ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಒತ್ತಾಯ
Team Udayavani, Sep 7, 2018, 2:30 PM IST
ಬೀದರ: ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪ್ರಾರಂಭಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿ ಕಾರಿಗಳು ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಅವರಿಗೆ ಒತ್ತಾಯಿಸಿದರು.
ನಗರದಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಪ್ರಾಂಗಣದಲ್ಲಿ ಈ ಕುರಿತು ಚರ್ಚಿಸಿದ ರೈತ ಸಂಘದ
ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಬಿಎಸ್ ಎಸ್ಕೆ ಕಾರ್ಖಾನೆಗೆ ಕೂಡಲೆ 50 ಕೋಟಿ ಅನುದಾನ ಬಿಡುಗಡೆಗೊಳಿಸಿ
ಕಾರ್ಖಾನೆ ಪ್ರಾರಂಭಿಸಬೇಕು. ಬಾಕಿ ಕಬ್ಬಿನ ಹಣ ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಹೆಸರು ಖರೀದಿ ಕೇಂದ್ರಗಳ ಸಂಖ್ಯೆ ಹೆಚ್ಚಿಸಬೇಕು. ಕಳೆದ ವರ್ಷ 104 ಖರೀದಿ ಕೇಂದ್ರಗಳನ್ನು ತೆರೆಯಲಾಗಿತ್ತು. ಆದರೆ, ಈ ವರ್ಷ ಕೆವಲ 40 ಕೇಂದ್ರ ತೆರೆಯುವುದು ಸರಿ ಅಲ್ಲ ಎಂದರು.
ರೈತರ ಮಾತು ಆಲಿಸಿದ ಸಚಿವ ಬಂಡೆಪ್ಪ ಖಾಶೆಂಪೂರ, ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಖಂಡಿತ ಪ್ರಾರಂಭಗೊಳ್ಳುತ್ತದೆ. 50 ಕೋಟಿ ರೂ. ಅನುದಾನ ನೀಡಬೇಕು ಎಂಬುದು ಬೇಡ. ಒಟ್ಟಾರೆ ಕಾರ್ಖಾನೆ
ಪ್ರಾರಂಭಿಸಿ ರೈತರ ಕಬ್ಬು ಸಾಗಿಸುವ ಕೆಲಸ ಮಾಡುತ್ತೇನೆ. ಕಬ್ಬಿನ ಬಾಕಿ ಹಣ ಕುರಿತು ಕೂಡ ಅಧಿಕಾರಿಗಳ ಜೊತೆ
ಮಾತನಾಡುತ್ತೇನೆ. ಅಲ್ಲದೆ ಹೆಸರು ಖರೀದಿ ಕೇಂದ್ರ ಕುರಿತು ಕೂಡ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು.
ರೈತ ಸಂಘದ ಮುಖಂಡರಾದ ಸತೀಶ ನ್ನನೂರೆ, ಚಂದ್ರಶೇಖರ ಜಮಖಂಡಿ, ಶ್ರೀಮಂತ ಬಿರಾದಾರ, ಸಿದ್ದರಾಮಯ್ಯ ಅಣದೂರೆ, ವಿಠಲರೆಡ್ಡಿ ಅಣದೂರ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ