ಬಸವ ಕ್ರಾಂತಿ ಫಲ ಅನುಭವ ಮಂಟಪ


Team Udayavani, Sep 9, 2018, 3:56 PM IST

bid-2.jpg

ಬಸವಕಲ್ಯಾಣ: ಹನ್ನೆರಡನೇಯ ಶತಮಾನದಲ್ಲಿ ಕಲ್ಯಾಣದ ಅಧಿಕಾರಿಯಾಗಿದ್ದ ವಿಶ್ವಗುರು ಬಸವಣ್ಣ ಅಸಮಾನತೆ, ಜಾತಿ-ಲಿಂಗ ಶೋಷಣೆಯ ಪರಿಯಿಂದ ಬಹುವಾಗಿ ನೊಂದು ಕ್ರಾಂತಿ ಮಾಡಿದ್ದರು. ಆ ಕ್ರಾಂತಿ ಫಲವಾಗಿಯೇ ನಿರ್ಮಾಣವಾಗಿದ್ದು ಅನುಭವ ಮಂಟಪ ಎಂದು ಹುಬ್ಬಳ್ಳಿಯ ಸಾಹಿತಿ ಸೋಮುರೆಡ್ಡಿ ಹೇಳಿದರು.

ನಗರದ ಅನುಭವ ಮಂಟಪದಲ್ಲಿ ಶನಿವಾರ ನಿವೇದಿತಾ ಹೂಗಾರ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ವ್ಯಕ್ತಿತ್ವ ವಿಕಸನ ಟ್ರಸ್ಟ್‌ ಸಂಯುಕ್ತಾಶ್ರಯದಲ್ಲಿ ನಡೆದ ರಾಜ್ಯಮಟ್ಟದ ಎರಡು ದಿನಗಳ ಸಾಹಿತ್ಯ ಸುಗ್ಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೀದರ್‌ ಜಿಲ್ಲೆಗೆ ತನ್ನದೆ ಆದ ಐತಿಹಾಸಿಕ ಹಿನ್ನೆಲೆ ಇದೆ. ಹಿಂದೆ ಇದ್ದಂತಹ ಕುಂತಲ ದೇಶದ ಒಂದು ಭಾಗವಾಗಿತ್ತು. ಇದನ್ನು ಬಿದಿರ ಬಿದಿರು, ಬಿದರೆಪುರ ಹಾಗೂ ವಿದರು ನಗರ ಎಂದು ಕರೆಯತ್ತಿದ್ದರು ಎಂಬುದು ಇತಿಹಾಸ ತಜ್ಞರಿಂದ ತಿಳಿದು ಬಂದಿದೆ ಎಂದರು. ವಿದುರ ಎಂಬುದು ಧೃತರಾಷ್ಟ್ರನ ತಮ್ಮನ ಮಗ ಹಾಗೂ ವಿದ್ವಾಂಸ, ಪಂಡಿತ, ನುರಿತ, ತಿಳಿದ ಎಂದು ಅರ್ಥವಿದೆ. ಈ ಹಿನ್ನೆಲೆಯಲ್ಲಿ ಬೀದರ ಜಿಲ್ಲೆಯಲ್ಲಿ ವಿಶೇಷವಾಗಿ ಬಸವಕಲ್ಯಾಣ ಕ್ಷೇತ್ರ ವಿದ್ವಾಂಸರ, ಪಂಡಿತರ ಹಾಗೂ ಬುದ್ಧಿವಂತರ ನಾಡು ಎಂದು ಕರೆಯಲಾಗುತ್ತಿದೆ ಎಂದು ಹೇಳಿದರು. 

ಆದರೆ ಇಂದಿಗೂ ಸಾಮಾನ್ಯ ಜನರಲ್ಲಿ ಅನುಭ ಮಂಟಪ ಎಂದರೆ ಕೇವಲ ವಚನಗೋಷ್ಠಿಗಳು ನಡೆದಿರಬಹುದು, ಪಂಚಾಯ್ತಿ ಕಟ್ಟೆ ಇದ್ದಿರಬಹುದು, ಅಥವಾ ನ್ಯಾಯಲಯದಂತೆ ಕಾರ್ಯ ನಿರ್ವಹಿಸಿರಬಹುದು ಎಂಬ ಊಹೆಗಳಿವೆ. ಆದರೆ
ಮಾಹಿತಿಗಳ ಪ್ರಕಾರ ಅನುಭವ ಮಂಟಪ ಒಂದು ಸಾರ್ವಜನಿಕ ಸಂಸ್ಥೆಯಾಗಿದ್ದು ಇಲ್ಲಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದವು ಎಂದರು.

ಇದಕ್ಕೂ ಮುನ್ನ ಅ.ಭಾ.ವೀ. ಮಹಾಸಭಾ ರಾಜ್ಯ ಉಪಾಧ್ಯಕ್ಷ ಶಿವರಾಜ ನರಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷೆ ಶ್ರೀದೇವಿ ಹೂಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನುಭವ ಮಂಟಪದ ಸಂಚಾಲಕ ಶ್ರೀ ಶಿವಾನಂದ ಮಹಾಸ್ವಾಮಿಗಳು, ಮಾತೆ ಸುಜ್ಞಾನದೇವಿ, ವೀರಣ್ಣಾ ಪಾಟೀಲ್‌, ಲಕ್ಷಿàಬಾಯಿ ಪಾಟೀಲ ಸೇರಿದಂತೆ ವಿವಿಧ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶ್ರೀದೇವಿ ಪಾಟೀಲ ಸ್ವಾಗತಿಸಿದರು. ನಾಗೇಶ ಸ್ವಾಮಿ ವಂದಿಸಿದರು. ನಂತರ ವಚನ ಗೋಷ್ಠಿ, ಚಿಂತನ ಮಂಥನ, ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ನಡೆದವು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.