ಕೌಶಲವಿಲ್ಲದೇ ನಿರುದ್ಯೋಗ ಹೆಚ್ಚಳ


Team Udayavani, Sep 8, 2018, 11:47 AM IST

bid-6.jpg

ಭಾಲ್ಕಿ: ಕೌಶಲ ರಹಿತ ಶಿಕ್ಷಣ ಪದ್ಧತಿಯಿಂದಾಗಿ ನಿರುದ್ಯೋಗ ಸಮಸ್ಯೆ ಬಹುವಾಗಿ ಕಾಡುತ್ತಿದೆ. ಶಿಕ್ಷಣ ವಿದ್ಯಾರ್ಥಿಗಳನ್ನು
ಸದ್ಗುಣಿಗಳನ್ನಾಗಿಸಬೇಕು. ಆದರೆ, ಇಂದಿನ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯದ ಕೊರತೆ ಎದ್ದು ಕಾಣುತ್ತಿದೆ ಎಂದು ಗದುಗಿನ ಶಿವಾನಂದ ಮಠದ ಶ್ರೀ ಕೈವಲ್ಯಾನಂದ ಸ್ವಾಮೀಜಿ ಹೇಳಿದರು.

ಕರಡ್ಯಾಳ ಗ್ರಾಮದ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುತ್ಛಯದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಮಣ್ಣಿಗೆ ಸಂಸ್ಕಾರ ದೊರೆತಾಗ ಮಡಿಕೆ ಆಗುತ್ತದೆ. ಬೀಜಕ್ಕೆ
ಸಂಸ್ಕಾರ ದೊರೆತಾಗ ಬೆಳೆ ಆಗುತ್ತದೆ. ಹಾಗೆಯೇ ಗುರುಗಳು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದಾಗ ಅವರು ರಾಷ್ಟ್ರದ ಅತ್ಯಮೂಲ್ಯ ಸಂಪತ್ತಾಗಿ ಪರಿವರ್ತನೆ ಆಗುತ್ತಾರೆ ಎಂದು ನುಡಿದರು.

ಗುರು ಸರ್ವಶ್ರೇಷ್ಠ. ವಿದ್ಯಾರ್ಥಿ ಎಷ್ಟೇ ಶ್ರೀಮಂತ, ಪ್ರಭಾವಿ ವ್ಯಕ್ತಿಯ ಮಗನಾಗಿದ್ದರೂ ಶಾಲೆಯ ಹೊರಗಡೆಯೇ ತನ್ನ
ಶ್ರೀಮಂತಿಕೆ, ಪ್ರಭಾವ ಬಿಟ್ಟು ವರ್ಗಕೋಣೆಗೆ ಬರಬೇಕು. ಅದುವೇ ಭಾರತೀಯ ಸಂಸ್ಕೃತಿ. ಹಿಂದಿನ ಕಾಲದಲ್ಲಿ ರಾಜರ
ಮಕ್ಕಳು ಸಹ ಗುರುಕುಲದಲ್ಲಿ ಇತರ ಮಕ್ಕಳಂತೆ ಸಾಮಾನ್ಯ ವಿದ್ಯಾರ್ಥಿಗಳಾಗಿಯೇ ಪಾಠ ಆಲಿಸುತ್ತಿದ್ದರು. ಹೀಗಾಗಿಯೇ ಕೆಲವರು ಮಹಾನ್‌ ರಾಜರು, ಪುರುಷರಾಗಿ ಬೆಳೆಯಲು ಸಾಧ್ಯವಾಯಿತು ಎಂದು ಹೇಳಿದರು. 

ಕೆಲ ದಶಕಗಳ ಹಿಂದೆ ಸಮಾಜ ಸೇವೆಗಾಗಿ ಶಾಲೆಗಳನ್ನು ತೆರೆಯುತ್ತಿದ್ದರು. ಈಗ ಹಣ ಗಳಿಕೆಯ ಉದ್ದೇಶಕ್ಕಾಗಿ ಶಾಲೆಗಳು ಹುಟ್ಟುಕೊಳ್ಳುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ಚಾಣಕ್ಯ ಚಂದ್ರಗುಪ್ತ ಮೌರ್ಯನಲ್ಲಿದ್ದ ವಿಶೇಷ ಗುಣವನ್ನು ಗುರುತಿಸಿ ಮೌರ್ಯ ಸಾಮ್ರಾಜ್ಯ ಸ್ಥಾಪಿಸಲು ಪ್ರೇರೆಪಿಸಿದ್ದ. ಗುರುಗಳು ವಿದ್ಯಾಥಿಗಳಲ್ಲಿನ ವಿಶೇಷ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ಹಿರೇಮಠ ಸಂಸ್ಥಾನದ ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಿದ್ದ
ಶ್ರೇಯಸ್ಸು ಬಸವಣ್ಣ ಮತ್ತು ಅನುಭವ ಮಂಟಪಕ್ಕೆ ಸಲ್ಲುತ್ತದೆ. ಶಿಕ್ಷಕರು ಶಿಕ್ಷಕಣದ ಜೊತೆಗೆ ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಎಲ್ಲ ಗುರುವೃಂದದವರಿಗೆ ಆರತಿ ಬೆಳಗಿ ಗೌರವ ಸಲ್ಲಿಸಿದರು. ಶ್ರೀ ಗುರುಬಸವ ಪಟ್ಟದ್ದೇವರು, ಶಾಹೀನ
ಸಂಸ್ಥೆ ಅಧ್ಯಕ್ಷ ಅಬ್ದುಲ್‌ ಮನ್ನಾನ್‌ ಸೇಠ, ಜಾಗತಿಕ ಲಿಂಗಾಯತ ಮಹಾಸಭಾ ಕಾರ್ಯದರ್ಶಿ ಶ್ರೀಕಾಂತ ಸ್ವಾಮಿ, ಜಿಲ್ಲಾ
ಪಂಚಾಯಿತಿ ಮಾಜಿ ಸದಸ್ಯ ಅಮೃತರಾವ್‌ ಚಿಮಕೋಡೆ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ
ಮೊಳಕೀರೆ, ಪ್ರಮುಖರಾದ ಅಕ್ಷಯ ಮುನ್ನೋಳಿ, ಪ್ರವೀಣ ಖಂಡಾಳೆ, ಲಕ್ಷ್ಮಣ ಮೇತ್ರೆ, ಬಸವರಾಜ ಪ್ರಭಾ, ಪಂಡರಿನಾಥ ಪವಾರ ಇದ್ದರು. ಮಧುಕರ ಗಾಂವ್ಕರ್‌ ನಿರೂಪಿಸಿದರು.

ಟಾಪ್ ನ್ಯೂಸ್

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

4

Dwarakish: ಕರ್ನಾಟಕದ ಕುಳ್ಳನ ಯುಗಾಂತ್ಯ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.