂಗಳಲ್ಲೂ ಮಳೆ ಆಗದಿದ್ದರೆ ಸಾರ್ವಜನಿಕರು ಮತ್ತು ರೈತರು ಸಮಸ್ಯೆ ಎದುರಿಸಬೇಕಾಗುತ್ತದೆ.

ಸೆಪ್ಟೆಂಬರ್‌ನಲ್ಲಿ ಚನ್ನಾಗಿ ಮಳೆ ಬಂದರೆ ನಮ್ಮ ಜಲಾಶಯದ ಸಾಮರ್ಥ್ಯಕ್ಕೆ ತಕ್ಕಂತೆ ನೀರು ಶೇಖರಣೆ ಆಗಬಹುದು. ಒಂದು ವೇಳೆ ಮಳೆ ಕೈ ಕೊಟ್ಟರು ಒಂದು ವರ್ಷದ ವರೆಗೂ ನಗರಕ್ಕೆ ನೀರು ಸರಬರಾಜು ಮಾಡುವಷ್ಟು ನೀರು ಇದೆ. 
  ಚಂದ್ರಕಾಂತ ಸಕ್ಕರೆಭಾವಿ, ಜಲಾಶಯ ಅಧಿಕಾರಿ, ಬಸವಕಲ್ಯಾಣ

ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.