ಹಳ್ಳಿಖೇಡ(ಬಿ) ಪುರಸಭೆ ಚುನಾವಣೆ ಮತದಾನಕ್ಕೆ ಸಜ್ಜು


Team Udayavani, Aug 31, 2018, 1:48 PM IST

bid-3.jpg

ಹುಮನಾಬಾದ: ಹಳ್ಳಿಖೇಡ(ಬಿ) ಪುರಸಭೆಯ 23ವಾರ್ಡ್‌ಗಳಿಗೆ ಆ.31ರಂದು ನಡೆಯುವ ಚುನಾವಣೆಗೆ ತಾಲೂಕು ಆಡಳಿತ ಸಂಪೂರ್ಣ ಸಜ್ಜಾಗಿದೆ. ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಸಾರಿಗೆ ಸಂಸ್ಥೆ ಬಸ್‌, ಕ್ರೂಸರ್‌ ಮೊದಲಾದ ವಾಹನಗಳಲ್ಲಿ ಆಡಳಿತ ಗುರುವಾರ ಬೆಳಗ್ಗೆ ಮತದಾನ ನಡೆಯಲಿರುವ ಹಳ್ಳಿಖೇಡ(ಬಿ) ಪಟ್ಟಣದ ಸರ್ಕಾರಿ ಪ್ರೌಢಶಾಲೆಗೆ ಕಳಿಸಿದೆ. ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿ ನಿಯೋಜಿಸಲಾದ ತಮ್ಮ ತಮ್ಮ ಮತಗಟ್ಟೆಗಳಿಗೆ, ಮತದಾನಕ್ಕೆ ಅಗತ್ಯವಿರುವ ಸಕಲ ಸಾಮಗ್ರಿ ಸಮೇತ ಸಂಜೆ 4ಗಂಟೆಯೊಳಗೆ ತೆರಳಿ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿರುವುದು ಕಂಡುಬಂತು.

ಎಸಿ ಅಂತಿಮ ಪರಿಶೀಲನೆ: ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಎಚ್‌. ಆರ್‌.ಮಹಾದೇವ್‌ ಅವರು ಪರಿಶೀಲನೆ ನಡೆಸಿದ ಬೆನ್ನಲ್ಲೆ ಅವರ ಆದೇಶದನ್ವಯ ಬಸವಕಲ್ಯಾಣ ಉಪವಿಭಾಗಾಧಿಕಾರಿ ಶರಣಬಸಪ್ಪ ಕೊಟ್ಯಪ್ಪಗೋಳ್‌ ಅವರು ರಿಟೆನಿಂಗ್‌ ಅಧಿಕಾರಿಗಳು ಒಳಗೊಂಡಂತೆ ಚುನಾವಣಾ ವಿಭಾಗದ ಸಿಬ್ಬಂದಿಯ ಸಮೇತ ಗುರುವಾರ ತೆರಳಿ ಮತಗಟ್ಟೆ ಕೇಂದ್ರಗಳಲ್ಲಿ ಫ್ಯಾನ್‌, ವಿದ್ಯುತ್‌ ದೀಪ, ಕುಡಿಯುವ ನೀರು, ಶೌಚಾಲಯ ಇತರೆ
ವ್ಯವಸ್ಥೆಗಳ ಕುರಿತು ಪರಿಶೀಲಿಸಿದರು. ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿ, ಪೊಲೀಸರನ್ನು ಒಳಗೊಂಡಂತೆ ಚುನಾವಣೆ ಸೇವೆಯಲ್ಲಿರುವ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಂಡು, ಶಾಂತಿಯುತ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಯಾವ ವಾರ್ಡ್‌, ಮತಗಟ್ಟೆ ಎಲ್ಲಿ?: 1-ಹನುಮಾನ ಮಂದಿರ ಹತ್ತಿರದ ಅಂಗನವಾಡಿ ಕೇಂದ್ರ, 2-ಪಾಗಾ ಗಲ್ಲಿ ಅಂಗನವಾಡಿ ಕೇಂದ್ರ, 3-ಸರ್ಕಾರಿ ಪ್ರೌಢಶಾಲೆ ಶಾಲೆಯ ಎಡ ಭಾಗದ ಕಟ್ಟಡ, 4-ಸರ್ಕಾರಿ ಪ್ರೌಢಶಾಲೆ ಬಲಭಾಗದ ಕಟ್ಟಡ, 5-ಸರ್ಕಾರಿ ಪ್ರೌಢಶಾಲೆಯ ಮಧ್ಯಭಾಗದ ಕಟ್ಟಡ, 6-ಸರ್ಕಾರಿ ಪ್ರೌಢ ಶಾಲೆಯ ಕೆಇಬಿ ಕಟ್ಟಡ ಪಕ್ಕದ ಕೊಠಡಿ, 7-ಕಿಂಡಿ ಬಾಹೇರ್‌ ಸಮೀಪದ ಅಂಗನವಾಡಿ ಕೇಂದ್ರ, 8-ವಡ್ಡರ ಗಲ್ಲಿ ಹತ್ತಿರದ ಅಂಗನವಾಡಿ ಕೇಂದ್ರ, 9-ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಎಡ ಭಾಗದ ಕಟ್ಟಡ, 10- ಮರಗೆಮ್ಮ ದೇವಸ್ಥಾನ ಪಕ್ಕದ ಅಂಗನವಾಡಿ ಕಟ್ಟಡ, 11-ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಡ ಭಾಗದ ಹೊಸ ಕಟ್ಟಡ, 12-ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ ಕಟ್ಟಡ ಬಲಭಾಗದ ಕೋಣೆ, 13- ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಬಲ ಭಾಗದ ಕಟ್ಟಡ, 14-ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಎಡ ಭಾಗದ ಕಟ್ಟಡ, 15- ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಬಲಭಾಗದ ಕಟ್ಟಡ, 16-ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮಧ್ಯಭಾಗದ ಕಟ್ಟಡ, 17-ತಕ್ಯಾಗಲ್ಲಿ ಮುರಾದನಗರ ಅಂಗನವಾಡಿ ಕೇಂದ್ರ ಕಟ್ಟಡ, 18-ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ, 19- ಪುರಸಭೆ ಕಾರ್ಯಾಲಯದ ಪಕ್ಕದ ಗ್ರಂಥಾಲಯ ಕಟ್ಟಡ, 20-ಪುರಸಭೆ ಕಾರ್ಯಾಲಯ ಕಟ್ಟಡ, 21-ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಎಐಪಿ ಕಟ್ಟಡ, 22-ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಡ ಭಾಗದ ಕಟ್ಟಡ, 23-ಬಿಸ್‌.ಎಸ್‌.ಕೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ.

ಸೂಕ್ಷ್ಮ 2,7,11,18,23. ಅತೀ ಸೂಕ್ಷ್ಮ: 1,3,12,17,19 ಹಾಗೂ 13 ಸಾಧಾರಣ ಮತಗಟ್ಟೆಗಳೆಂದು ಗುರುತಿಸಲಾಗಿದೆ. ರಿಟೇನಿಂಗ್‌ ಅಧಿಕಾರಿಗಳಾದ ಡಾ| ಶಂಕರ ಪಟವಾರಿ, ಶಂಭುಲಿಂಗ ಹಿರೇಮಠ, ಶಿವರಾಚಪ್ಪ
ವಾಲಿ, ಸಿಪಿಐ ಜೆ.ಎಸ್‌. ನ್ಯಾಮಗೌಡರ್‌, ಪಿಎಸ್‌ ಐಗಳಾದ ಖಾಜಾ ಹುಸೇನಿ, ಎ.ಟಿ. ಸಂತೋಷ ಸೇರಿದಂತೆ ಹುಮನಾಬಾದ್‌ ಉಪವಿಭಾಗ ವ್ಯಾಪ್ತಿಯ ಪ್ರಮುಖ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.