ಜಿಲ್ಲಾಡಳಿತ ಸಂಕೀರ್ಣ; ಮತ್ತೆ ಸ್ಥಳ ಗೊಂದಲ?


Team Udayavani, Sep 7, 2018, 2:07 PM IST

bid-1.jpg

ಬೀದರ: ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿ ವರ್ಷ ಕಳೆದರೂ ಇಂದಿಗೂ ಸ್ಥಳಗೊಂದಲ ಬಗೆಹರಿಯದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕಳೆದ ಕೆಲ ವರ್ಷಗಳಿಂದ ಜಿಲ್ಲಾ ಕಚೇರಿಗಳ ಸಂಕೀರ್ಣ ನಿರ್ಮಾಣ ಕುರಿತು ಸಾಕಷ್ಟು ಚರ್ಚೆಗಳು ನಡೆದಿದ್ದು, ಸದ್ಯ ಇರುವ ಸ್ಥಳದಲ್ಲಿಯೇ ಕಟ್ಟಡ ಕಾಮಗಾರಿ ಪ್ರಾರಂಭಿಸುವಂತೆ ಅನೇಕ ರಾಜಕೀಯ ಮುಖಂಡರು ಆಗ್ರಹಿಸಿದ್ದರು. ಅಂದಿನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 48 ಕೋಟಿ ರೂ. ಅನುದಾನದ ಸಂಕೀರ್ಣಕ್ಕೆ 2017ರ ಆಗಸ್ಟ್‌ 13ರಂದು ಶಂಕುಸ್ಥಾಪನೆ ಕೂಡ ನೆರವೇರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನಗಳನ್ನು ಪೂರೈಸಿದೆ. ಆದರೆ, ಹಳೆ ಕಡತಗಳು ಮಾತ್ರ ಅನುಷ್ಠಾನಕ್ಕೆ ಬರುತ್ತಿಲ್ಲ. ಜಿಲ್ಲೆಯ ಇಬ್ಬರು ಶಾಸಕರಿಗೆ ಕ್ಯಾಬಿನೇಟ್‌ ದರ್ಜೆ ಮಂತ್ರಿ ಭಾಗ್ಯ ಕೂಡ ದೊರಕಿದೆ. ಆದರೆ, ಜಿಲ್ಲೆಯ ಮಹತ್ವದ ಯೋಜನೆಯಲ್ಲೊಂದಾದ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ ಕಟ್ಟಡ ಕಾರ್ಯಕ್ಕೆ ಯಾರೊಬ್ಬರೂ
ಮುಂದಾಗದಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಈಶ್ವರ್‌ ಖಂಡ್ರೆ ಸಂಕೀರ್ಣ ಕಟ್ಟಡವನ್ನು ನಗರ ಹೊರವಲಯದ ಮಾಮನಕೇರಿ ಸಮೀಪದ ಗುಡ್ಡದಲ್ಲಿ ನಿರ್ಮಿಸಲು ಆಲೋಚನೆ ನಡೆಸಿದರು. ಆದರೆ, ಸಂಸದ ಭಗವಂತ್‌ ಖೂಬಾ ಬಹಿರಂಗವಾಗಿ ಖಂಡ್ರೆ ವಿರುದ್ಧ ಕದನಕ್ಕಿಳಿದಿದ್ದರು. ಖುದ್ದು ಕಾಂಗ್ರೆಸ್‌ ಶಾಸಕರಾದ ವಿಜಯಸಿಂಗ್‌, ರಹೀಂ ಖಾನ್‌, ಪಕ್ಷೇತರ ಶಾಸಕ ಅಶೋಕ್‌ ಖೇಣಿ ಸೇರಿದಂತೆ ಇತರ ಜನಪ್ರತಿನಿಧಿಗಳು ಮಾಮನಕೇರಿ ಸ್ಥಳವನ್ನು ವಿರೋಧಿಸಿದ್ದರು.

ಮಾಮನಕೇರಿ ಸಮೀಪ ಖಂಡ್ರೆ ಕುಟುಂಬಕ್ಕೆ ಸೇರಿದ ಜಮೀನಿದ್ದು, ಅದೇ ಕಾರಣಕ್ಕೆ ಖಂಡ್ರೆ ಆ ಸ್ಥಳ ಕುರಿತು ಒಲವು ಹೊಂದಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ನಂತರ ಅನಿವಾರ್ಯವಾಗಿ ಖಂಡ್ರೆ ತಮ್ಮ ನಿಲುವು ಬದಲಿಸಬೇಕಾಯಿತು. ಬಳಿಕ ಈಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸಮೀಪವೇ ಕಟ್ಟಲು ತೀರ್ಮಾನಿಸಲಾಯಿತು.

ಟೆಂಡರ್‌ ಕರೆದಿಲ್ಲ: ಜಿಲ್ಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಯೋಜನೆಗಳ ಜೊತೆಗೆ ಜಿಲ್ಲಾಡಳಿತ ಸಂಕೀರ್ಣಗಳ ಕಟ್ಟಡಕ್ಕೂ ಶಂಕುಸ್ಥಾಪನೆ ನೆರವೇರಿಸಿದ್ದರು. ಆದರೆ, ಈವರೆಗೂ ಕಾಮಗಾರಿಗೆ ಟೆಂಡರ್‌ ಕರೆಯುವುದಾಗಲಿ ಅಥವಾ ಇನ್ನಿತರ ಪೂರ್ವ ಸಿದ್ಧತಾ ಕಾರ್ಯಗಳು ಕೂಡ ಆರಂಭವಾಗಿಲ್ಲ. ಅಲ್ಲದೇ ಯಾವ ಸ್ಥಳದಲ್ಲಿ ಸಂಕೀರ್ಣದ ಕಟ್ಟಡ ನಿರ್ಮಿಸಬೇಕು ಎಂಬುದೇ ಇಂದಿಗೂ ಸ್ಪಷ್ಟವಾಗಿ ಗೊತ್ತಾಗದ ಸ್ಥಿತಿ ನಿರ್ಮಾಣವಾಗಿದೆ.

ಜನರಿಗೆ ಸಮಸ್ಯೆ: ಈ ಮಧ್ಯದಲ್ಲಿ ನಗರದ ಹೊರವಲಯದ ನೌಬಾದ ಸಮೀಪದ ರೇಷ್ಮೆ ಇಲಾಖೆಯ 38 ಎಕರೆ ಭೂಮಿಯಲ್ಲಿ ಕಟ್ಟಡ ನಿರ್ಮಾಣ ಕುರಿತು ಅಧಿ ಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ನಗರದಿಂದ ಸರಿಸುಮಾರು ಆರು ಕಿ.ಮೀ. ದೂರದ ನೌಬಾದ್‌ ಸಮೀಪದಲ್ಲಿ ಜಿಲ್ಲಾಡಳಿತ ಕಚೇರಿ ಸಂಕೀರ್ಣ ನಿರ್ಮಿಸಿದರೆ ಎರಡೂಮೂರು ತಾಲೂಕುಗಳಿಗೆ ಅನುಕೂಲವಾಗಲಿದೆ ಎಂಬ ಮಾಹಿತಿ ನೀಡಿರುವ ಕುರಿತು ಖುದ್ದು ಜಿಲ್ಲಾ ಉಸ್ತುವಾರಿ ಸಚಿವರೆ ತಿಳಿಸಿದ್ದಾರೆ. ನಗರದಿಂದ ದೂರ ಪ್ರದೇಶದಲ್ಲಿ ಕಚೇರಿಗಳನ್ನು ಸ್ಥಾಪಿಸಿದರೆ ಸಾರ್ವಜನಿಕರಿಗೆ
ತೊಂದರೆಯಾಗುತ್ತದೆ. ಅಲ್ಲದೇ ನಗರದ ಅನೇಕ ವ್ಯಾಪರಸ್ಥರು ಕೂಡ ಸಮಸ್ಯೆ ಎದುರಿಸುವ ಆತಂಕದಲ್ಲಿದ್ದಾರೆ ಎಂಬುದು ಸಾರ್ವಜನಿಕರ ಮಾತು. ಯಾವ ಕಾರಣಕ್ಕೆ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಇದ್ದ ಸ್ಥಳದಲ್ಲಿಯೇ ಯಾಕೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ ಎಂಬ ಹತ್ತಾರು ಪ್ರಶ್ನೆಗಳು ಉದ್ಬವವಾಗಿದ್ದು, ಇದೀಗ ಮತ್ತೂಂದು ವಿವಾದಕ್ಕೆ ಕಾರಣವಾಗಿದೆ.

ಭೂ ಮಾಫಿಯಾ ಶಂಕೆ?: ಈಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸ್ಥಳದಲ್ಲಿಯೇ ಬಹು ಮಹಡಿ ಕಟ್ಟಡ ನಿರ್ಮಿಸಿ ವಿವಿಧ ಇಲಾಖೆಗಳು ಒಂದೇ ಸೂರಿನಡಿ ಕಾರ್ಯ ನಿರ್ವಹಿಸುವಂತೆ ಮಾಡಬಹುದಾಗಿದೆ. ಅಲ್ಲದೇ ಸಾರ್ವಜನಿಕರಿಗೂ ಕೂಡ ಅನೂಕುಲವಾಗುತ್ತದೆ. ಸದ್ಯ ಇರುವ ಸ್ಥಳ ಬಿಟ್ಟು ನಗರದಿಂದ ಆರು ಕಿ.ಮೀ. ದೂರದಲ್ಲಿ ಕಚೇರಿಗಳು ಇದ್ದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಯಾರಿಗೆ ಲಾಭ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಇಂತಹ ಆಲೋಚನೆ
ನಡೆಸಿದ್ದಾರೆ. ಭೂ ಲಾಬಿ ಕೈವಾಡವಿದೆಯೇ ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ.

ನಗರದ ದಶ ದಿಕ್ಕುಗಳಲ್ಲಿ ಗುಡ್ಡ ಅಗೆದು ಕಲ್ಲುಗಳನ್ನು ಹೂಳಿರುವ ರಿಯಲ್‌ ಎಸ್ಟೇಟ್‌ ಏಜೆಂಟ್‌ರು ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ ಕಟ್ಟಡ ನಿರ್ಮಾಣ ಸ್ಥಳಕ್ಕಾಗಿ ಕಾಯುತ್ತಿದ್ದಾರೆ. ಮೊದಲು ಮಾಮನಕೇರಿ ಸ್ಥಳ ಗುರುತಿಸಿದಾಗಲೂ ಮಾಮನಕೇರಿ ಸುತ್ತಮುತ್ತಲಿನ ಸಾಕಷ್ಟು ಏಜೆಂಟ್‌ರು ಒಳಗೊಳಗೆ ಸಂತಸ ಪಟ್ಟಿದರು. ಆದರೆ, ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಮಾಧ್ಯಮಗಳ ಸಂಘಟಿತ ಹೋರಾಟದಿಂದ ಸ್ಥಳ ಜಿಲ್ಲಾಧಿಕಾರಿ
ಕಚೇರಿಗೆ ತಲುಪಿತು. ಈಗ ಎಲ್ಲವೂ ಸುಸೂತ್ರವಾಗಿ ನೆರವೇರಿದೆ ಎಂದುಕೊಂಡರೆ ಅಧಿಕಾರಿಗಳು ಸ್ಥಳ
ಬದಲಾವಣೆಗೆ ವಿಶೇಷ ಆಸಕ್ತಿ ಹೊಂದಿರುವುದು ಹಲವು ಅನುಮಾನ ಹುಟ್ಟು ಹಾಕಿದೆ.

ಈಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತಲಿನ ಸ್ಥಳದಲ್ಲೇ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣಣ ನಿರ್ಮಾಣ ಮಾಡಲಾಗುವುದು. ಜಿಲ್ಲಾ ಧಿಕಾರಿಗಳು ಕೆಲವು ದಿನಗಳ ಹಿಂದೆ ಸ್ಥಳ ಬದಲಿಸುವ ಕುರಿತು ಚರ್ಚಿಸಿರೆ. ನೌಬಾದ್‌ ಸಮೀಪ ಕಟ್ಟಡ ನಿರ್ಮಿಸಿದರೆ ಎರಡೂಮೂರು ತಾಲೂಕುಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಸದ್ಯದಲ್ಲೇ ಸಭೆ ಕರೆದು, ಹಳೆ ಕಡತಗಳನ್ನು ತೆಗೆಸಿ ಚರ್ಚಿಸಲಾಗುವುದು. ಭೂ ಮಾಫಿಯಾ ಒತ್ತಡಕ್ಕೆ ಮಣಿಯುವುದಿಲ್ಲ. ಈ ಹಿಂದೇ ಈ ಕುರಿತು ಅನೇಕ ವಿವಾದಗಳು ಆಗಿದ್ದು, ಸದ್ಯ ಇರುವ ಸ್ಥಳದಲ್ಲಿಯೇ ಕಟ್ಟಡ ನಿರ್ಮಾಣಕ್ಕೆ ತೀರ್ಮಾನಿಸಲಾಗುವುದು.
 ಬಂಡೆಪ್ಪ ಖಾಶೆಂಪೂರ್‌, ಸಚಿವರು

ನಗರದ ಹೃದಯಭಾಗವಾದ ಅಂಬೇಡ್ಕರ್‌ ವೃತ್ತ, ಬಸವೇಶ್ವರ ವೃತ್ತ, ಬೋಮಗೋಂಡೇಶ್ವರ ವೃತ್ತ, ಮಹಾವೀರ ವೃತ್ತ, ರೈಲ್ವೆ ನಿಲ್ದಾಣ, ನಗರ ಸಾರಿಗೆ ನಿಲ್ದಾಣ ಹೀಗೆ ನಗರದ ಪ್ರಮುಖ ಜನನಿಬೀಡು ಪ್ರದೇಶವಾದ ಜಿಲ್ಲಾ ಧಿಕಾರಿಗಳ ಕಚೇರಿ ಸ್ಥಳ ಬಿಟ್ಟು ಬೇರೆಕಡೆಗೆ ಸ್ಥಳಾಂತರಿಸುವುದು ಜನಸಾಮಾನ್ಯರನ್ನು ಹೈರಾಣಾಗಿಸುವ ಕೆಲಸವಾಗುತ್ತದೆ. ಸದ್ಯ
ಇರುವ ಸ್ಥಳದಲ್ಲಿಯೇ ಜಿಲ್ಲಾಡಳಿತ ಸಂಕೀರ್ಣ ನಿರ್ಮಾಣವಾಗಬೇಕು ಎಂದು ಈ ಹಿಂದೆ ಹೋರಾಟ ಮಾಡಲಾಗಿತ್ತು. ಅಲ್ಲದೇ ಅಂದಿನ ಮುಖ್ಯಮಂತ್ರಿಗಳು ಕೂಡ ಅದೇ ಸ್ಥಳ ಗುರುತಿಸಿ ಶಂಕು ಸ್ಥಾಪನೆ ನಡೆಸಿದ್ದಾರೆ. ಬೇರೆ ಸ್ಥಳ ಗುರುತಿಸದೆ ಅಥವಾ ಯಾವುದೇ ವಿವಾದಗಳಿಗೆ ಆಸ್ಪದ ನೀಡದೆ ಇದ್ದ ಸ್ಥಳದಲ್ಲಿಯೇ ಕಾಮಗಾರಿ ಪ್ರಾರಂಭಿಸಬೇಕು.
 ಭಗವಂತ ಖೂಬಾ, ಸಂಸದರು

„ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.