ಸಹಕಾರ ಸಕ್ಕರೆ ಕಾರ್ಖಾನೆ ವಸ್ತುಸ್ಥಿತಿ ಪರಿಶೀಲನೆ


Team Udayavani, Sep 8, 2018, 11:21 AM IST

bid-3.jpg

ಹುಮನಾಬಾದ: ಹಳ್ಳಿಖೇಡ(ಬಿ) ಬಳಿಯ ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ರದ್ದುಗೊಂಡ ನಂತರ
ನೇಮಕಗೊಂಡ ಆಡಳಿತಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಅವರು ಶುಕ್ರವಾರ ಪ್ರಥಮ
ಬಾರಿಗೆ ಕಾರ್ಖಾನೆಗೆ ಭೇಟಿನೀಡಿ, ವಸ್ತುಸ್ಥಿತಿ ಪರಿಶೀಲಿಸಿರು.

ಕಾರ್ಖಾನೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ನಂತರ, ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥ ಮಲ್ಕೂಡ್‌,
ಶಿವಶರಣಪ್ಪ, ಹಣಮಂತಪ್ಪ, ಮುಖ್ಯ ಇಂಜಿನಿಯರ್‌ ಸಂಜೀವಕುಮಾರ ಪಾಟೀಲ ಅವರೊಂದಿಗೆ ಕಾರ್ಖಾನೆ ಸಭಾಂಗಣದಲ್ಲಿ ಪ್ರತ್ಯೇಕ ಸಭೆ ನಡೆಸಿದರು.

ತಕ್ಷಣ ಕಾರ್ಖಾನೆ ಆರಂಭಿಸಲು ಬೇಕಾಗುವ ಸಿಬ್ಬಂದಿ, ಯಂತ್ರೋಪಕರಣ ದುರಸ್ತಿ, ಕಬ್ಬು ಕಟಾವಿಗೆ ಬೇಕಾಗುವ
ಕಾರ್ಮಿಕರ ಸಂಖ್ಯೆ, ತಗಲುವ ಒಟ್ಟು ವೆಚ್ಚ ಇತ್ಯಾದಿ ಕುರಿತು ಸಂಜೆ 5ಗಂಟೆ ವರೆಗೆ ಅಧಿಕಾರಿಗಳ ಜೊತೆಗೆ ಸುದೀರ್ಘ‌ ಚರ್ಚೆ ನಡೆಸಿದರು.

ಕಾರ್ಮಿಕರೊಂದಿಗೆ ಚರ್ಚೆ: ಅಧಿಕಾರಿಗಳ ಜೊತೆಗೆ ಚರ್ಚಿಸಿದ ನಂತರ, ಹುದ್ದೆ ಕಳೆದುಕೊಂಡ ಕಾರ್ಖಾನೆಯ ನೌಕರರ
ಸಂಘದ ಪ್ರಮುಖ ಪದಾಧಿಕಾರಿಗಳನ್ನು ಆಹ್ವಾನಿಸಿ, ಕಾರ್ಖಾನೆ ಆರಂಭಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಈ ವೇಳೆ ನೌಕರರ ಸಂಘದ ಅಧ್ಯಕ್ಷ ಗುರುಲಿಂಗಯ್ಯ, 15ತಿಂಗಳಿಂದ ಸಂಬಳವಿಲ್ಲದೇ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ. ಮೊದಲು ಕೇವಲ ಸಂಬಳದ ಸಮಸ್ಯೆ ಮಾತ್ರ ಇತ್ತು. ಈಗ ಹುದ್ದೆ ಕಳೆದುಕೊಂಡ ನೋವು ಗಾಯದ ಮೇಲೆ ಬರೆ ಎಳೆದಂತಾಗಿದೆ. ಮೊದಲಿಗೆ ಹುದ್ದೆಯಿಂದ ತೆಗೆದು ಹಾಕಿದವರನ್ನು ಮರು ನೇಮಕ ಮಾಡಿಕೊಳ್ಳಬೇಕು. ಬಾಕಿ ಸಂಬಳವನ್ನು ಸಾಧ್ಯವಾದಷ್ಟು ಶೀಘ್ರ ಪಾವತಿಸಬೇಕು ಎಂದು ಒತ್ತಾಯಸಿದರು.
 
ಎಂಟು ದಿನ ಕಾಲಾವಕಾಶ: ಅಧಿಕಾರಿಗಳು ಮಾತ್ರವಲ್ಲದೇ ನಿಮ್ಮೊಂದಿಗೂ ಸುದೀರ್ಘ‌ ಚರ್ಚೆ ನಡೆಸಿದ್ದೇನೆ. ಕಾರ್ಖಾನೆಯ ವಸ್ತುಸ್ಥಿತಿ, ಶೀಘ್ರ ಆರಂಭಿಸಲು ತಗಲುವ ವೆಚ್ಚ, ಇತ್ಯಾದಿಗಳ ಕುರಿತು ಸಮಗ್ರ ವರದಿಯನ್ನು ನಿರ್ದೇಶಕರಿಗೆ ಸಲ್ಲಿಸುತ್ತೇವೆ. ಆ ವರದಿಯನ್ನು ಮುಖ್ಯಮಂತ್ರಿ ಅವರು ಆಹ್ವಾನಿಸಿದಲ್ಲಿ ಅಲ್ಲಿ ನಡೆಯುವ ಚರ್ಚೆಯ ನಂತರ ಕೈಗೊಳ್ಳುವ ನಿರ್ಧಾರ ಕುರಿತು 8-10ದಿನಗಳಲ್ಲಿ ತಿಳಿಸುವುದಾಗಿ ಡಾ| ಎಚ್‌.ಆರ್‌.ಮಹಾದೇವ ಅವರು ಕಾರ್ಮಿಕ ಮುಖಂಡರಿಗೆ ತಿಳಿಸಿದರು. 

ಸಮಸ್ಯೆ ಬಗೆಹರಿಯದಿದ್ದರೆ ಹೋರಾಟ: ಆಡಳಿತಾಧಿಕಾರಿಗಳು ಕಾರ್ಖಾನೆಗೆ ಭೇಟಿ ನೀಡಿ, ಭರವಸೆ ಏನೋ ನೀಡಿದ್ದಾರೆ. ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಿಗೆ ಅಷ್ಟಾಗಿ ಆಸಕ್ತಿ ಇಲ್ಲದಿರುವುದು ಮೇಲ್ನೋಟ‌ಕ್ಕೆ ಸ್ಪಷ್ಟವಾಗಿ
ಕಾಣುತ್ತಿದೆ. ಆದರೇ ಆಡಳಿತಾಧಿಕಾರಿ ಅವರು ಕೈಗೊಳ್ಳುವ ಮುಂದಿನ ಕ್ರಮದ ಮೇಲೆ ನಮ್ಮ ನೌಕರಿ, ಬಾಕಿ ಸಂಬಳ ಅವಲಂಬನೆ ಆಗಿದೆ. 

ಸಚಿವರಿಬ್ಬರೂ ನಮ್ಮವರೇ ಆಗಿರುವುದರಿಂದ ಅನ್ಯಾಯ ಆಗಲಿಕ್ಕಿಲ್ಲ ಎಂಬ ನಂಬಿಕೆ ಇದೆ. ಅಷ್ಟಕ್ಕೂ ನಂಬಿಕೆ ದ್ರೋಹ ಬಗೆದಲ್ಲಿ ಉಗ್ರಸ್ವರೂಪದ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಕಾರ್ಖಾನೆ ಕಾರ್ಮಿಕ ಸಂಘಟನೆ ಅಧ್ಯಕ್ಷ ಗುರುಲಿಂಗಯ್ಯ ಹಾಲಾ ತಿಳಿಸಿದರು.

ಕಾರ್ಮಿಕ ಸಂಘಟನೆ ಮುಖಂಡರಾದ ರಾಜು ಪಾಟೀಲ, ಸುರೇಶ, ಶಶಿಕಾಂತ, ಝರಣಾರೆಡ್ಡಿ, ಪ.ಜಾ, ಪ.ಪಂ
ನೌಕರರ ಸಂಘದ ಅಧ್ಯಕ್ಷ ಅನೀಲರೆಡ್ಡಿ, ಮಲ್ಲಿಕಾರ್ಜುನ ಭಂಡಾರಿ, ಪ್ರಕಾಶ, ರವಿಕುಮಾರ ಮೊದಲಾದವರು ಇದ್ದರು. 

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.