ಪ್ರಶ್ನಿಸುವ ಸ್ವಭಾವ ಮೈಗೂಡಿಸಿಕೊಳ್ಳಿ: ಡಾ| ಬಾಳೇಕುಂದ್ರಿ


Team Udayavani, Sep 24, 2018, 12:18 PM IST

bid-1.jpg

ಹುಮನಾಬಾದ: ಪ್ರಶ್ನೆ ಕೇಳುವ ಸ್ವಭಾವ ಮೈಗೂಡಿಸಿಕೊಳ್ಳುವುದರಿಂದ ಜ್ಞಾನ ವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳು ಕೇಳುವ ಪ್ರಶ್ನೆಗಳಿಗೆ ಪಾಲಕರು ಹಾಗೂ ಶಿಕ್ಷಕರು ತಾಳ್ಮೆ ಕಳೆದುಕೊಳ್ಳದೇ ಪ್ರತಿಕ್ರಿಯಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಖ್ಯಾತ ಶಿಕ್ಷಣ ತಜ್ಞೆ ಹಾಗೂ ಮಕ್ಕಳ ಮನೋವಿಜ್ಞಾನಿ ಡಾ| ವಿಜಯಲಕ್ಷ್ಮೀ ಬಾಳೇಕುಂದ್ರಿ ಸಲಹೆ ನೀಡಿದರು.

ಹಳ್ಳಿಖೇಡ(ಬಿ)ದ ಬಸವತೀರ್ಥ ವಿದ್ಯಾಪೀಠ ಶಿಕ್ಷಣ ಸಂಸ್ಥೆಯಲ್ಲಿ ರವಿವಾರ ವಿಕಾಸ ಅಕಾಡೆಮಿ ತಾಲೂಕು ಘಟಕ ಹಮ್ಮಿಕೊಂಡಿದ್ದ ಶಿಕ್ಷಣ ಮಾರ್ಗದರ್ಶಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮಕ್ಕಳು ಕೇವಲ ಪಠ್ಯಪುಸ್ತಕದ ಹುಳುವಾಗದೇ ಸಾಮಾನ್ಯ ಜ್ಞಾನ, ಪಠ್ಯ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ಪ್ರತಿಯೊಂದರಲ್ಲೂ ಅತ್ಯಂತ ಆಸಕ್ತಿಯಿಂದ ಪಾಲ್ಗೊಂಡಲ್ಲಿ ಯಶಸ್ಸು ನಮ್ಮನ್ನು ಒಪ್ಪಿ, ಅಪ್ಪಿಕೊಳ್ಳುತ್ತದೆ ಎಂದರು.

ಎಸ್‌ಎಸ್‌ಎಲ್‌ಸಿ ನಂತರ ಮಕ್ಕಳು ಇಚ್ಛಿಸುವ ವಿಭಾಗ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕೆ ವಿನಃ ತಾವು ಇಚ್ಛಿಸಿದ ವಿಭಾಗ ಆಯ್ಕೆ ಮಾಡಿಕೊಳ್ಳುವಂತೆ ಯಾವುದೇ ಕಾರಣಕ್ಕೂ ಒತ್ತಡ ಹೇರದೆ ಮುಕ್ತವಾಗಿ ಬಿಡಬೇಕು. ಈ ಎಲ್ಲದರ ಜೊತೆಯಲ್ಲಿ ಗುರು- ಹಿರಿಯರನ್ನು ಗೌರವಿಸುವ ಸೌಜನ್ಯ, ಸಂಸ್ಕಾರ ಮಕ್ಕಳಿಗೆ ನೀಡುವ ಅವಶ್ಯಕತೆಯಿದ್ದು, ಅತ್ಯಂತ ಜಾಗೃತರಾಗಿರಬೇಕು. ಅದೆಷ್ಟೋ ಮಕ್ಕಳು ಪಾಲಕರ ಒತ್ತಡದಿಂದಾಗಿ ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ ಎಂದರು.

ಉನ್ನತ ಸಾಧನೆಗಾಗಿ ಉನ್ನತ ಗುರಿ-ಅತ್ಯುತ್ತಮ ಗುರುವಿನ ಜೊತೆಗೆ ಸಾಧಿ ಸುವ ಛಲ ಇದ್ದಲ್ಲಿ ಅಸಾಧ್ಯವಾದದ್ದನ್ನು ಸಾಧಿ ಸಲು ಸಾಧ್ಯ. ಇಂದಿನ ಯುವಕರು ಬೇಡುವ ಕೈಗಳಾಗದೇ ನೀಡುವ ಕೈಗಳಾಗಿ ಪರಿವರ್ತನೆಯಾಗಬೇಕು. ಸರ್ಕಾರ ವಿವಿಧ ಹೆಸರಿನಲ್ಲಿ ನೀಡುವ ಭಿಕ್ಷೆ ಭಾಗ್ಯದಿಂದ ದುಡಿಯುವವರು ಸೋಮಾರಿಗಳಾಗುತ್ತಿದ್ದಾರೆ. ದೇಶದ ಅಭಿವೃದ್ಧಿಗೆ ಇವೆಲ್ಲವೂ ಮಾರಕ ಎಂದು ಹೇಳಿದರು.

ಬಳಿಕ ವಿದ್ಯಾರ್ಥಿಗಳು ಮತ್ತು ಪಾಲಕರೊಂದಿಗೆ ಸಂವಾದ ನಡೆಸಿದರು. ಅಧ್ಯಕ್ಷತೆ ವಹಿಸಿದ್ದ ಬಸವತೀರ್ಥ ವಿದ್ಯಾಪೀಠ
ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಕೇಶವರಾವ್‌ ತಳಘಟಕರ್‌ ಮಾತನಾಡಿ, ತಜ್ಞರ ಸಲಹೆ ಪಾಲಿಸಬೇಕು. ಈ ಎಲ್ಲದರ ಜೊತೆಗೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಅವರು ಹೇಳಿದಂತೆ ಜೀವನದಲ್ಲಿ ಯಾವತ್ತೂ ದೊಡ್ಡ ಕನಸು ಕಾಣಬೇಕು. ಕಂಡ ಕನಸು ಸಾಕಾರಗೊಳಿಸಲು ಶ್ರಮಿಸಬೇಕು ಎಂದರು.

ಸಂಸ್ಥೆ ನಿರ್ದೇಶಕ ಕೇಶವರಾವ್‌ ತಳಘಟಕರ್‌ ಸೋಮನಾಥ ಹಿರೇಮಠ ಮಾತನಾಡಿದರು. ಪ್ರಾಚಾರ್ಯ ಗುಂಡಯ್ಯ ತೀರ್ಥ, ಮಸ್ತಾನ್‌ ಪಟೇಲ, ಚಂದ್ರಕಾಂತ ಬಿರಾದಾರ ವೇದಿಕೆಯಲ್ಲಿದ್ದರು. ಸಂಜನಾ ಪ್ರಾರ್ಥಿಸಿದರು. ನರೇಂದ್ರ ಪಾಟೀಲ ಸ್ವಾಗತಿಸಿದರು. ವಿಕಾಸ ಅಕಾಡೆಮಿ ಸಂಚಾಲಕ ಶಿವಶಂಕರ ತರನಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಸಂಗಮೇಶ ಪಾಟಲ ಹಾಲಹಳ್ಳಿ ನಿರೂಪಿಸಿದರು. ಶಿವರಾಜ ವಂದಿಸಿದರು.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.