ಬೇರೆ ಆಸತ್ರೆಗೆ ರೋಗಿಗಳ ಶಿಫಾರಸು ಬೇಡ


Team Udayavani, Sep 8, 2018, 11:08 AM IST

bid-2.jpg

ಬಸವಕಲ್ಯಾಣ: ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರು ರೋಗಿಗಳನ್ನು ಕಟುಂಬದ ಸದಸ್ಯರಂತೆ ಕಾಣಬೇಕು. ಇದರಿಂದ ತುರ್ತು ಪರಿಸ್ಥಿತಿ ಎದುರಾದಾಗ ರೋಗಿಗಳ ಪ್ರಾಣ ಉಳಿಸಲು ಸಹಾಯವಾಗುತ್ತದೆ ಎಂದು ಶಾಸಕ ಬಿ.ನಾರಾಯಣರಾವ್‌ ಹೇಳಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಎದುರಾದಾಗ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಜಿಲ್ಲಾ ಆಸ್ಪತ್ರೆ ಶಿಫಾರಸ್ಸು ಮಾಡುವುದು, ಜಿಲ್ಲಾ ಆಸ್ಪತ್ರೆ ವ್ಯದ್ಯರು ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವುದು ಸರಿಯಲ್ಲ ಎಂದರು. 

ರೋಗಿಗಳನ್ನು ಬೇರೆ ಕಡೆಗೆ ಒಯ್ಯುವಾಗ ರಸ್ತೆ ಮಧ್ಯದಲ್ಲೇ ಪ್ರಾಣ ಹೋಗಿರುವ ಎಷ್ಟೋ ಘಟನೆಗಳು ಕೂಡ ನಡೆದಿವೆ. ಆದ್ದರಿಂದ ವೈದ್ಯರು ಜವಾಬ್ದಾರಿ ತೆಗೆದು ಕೊಂಡು ಕೆಲಸ ಮಾಡಬೇಕು. ಅದಕ್ಕೆ ಬೇಕಾದ ಸಹಕಾರ ಮತ್ತು ಸೌಲತ್ತುಗಳನ್ನು ಸರಕಾರದಿಂದ ನಾವು ಒದಗಿಸಿ ಕೊಡುತ್ತೇವೆ ಎಂದರು.

ಹುಲಸೂರು ಮತ್ತು ಮಂಠಾಳ ಪಟ್ಟಣ ಪಂಚಾಯಿತಿ ಆಗುವ ಗ್ರಾಮಗಳಾಗಿವೆ. ಹಾಗಾಗಿ ಒಂದು ತಿಂಗಳೊಳಗೆ ವೈದ್ಯರನ್ನು ನೇಮಕ ಮಾಡಿಕೊಳ್ಳಬೇಕು. ಆಶಾ ಕಾರ್ಯಕರ್ತರು, ಎನ್‌ ಎಂ ಕಾರ್ಯಕರ್ತೆಯರನ್ನು ಯಾವ ಉದ್ದೇಶಕ್ಕಾಗಿ ಆಯ್ಕೆ ಮಾಡಿಕೊಳ್ಳಳಾಗಿದೆ ಎಂಬುದನ್ನು ತಿಳಿದು ಅವರ ಸದುಪಯೋಗ ಪಡೆಯಬೇಕು ಎಂದು ಸ್ಥಳದಲ್ಲಿದ್ದ ತಾಲೂಕು ಆರೋಗ್ಯ ಅಧಿಕಾರಿಗೆ ಸೂಚನೆ ನೀಡಿದರು.

ತಾಪಂ ಅಧ್ಯಕ್ಷೆ ಯಶೋಧಾ ರಾಠೊಡ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಆಗುತ್ತಿರುವ ಆಹಾರ ಪದಾರ್ಥಗಳು ಗುಣಮಟ್ಟದಿಂದ ಕೂಡಿರಬೇಕು. ಇಲ್ಲದಿದ್ದರೆ ವಾಪಸ್‌ ಕಳುಹಿಸಬೇಕು ಎಂದು ಸಂಬಂಧ ಪಟ್ಟ
ಅಧಿಕಾರಿ ಇಲಾಖೆ ಕುರಿತು ಮಾಹಿತಿ ನಿಡುತ್ತಿರುವಾಗ ಮಧ್ಯ ಪ್ರವೇಶಿಸಿ ಆದೇಶ ನೀಡಿದರು.

ಎಇಇ ರಾಜಕುಮಾರ ಮಾತನಾಡಿ, ಎಸ್‌ಕೆಆರ್‌ ಡಿಬಿ, ನಬಾರ್ಡ್‌ ಮತ್ತು ಜಿಲ್ಲಾ ಪಂಚಾಯಿತಿ ಸೇರಿದಂತೆ ಏಳು ಇಲಾಖೆಯಿಂದ ಒಟ್ಟು 195 ಕಾಮಗಾರಿ ಆರಂಭಿಸಲಾಗಿದೆ. ಅದರಲ್ಲಿ ಕೆಲವು ಮುಗಿದಿವೆ. ಮತ್ತೆ ಕೆಲವು ಪ್ರಗತಿ ಹಂತದಲ್ಲಿದ್ದು, ಅವನ್ನು ಕೂಡ ಶೀಘ್ರವಾಗಿ ಮುಗಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ನಂತರ ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ವಲಯ ಇಲಾಖೆ, ಪಶು ಸಂಗೋಪನಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಗಿರುವ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಓಂಪ್ರಕಾಶ ಪಾಟೀಲ, ಇಒ ವಿಜಯಕುಮಾರ ಮಡ್ಡೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಬೆರಳೆಣಿಕೆಯಷ್ಟು ಅಧಿಕಾರಿಗಳು ಭಾಗಿ ತಾಲೂಕಿನಲ್ಲಿ ಅಂದಾಜು 40ಕ್ಕೂ ಹೆಚ್ಚು ವಿವಿಧ ಇಲಾಖೆಗಳಿವೆ. ಆದರೆ ಕೆಡಿಪಿ ಸಭೆಯಲ್ಲಿ ಬೆರಳೆಣಿಯಷ್ಟು ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು. ಕೆಲವರು ಕಚೇರಿ ಸಿಬ್ಬಂದಿಗಳನ್ನು ಕಳುಹಿಸಿದ್ದರು. ಆದರೆ ಶಾಸಕ ಬಿ.ನಾರಾಣರಾವ್‌ ಅಧಿಕಾರಿಗಳ ಪರವಾಗಿ ಬಂದವರನ್ನು ಸಭೆಯಿಂದ ಹೊರಗೆ ಕಳುಹಿಸಿದರು.

ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಕೆಲಸಗಳನ್ನು ಚುರುಕಾಗಿ ಮಾಡುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರವಾಗಿ ಮುಗಿಸಬೇಕು. ವಿಶೇಷವಾಗಿ ಅ.2ರ ಒಳಗೆ ಬಸವಕಲ್ಯಾಣ ಕ್ಷೇತ್ರವನ್ನು ಬಯಲು
ಶೌಚ ಮುಕ್ತ ಘೋಷಣೆಗೆ ಪ್ರಯತ್ನಿಸಬೇಕು ಎಂದು ಸೂಚಿಸಿದರು.  ಬಿ.ನಾರಾಯಣರಾವ್‌, ಶಾಸಕ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.