ಮಳೆಗಾಗಿ ಜೋಕುಮಾರಸ್ವಾಮಿ ಮೊರೆ


Team Udayavani, Sep 22, 2018, 4:36 PM IST

bid-3.jpg

ಬೀದರ: ನಾಲ್ಕುದಿನಗಳಿಂದ ಜಿಲ್ಲಾದ್ಯಂತ ಜೋಕುಮಾರಸ್ವಾಮಿ ಆರಾಧನಾ ಹಬ್ಬ ಸಡಗರದಿಂದ ನಡೆಯುತ್ತಿದ್ದು, ಆಧುನಿಕತೆಯ ಭರಾಟೆಯಲ್ಲೂ ಕೂಡ ಪುರಾತನ ಸಂಸ್ಕೃತಿಯನ್ನು ಮುಂದುವರಿಸಿ ಕೊಂಡು ಹೋಗಲಾಗುತ್ತಿದೆ.

ಜೋಕುಮಾರಸ್ವಾಮಿ ಜನಪದೀಯ ಸಂಸ್ಕೃತಿಯ ವಿಶಿಷ್ಟ ಹಬ್ಬವಾಗಿದೆ. ಜೋಕುಮಾರನನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಿದರೆ, ಮಳೆ-ಬೆಳೆ ಸಮೃದ್ಧವಾಗಿ ಮನುಕುಲಕ್ಕೆ ಒಳ್ಳೆಯದು ಆಗುತ್ತದೆ ಎಂಬ ನಂಬಿಕೆ ಪುರಾತನ ಕಾಲದಿಂದಲ್ಲೂ ಇದೆ. ಇಂದಿಗೂ ಕೂಡ ಕೋಲಿ, ಕಬ್ಬಲಿಗ, ಗಂಗಾಮತ, ಬೆಸ್ತ, ತಳವಾರ, ಟೋಕರೆ ಕೋಲಿ ಸೇರಿದಂತೆ ಇತರೆ ಒಳ ಜಾತಿಯ ಸಮುದಾಯದವರು ಈ ಹಬ್ಬವನ್ನು ವೀಶೇಷವಾಗಿ ಆಚರಿಸಿಸುತ್ತಿದ್ದು, ಮನೆ-ಮನೆಗಳಿಗೆ ತೆರಳಿ ಜೋಕುಮಾರನ ದರ್ಶನ ಮಾಡಿಸುತ್ತಾರೆ. 

ಮನೆಗಳಿಗೆ ತೆರಳಿದ ಸಂದರ್ಭದಲ್ಲಿ ಜಾನಪದ ಹಾಡುಗಳನ್ನು ಹಾಡಿ ಮನೆಯ ಜನರಿಗೆ ಶುಭ ಹಾರೈಸುತ್ತಾರೆ. ಅಲ್ಲದೆ, “ಜೋಕುಮಾರ ಬಂದಾನ್‌ ಖುಷಿಯಿಂದ, ಭಕ್ತಿಯಿಂದ ಸೇವೆ ಮಾಡಿ’ ಎಂದು ಹೇಳಿ ಧವಸ ಧಾನ್ಯ ಅಥವಾ ಹಣ ಪಡೆದು ಮುಂದಿನ ಮನೆಗೆ ಸಾಗುವ ಪದ್ದತಿ ಇಂದಿಗೂ ಆಚರಣೆಯಲ್ಲಿದೆ.

“ಅಡ್ಡಡ್ಡ ಮಳೆ ಬಂದು, ದೊಡ್ಡ ದೊಡ್ಡ ಕೆರೆ ತುಂಬಿ, ಗೊಡ್ಡಗಳೆಲ್ಲ ಹೈನಾಗಿ ಜೋಕುಮಾರ, ಜೋಕುಮಾರ…
ಜೋಕುಮಾರ…. ಮಡಿವಾಳ ಕೇರಿ ಹೊಕ್ಕಾನ ಜೋಕುಮಾರ ಮುಡಿತುಂಬಾ ಹೂವ ಮುಡಿದಂತ ಚೆಲುವಿನ ತನ್ನ ಮಡಿಯಂದಾ ಜೋಕಮಾರ’ ಎಂದು ಮಹಿಳೆಯರು ಒಂದೇ ಧಾಟಿಯಲ್ಲಿ ಹಾಡುವ ಮೂಲಕ ಜನರನ್ನು ಆರ್ಕಷಿಸುತ್ತಿದ್ದಾರೆ. 

ಪೌರಾಣಿಕ ಮಹತ್ವ: ಗಣೇಶ ಶಿಷ್ಟ ಸಂಸ್ಕೃತಿ ವಾರಸುದಾರನಾದರೆ, ಜೋಕುಮಾರಸ್ವಾಮಿ ಜಾನಪದ
ಸಂಸ್ಕೃತಿಯ ಪ್ರತೀಕ ಎಂದು ಗುರುತಿಸಲಾಗಿದೆ. ಗಣೇಶ ಹಾಗೂ ಜೋಕುಮಾರ ಇಬ್ಬರೂ ಭೂ ಲೋಕಸುತ್ತಿದ ಕತೆ ಇದಾಗಿದೆ. ಒಂದು ವಾರ ಕಾಲ, ಕಾಯಿ-ಕಡುಬಿನ ಭರ್ಜರಿ ಭೂರಿಭೋಜನ ಸವಿದ ಗಣೇಶ, ಭೂಲೋಕದಲ್ಲಿ ಎಲ್ಲವೂ ಸೌಖ್ಯವಾಗಿದೆ ಎಂದು ತನ್ನ ತಂದೆ-ತಾಯಿ (ಶಿವ-ಪಾರ್ವತಿಗೆ) ವರದಿ ನೀಡುತ್ತಾನೆ. ಜಾನಪದ ಸಂಸ್ಕೃತಿಯ ವಾರಸುದಾರನಾದ ಜೋಕುಮಾರ ಭೂಲೋಕದಲ್ಲಿ ಮಳೆ ಇಲ್ಲದೆ ಮನುಷ್ಯರು ಸಂಕಷ್ಟದಲ್ಲಿದ್ದಾರೆ.

ಹನಿ ನೀರಿಗಾಗಿ ಪ್ರಾಣಿ-ಪಕ್ಷಿಗಳು ಪರಿತಪಿಸುತ್ತಿವೆ. ಮಳೆ ಸುರಿಯದೇ ಹೋದರೆ ಭೂಲೋಕ ನರಕ ಕೂಪವಾಗುತ್ತದೆ ಎಂದು ಜನರ ಕಷ್ಟಕಾರ್ಪಣ್ಯಗಳ ವರದಿ ಒಪ್ಪಿಸುತ್ತಾನೆ. ಇದರ ಪ್ರತೀಕವಾಗಿ ಗಣೇಶ ಹಬ್ಬದ ನಂತರ ಜೋಕುಮಾರನ ಹಬ್ಬ ಆಚರಣೆ ಮಾಡಲಾಗುತ್ತದೆ. ಅಲ್ಲದೆ ಜೋಕುಮಾರ ಮಳೆಗಾಗಿ ವಿನಂತಿಸಿದ ಹಿನ್ನೆಲೆಯಲ್ಲಿ ಜೋಕುಮಾರನ ಸೇವೆಯಿಂದ ಉತ್ತಮ ಮಳೆ ಬರುವ ನಿರೀಕ್ಷೆ ಇದೆ ಎಂಬುದು ಸಮುದಾಯದ ಮಹಿಳೆರ ಮಾತು.

ವಾರಸುದಾರರು: ಜೋಕುಮಾರ ಗಂಗಾಮತ ಸಮುದಾಯದ ಮನೆಯಲ್ಲಿಯೇ ಜನ್ಮ ತಾಳಿದ ಹಿನ್ನೆಲೆಯಲ್ಲಿ ಗಂಗಾಮತ ಸಮುದಾಯದವರೆ ಜೋಕುಮಾರನ ವಾರಸುದಾರರು ಎಂದು ಹೇಳಲಾಗುತ್ತದೆ. ಈ ಸಮುದಾಯದ ಮಹಿಳೆಯರು ಗಣೇಶ ಹಬ್ಬದ ನಂತರ ಜೋಕುಮಾರನನ್ನು ತಲೆ ಮೇಲೆ ಹೊತ್ತು ಹಾಡು ಹಾಡುತ್ತ ಪಟ್ಟಣದ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಿ, ಮನೆ ಮನೆಗಳಿಗೆ ಭೇಟಿನೀಡಿ ಜೋಕುಮಾರನ ದರ್ಶನ ಕಲ್ಪಿಸುತ್ತಾರೆ, ಭಕ್ತರಿಂದ ಧವಸ ಧಾನ್ಯಗಳನ್ನು ಸಂಗ್ರಹಿಸುತ್ತಾರೆ.

ವಿಶೇಷ ಆಚರಣೆ: ಭಾದ್ರಪದ ಮಾಸದ ಅಷ್ಟಮಿ ದಿನದಂದು ಜೋಕುಮಾರ ಹುಟ್ಟುತ್ತಾನೆ. ಮಣ್ಣಿನಿಂದ ತಯಾರಿಸಲಾದ
ಮೂರ್ತಿಗೆ ಬೇವಿನ ಎಸಳುಗಳ ಉಡುಗೆಯೊಂದಿಗೆ ವಿವಿಧ ಪುಷ್ಪಗಳಿಂದ ಅಲಂಕರ ಮಾಡಲಾಗುತ್ತದೆ. ಅಲಂಕೃತ
ಮೂರ್ತಿಯನ್ನು ಮಹಿಳೆಯರು ಬುಟ್ಟಿಯಲ್ಲಿಟ್ಟುಕೊಂಡು ಆತನಿಗೆ ಸಂಬಂಧಿಸಿದ ಕತೆ-ಹಾಡುಗಳನ್ನು ಹಾಡುತ್ತ ಸಂಚರಿಸುತ್ತಾರೆ. 

8 ದಿನಗಳ ಕಾಲ ವಿವಿಧೆಡೆ ಸಂಚರಿಸಿದ ಜೋಕುಮಾರನಿಗೆ ಒಂಭತ್ತನೆ ದಿನ ಹಣ್ಣಿಮೆ ದಿನದಂದು ಹೋಳಿಗೆ, ತುಪ್ಪದ ನೈವೇದ್ಯ ತೋರಿಸಿ, ಬಟ್ಟೆ ತೊಳೆಯುವ ಅಗಸರ ಬಂಡೆಯ ಕೆಳಗೆ ಮೂರ್ತಿ ಇರಿಸಲಾಗುತ್ತದೆ. ಎರಡು ದಿನಗಳ ನಂತರ ಜೋಕುಮಾರ ಸ್ವಾಮಿಯನ್ನು ನೋಡಲು ಮಹಿಳೆಯರು ಹೋಗುತ್ತಾರೆ. ಆತನ ಸುತ್ತಲೂ ಹುಳಗಳು ಇದ್ದರೆ ದೇಶಕ್ಕೆ ಗ್ರಾಮಕ್ಕೆ ಒಳ್ಳೆದಾಗುತ್ತದೆ ಎಂಬ ನಂಬಿಕೆ ಇದೆ ಎಂಬುದು ಕಲ್ಲಮ್ಮ ಕೋಲಿ, ತೆಜಮ್ಮಾ ಭಾವಿದೊಡ್ಡಿ, ಕಲ್ಲಮ್ಮ ಕೋಲಿ, ತೆಜಮ್ಮಾ ಭಾವಿದೊಡ್ಡಿ ಹೇಳಿತ್ತಾರೆ.

ಸದ್ಯ ಜಿಲ್ಲೆಯಲ್ಲಿ ಮಳೆ ಕೊರತೆ ಪ್ರಮಾಣ ಹೆಚ್ಚಿದ್ದು, ಈ ಪುರಾತನ ಜೋಕುಮಾರ ಹಬ್ಬ ಆಚರಣೆ ಮೂಲಕವಾದರೂ ಜಿಲ್ಲೆಯಲ್ಲಿ ಉತ್ತಮ ಮಳೆ ಸುರಿಯಲಿ ಎಂದು ರೈತರು ಪ್ರಾರ್ಥಿಸುತ್ತಿದ್ದಾರೆ 

„ದುರ್ಯೋಧನ ಹೂಗಾರ

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.