ಸುವರ್ಣ ಮಹೋತ್ಸವ: 11 ದಿನ ಸಾಂಸ್ಕೃತಿಕ ವೈಭವ


Team Udayavani, Sep 24, 2018, 12:25 PM IST

bid-2.jpg

ಹುಮನಾಬಾದ: ಸಾರ್ವಜನಿಕ ಗಣೇಶ ಉತ್ಸವ ಆಚರಣೆ ತಿಳಿದುಕೊಂಡಷ್ಟು ಸರಳವಲ್ಲ. ಆದರೆ ಹಳೆ ಅಡತ್‌ ಬಜಾರ ಗಣೇಶ ಉತ್ಸವ ಸಮಿತಿ 49ವರ್ಷ ಅತ್ಯಂತ ಯಶಸ್ವಿಯಾಗಿ ಆಚರಿಸಿ, ಈ ಬಾರಿ ಸುವರ್ಣಮಹೋತ್ಸವ ಆಚರಿಸಿದೆ ಎಂದು ವಿವೇಕಾನಂದ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಆರ್‌. ಗಾದಾ ಹೇಳಿದರು.

ಪಟ್ಟಣದ ಹಳೆ ಅಡತ್‌ ಬಜಾರ ಗಣೇಶ ಉತ್ಸವ ಸಮಿತಿಯ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ಸುವರ್ಣ ಮಹೋತ್ಸವ ಪ್ರಯುಕ್ತ 11 ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ, ಬೌದ್ಧಿಕ ಬೆಳವಣಿಗೆಗೆ ಪೂರಕ ಕಾರ್ಯಕ್ರಮ ನಡೆಸಲಾಗಿದ್ದು, ಈ ರೀತಿ ಹಿಂದೆಂದೂ ನಡೆದಿಲ್ಲ. ಭವಿಷ್ಯದಲ್ಲೂ ನಡೆಯುವುದು ಕಷ್ಟಸಾಧ್ಯ ಎಂದರು. 

ಮಾಜಿ ಶಾಸಕ ಸುಭಾಷ ಕಲ್ಲೂರ ಮಾತನಾಡಿ, ಹಣ ಗಳಿಕೆಯೊಂದೇ ಬದುಕಿನ ಮೂಲ ಉದ್ದೇಶ ಎಂದು ಭಾವಿಸಿರುವ ಪ್ರಸ್ತುತ ದಿನಮಾನದಲ್ಲಿ ಸ್ವಕಾರ್ಯದ ಜೊತೆಗೆ ಸ್ವಾಮಿ ಕಾರ್ಯ ಎಂಬಂತೆ, ವ್ಯವಹಾರದೊಂದಿಗೆ ಭಾರತೀಯ ಪರಂಪರೆ ಉಳಿಸಿಕೊಂಡು ಬರುತ್ತಿರುವ ಗಣೇಶ ಸಮಿತಿ ಪದಾಧಿಕಾರಿಗಳ ಕಾರ್ಯ ಪ್ರಶಂಸನೀಯ. 23
ಸದಸ್ಯರು ನೂರಾರು ಒತ್ತಡಗಳ ಮಧ್ಯದಲ್ಲೂ ಅತ್ಯಂತ ಭಕ್ತಿಭಾವದಿಂದ 11 ದಿನಗಳನ್ನು ಇದಕ್ಕಾಗಿ ಮೀಸಲಿಟ್ಟಿದ್ದು ತ್ಯಾಗವೇ ಸರಿ ಎಂದರು.

ಕರ್ನಾಟಕ ಆರ್ಯ ಪ್ರತಿನಿಧಿ ಮಹಾಸಭಾ ರಾಜ್ಯ ಘಟಕ ಅಧ್ಯಕ್ಷ ಸುಭಾಷ ಅಷ್ಠಿಕರ್‌ ಮಾತನಾಡಿ, ಹಳೆ ಅಡತ್‌ ಬಜಾರ ಗಣೇಶ ಸಮಿತಿ ಪದಾಧಿಕಾರಿಗಳು 11ದಿನಗಳ ಕಾಲ ಕಾಟಾಚಾರದ ಗಣೇಶೋತ್ಸವ ಆಚರಿಸದೇ ವೈವಿಧ್ಯಮಯ
ಕಾರ್ಯಕ್ರಮ ಹಮ್ಮಿಕೊಂಡು ಕಲಾಸಕ್ತರಿಗೆ ರಸದೌತಣ ಉಣಬಡಿಸುವ ಮಹತ್ವದ ಕಾರ್ಯ ಮಾಡಿದ್ದಾರೆ ಎಂದು ಬಣ್ಣಿಸಿದರು.

ಬಿಜೆಪಿ ಮುಖಂಡ ಬಸವರಾಜ ಆರ್ಯ, ಪುರಸಭೆ ಮುಖ್ಯಾಧಿಕಾರಿ ಅಶೋಕ ಚನ್ನಕೋಟೆ, ಹಳೆ ಅಡತ್‌ ಗಣೇಶ ಸಮಿತಿ ಉಪಾಧ್ಯಕ್ಷ ಚಂದ್ರಕಾಂತ ಶಂಕರಶಟ್ಟಿ, ಸಮಿತಿ ಪ್ರಧಾನ ಕಾರ್ಯದರ್ಶಿ ದತ್ತಕುಮಾರ ಚಿದ್ರಿ, ಸಹ ಕಾರ್ಯದರ್ಶಿ ನಾಗಭೂಷಣ ವಿಭೂತಿ, ಕೋಶಾಧ್ಯಕ್ಷ ಪ್ರೇಮಕುಮಾರ ಜಾಜಿ ವೇದಿಕೆಯಲ್ಲಿದ್ದರು. ರಾಜಶ್ರೀ ಜಾಜಿ, ಮಹಾನಂದಾ ಮಾಡಗಿ ಪ್ರಾರ್ಥಿಸಿದರು. ಸುಭಾಷ ಭಗೋಜಿ ಸ್ವಾಗತಿಸಿದರು. ಸಾರಿಕಾ ಗಂಗಾ ನಿರೂಪಿಸಿದರು.
ಅಶೋಕ ಡಿ.ಜಾಜಿ ವಂದಿಸಿದರು.

ಇದಕ್ಕೂ ಮುನ್ನ ಸಮಿತಿ ಮಹಿಳಾ ಪದಾಧಿಕಾರಿಗಳಾದ ಲಕ್ಷ್ಮೀ ಡಿ.ಚಿದ್ರಿ, ರೇಖಾ ಆರ್‌.ಸಜ್ಜನಶಟ್ಟಿ, ರೇಣುಕಾ ಎಸ್‌.ಭಗೋಜಿ, ವೀಣಾ ಎನ್‌.ಉದಗೀರೆ ಮೊದಲಾದವರು ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮಕ್ಕೂ
ಮುನ್ನ ದಾಸೋಹ ವ್ಯವಸ್ಥೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಉತ್ಸವ ಯಶಸ್ವಿಗೆ ಕಾರಣಾದ ಪತ್ರಕರ್ತರು, ಪೊಲೀಸ್‌, ಪುರಸಭೆ, ಜೆಸ್ಕಾಂ ಮತ್ತಿತರ ಇಲಾಖೆ ಪ್ರತನಿಧಿಗಳನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.