ಸಹಕಾರ ಸಕ್ಕರೆ ಕಾರ್ಖಾನೆ ವಸ್ತುಸ್ಥಿತಿ ಪರಿಶೀಲನೆ


Team Udayavani, Sep 8, 2018, 11:21 AM IST

bid-3.jpg

ಹುಮನಾಬಾದ: ಹಳ್ಳಿಖೇಡ(ಬಿ) ಬಳಿಯ ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ರದ್ದುಗೊಂಡ ನಂತರ
ನೇಮಕಗೊಂಡ ಆಡಳಿತಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಅವರು ಶುಕ್ರವಾರ ಪ್ರಥಮ
ಬಾರಿಗೆ ಕಾರ್ಖಾನೆಗೆ ಭೇಟಿನೀಡಿ, ವಸ್ತುಸ್ಥಿತಿ ಪರಿಶೀಲಿಸಿರು.

ಕಾರ್ಖಾನೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ನಂತರ, ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥ ಮಲ್ಕೂಡ್‌,
ಶಿವಶರಣಪ್ಪ, ಹಣಮಂತಪ್ಪ, ಮುಖ್ಯ ಇಂಜಿನಿಯರ್‌ ಸಂಜೀವಕುಮಾರ ಪಾಟೀಲ ಅವರೊಂದಿಗೆ ಕಾರ್ಖಾನೆ ಸಭಾಂಗಣದಲ್ಲಿ ಪ್ರತ್ಯೇಕ ಸಭೆ ನಡೆಸಿದರು.

ತಕ್ಷಣ ಕಾರ್ಖಾನೆ ಆರಂಭಿಸಲು ಬೇಕಾಗುವ ಸಿಬ್ಬಂದಿ, ಯಂತ್ರೋಪಕರಣ ದುರಸ್ತಿ, ಕಬ್ಬು ಕಟಾವಿಗೆ ಬೇಕಾಗುವ
ಕಾರ್ಮಿಕರ ಸಂಖ್ಯೆ, ತಗಲುವ ಒಟ್ಟು ವೆಚ್ಚ ಇತ್ಯಾದಿ ಕುರಿತು ಸಂಜೆ 5ಗಂಟೆ ವರೆಗೆ ಅಧಿಕಾರಿಗಳ ಜೊತೆಗೆ ಸುದೀರ್ಘ‌ ಚರ್ಚೆ ನಡೆಸಿದರು.

ಕಾರ್ಮಿಕರೊಂದಿಗೆ ಚರ್ಚೆ: ಅಧಿಕಾರಿಗಳ ಜೊತೆಗೆ ಚರ್ಚಿಸಿದ ನಂತರ, ಹುದ್ದೆ ಕಳೆದುಕೊಂಡ ಕಾರ್ಖಾನೆಯ ನೌಕರರ
ಸಂಘದ ಪ್ರಮುಖ ಪದಾಧಿಕಾರಿಗಳನ್ನು ಆಹ್ವಾನಿಸಿ, ಕಾರ್ಖಾನೆ ಆರಂಭಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಈ ವೇಳೆ ನೌಕರರ ಸಂಘದ ಅಧ್ಯಕ್ಷ ಗುರುಲಿಂಗಯ್ಯ, 15ತಿಂಗಳಿಂದ ಸಂಬಳವಿಲ್ಲದೇ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ. ಮೊದಲು ಕೇವಲ ಸಂಬಳದ ಸಮಸ್ಯೆ ಮಾತ್ರ ಇತ್ತು. ಈಗ ಹುದ್ದೆ ಕಳೆದುಕೊಂಡ ನೋವು ಗಾಯದ ಮೇಲೆ ಬರೆ ಎಳೆದಂತಾಗಿದೆ. ಮೊದಲಿಗೆ ಹುದ್ದೆಯಿಂದ ತೆಗೆದು ಹಾಕಿದವರನ್ನು ಮರು ನೇಮಕ ಮಾಡಿಕೊಳ್ಳಬೇಕು. ಬಾಕಿ ಸಂಬಳವನ್ನು ಸಾಧ್ಯವಾದಷ್ಟು ಶೀಘ್ರ ಪಾವತಿಸಬೇಕು ಎಂದು ಒತ್ತಾಯಸಿದರು.
 
ಎಂಟು ದಿನ ಕಾಲಾವಕಾಶ: ಅಧಿಕಾರಿಗಳು ಮಾತ್ರವಲ್ಲದೇ ನಿಮ್ಮೊಂದಿಗೂ ಸುದೀರ್ಘ‌ ಚರ್ಚೆ ನಡೆಸಿದ್ದೇನೆ. ಕಾರ್ಖಾನೆಯ ವಸ್ತುಸ್ಥಿತಿ, ಶೀಘ್ರ ಆರಂಭಿಸಲು ತಗಲುವ ವೆಚ್ಚ, ಇತ್ಯಾದಿಗಳ ಕುರಿತು ಸಮಗ್ರ ವರದಿಯನ್ನು ನಿರ್ದೇಶಕರಿಗೆ ಸಲ್ಲಿಸುತ್ತೇವೆ. ಆ ವರದಿಯನ್ನು ಮುಖ್ಯಮಂತ್ರಿ ಅವರು ಆಹ್ವಾನಿಸಿದಲ್ಲಿ ಅಲ್ಲಿ ನಡೆಯುವ ಚರ್ಚೆಯ ನಂತರ ಕೈಗೊಳ್ಳುವ ನಿರ್ಧಾರ ಕುರಿತು 8-10ದಿನಗಳಲ್ಲಿ ತಿಳಿಸುವುದಾಗಿ ಡಾ| ಎಚ್‌.ಆರ್‌.ಮಹಾದೇವ ಅವರು ಕಾರ್ಮಿಕ ಮುಖಂಡರಿಗೆ ತಿಳಿಸಿದರು. 

ಸಮಸ್ಯೆ ಬಗೆಹರಿಯದಿದ್ದರೆ ಹೋರಾಟ: ಆಡಳಿತಾಧಿಕಾರಿಗಳು ಕಾರ್ಖಾನೆಗೆ ಭೇಟಿ ನೀಡಿ, ಭರವಸೆ ಏನೋ ನೀಡಿದ್ದಾರೆ. ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಿಗೆ ಅಷ್ಟಾಗಿ ಆಸಕ್ತಿ ಇಲ್ಲದಿರುವುದು ಮೇಲ್ನೋಟ‌ಕ್ಕೆ ಸ್ಪಷ್ಟವಾಗಿ
ಕಾಣುತ್ತಿದೆ. ಆದರೇ ಆಡಳಿತಾಧಿಕಾರಿ ಅವರು ಕೈಗೊಳ್ಳುವ ಮುಂದಿನ ಕ್ರಮದ ಮೇಲೆ ನಮ್ಮ ನೌಕರಿ, ಬಾಕಿ ಸಂಬಳ ಅವಲಂಬನೆ ಆಗಿದೆ. 

ಸಚಿವರಿಬ್ಬರೂ ನಮ್ಮವರೇ ಆಗಿರುವುದರಿಂದ ಅನ್ಯಾಯ ಆಗಲಿಕ್ಕಿಲ್ಲ ಎಂಬ ನಂಬಿಕೆ ಇದೆ. ಅಷ್ಟಕ್ಕೂ ನಂಬಿಕೆ ದ್ರೋಹ ಬಗೆದಲ್ಲಿ ಉಗ್ರಸ್ವರೂಪದ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಕಾರ್ಖಾನೆ ಕಾರ್ಮಿಕ ಸಂಘಟನೆ ಅಧ್ಯಕ್ಷ ಗುರುಲಿಂಗಯ್ಯ ಹಾಲಾ ತಿಳಿಸಿದರು.

ಕಾರ್ಮಿಕ ಸಂಘಟನೆ ಮುಖಂಡರಾದ ರಾಜು ಪಾಟೀಲ, ಸುರೇಶ, ಶಶಿಕಾಂತ, ಝರಣಾರೆಡ್ಡಿ, ಪ.ಜಾ, ಪ.ಪಂ
ನೌಕರರ ಸಂಘದ ಅಧ್ಯಕ್ಷ ಅನೀಲರೆಡ್ಡಿ, ಮಲ್ಲಿಕಾರ್ಜುನ ಭಂಡಾರಿ, ಪ್ರಕಾಶ, ರವಿಕುಮಾರ ಮೊದಲಾದವರು ಇದ್ದರು. 

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.