ಸಿದ್ಧಾಂತ ಶಿಖಾಮಣಿ-ವಚನ ಸಾಹಿತ್ಯ; ಉಪನ್ಯಾಸ
Team Udayavani, Sep 8, 2018, 11:00 AM IST
ಬಸವಕಲ್ಯಾಣ: ಸಿದ್ಧಾಂತ ಶಿಖಾಮಣಿ ಹಾಗೂ ವಚನಗಳು ಧರ್ಮದ ಮಾರ್ಗ ತೋರುವ ಶ್ರೇಷ್ಠ ಸಾಹಿತ್ಯವಾಗಿವೆ ಎಂದು ಕಾಂಗ್ರೆಸ್ ಮುಖಂಡ ಅರ್ಜುನ ಕನಕ ಹೇಳಿದರು.
ನಗರದ ಗವಿಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗವಿ ಮಠವು ಜಾತಿ ಮತ ಭೇದ ಮಾಡದೆ ಸಮಾನತೆ ಪಾಲಿಸುವ ಮಠವಾಗಿದೆ. ಅಭಿನವ ಶ್ರೀಗಳು ಚಿಕ್ಕವರಿದ್ದರೂ ಮಠವನ್ನು ಬಹಳ ಅಭಿವೃದ್ಧಿಪಡಿಸಿರುವುದು ಹೆಮ್ಮಯ ಸಂಗತಿಯಾಗಿದೆ ಎಂದು ನುಡಿದರು.
ಎರೋನಾಟಿಕ್ ಇಂಜಿನಿಯರ್ ವಿಶ್ವನಾಥ ಎಸ್. ಚನ್ಮಲ್ಲೆ ಮಾತನಾಡಿ, ನಾನು ತ್ರಿಪುರಾಂತದವನು. ಚಿಕ್ಕವನಾಗಿದ್ದಾಗ ಸ್ನೇಹಿತರಾದ ಶರಣಪ್ಪ ಬಿರಾದಾರ ಜೊತೆ ಗವಿಮಠಕ್ಕೆ ಬಂದು, ಜಗದ್ಗುರು ಘನಲಿಂಗರಲ್ಲಿ ಶ್ರದ್ಧೆ ಭಕ್ತಿಯಿಟ್ಟು
ಗುಹೆಯಲ್ಲಿ ಕುಳಿತು ಅಭ್ಯಾಸ ಮಾಡಿದ್ದಕ್ಕೆ ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಯಿತು ಎಂದು ಬಾಲ್ಯದ ಜೀವನ ಸ್ಮರಿಸಿದರು. ಸಾನ್ನಿಧ್ಯ ವಹಿಸಿದ್ದ ಮಠದ ಶ್ರೀಗಳು ಆಶೀರ್ವಚನ ನೀಡಿ, ಸಿದ್ಧಾಂತ ಶಿಖಾಮಣಿ ಹಾಗೂ ವಚನ
ಸಾಗಿತ್ಯವನ್ನು ಎಲ್ಲರೂ ಓದಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದರು ಭಕ್ತಾದಿಗಳಿಗೆ ಸಂದೇಶ ನೀಡಿದರು.
ಬಸವರಾಜ ಬಿರಾದಾರ್, ಶರಣಬಸಪ್ಪಾ ಬಿರಾದಾರ, ಸಂಸ್ಥೆಯ ಮಹಿಳಾ ಘಟಕದ ಅಧ್ಯಕ್ಷೆ ಸವೀತಾ ರಮೇಶ, ವೀರಣ್ಣಾ ಶೀಲವಂತ ಸೇರಿದಂತೆ ಮತ್ತಿತರರು ಇದ್ದರು. ಜಗದ್ಗುರು ಶ್ರೀ ಘನಲಿಂಗ ರುದ್ರಮುನಿ ಶಿವಾಚಾರ್ಯ
ಟ್ರಸ್ಟ್, ಶ್ರೀ ಮದ್ವೀರಶೈವ ಸದೊಧನ ಸಂಸ್ಥೆ ಮತ್ತು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ