ಜನಪದರಲ್ಲಿದೆ ಬದ್ಧತೆ-ಮುಗ್ಧತೆ


Team Udayavani, Sep 28, 2018, 11:36 AM IST

bid-2.jpg

ಬೀದರ: ಜನಪದರಲ್ಲಿ ಶುದ್ಧತೆ, ಬದ್ಧತೆ, ಏಕತೆ, ಮುಗ್ಧತೆಯ ನಡೆಗಳು ಅಡಕವಾಗಿವೆ. ಆದರೆ ಆಧುನಿಕ ನಾಗರಿಕತೆಯ ಭರಾಟೆಯಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಗೆ ಮರಳಾಗಿರುವ ಜನರಲ್ಲಿ ಮಾನವೀಯ ಮೌಲ್ಯಗಳು ಕ್ಷೀಣಿಸುತ್ತಿವೆ ಎಂದು ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಶಂಭುಲಿಂಗ ಕಾಮಣ್ಣ ಹೇಳಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ನಡೆದ ಜಾನಪದ ವೈವಿಧ್ಯತೆಗಳು, ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಉತ್ಸವ ಕಾರ್ಯಕ್ರಮದ ಪ್ರಥಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಪದರಲ್ಲಿ ಶುದ್ಧತೆ, ಸ್ವಾತಿಕತೆ, ಪ್ರಾಮಾಣಿಕತೆ, ಯೋಗ್ಯತೆ, ಚಾರಿತ್ರ್ಯವನ್ನು ನೋಡಬಹುದು. ಆದರೆ ಇತ್ತೀಚಿನ ನಾಗರಿಕತೆಯಲ್ಲಿ ಜೀವನ ಮೌಲ್ಯಗಳು ಹಾಳಾಗಿ ಹೋಗಿವೆ ಎಂದರು. 

ಜನಪದ ಒಂದು ವಿಶಿಷ್ಟ ಪದವಾಗಿದೆ. ಪರಿಶಿಷ್ಟ ಜಾತಿ, ಬುಡಕಟ್ಟು, ರೈತರು, ಕೂಲಿ ಕಾರ್ಮಿಕರು, ಶ್ರಮಜೀವಿಗಳು
ಜನಪದ ಮೌಲ್ಯಗಳನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಮೌಲ್ಯಗಳು ಇಲ್ಲದ ಬದುಕು ಎಂದರೆ ಮೂಗು ಇಲ್ಲದ ಮುಖದಂತೆ. ಜೀವನದಲ್ಲಿ ಮೌಲ್ಯಗಳು ಇಲ್ಲದಿದ್ದರೆ ಬದುಕು ಕಹಿಯಾಗಿರುತ್ತದೆ. ಬದುಕು ಸುಂದರವಾಗಬೇಕಾದರೆ ಬದುಕಿನಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ನೀತಿ, ನಿಯಮ, ನಡೆ, ನುಡಿ, ಚಾರಿತ್ರ್ಯ ಉತ್ತಮವಾಗಿದ್ದರೆ, ಬದುಕು ಬಂಗಾರವಾಗುತ್ತದೆ ಎಂದರು. 

ಇಂದಿನ ಸತಿ ಹಾಗೂ ಪತಿಯ ಬದುಕು ಹೇಗೆದೆ ಎಂದರೆ, ಮುಂಜಾನೆ ಮದುವೆ, ಮಧ್ಯಾಹ ಹನಿಮೂನ್‌ ಸಂಜೆ ವಿಚ್ಚೇದನ ಎಂಬಂತಾಗಿದೆ ಎಂದು ಆಧುನಿಕ ದಾಂಪತ್ಯ ಕುರಿತು ವಿವರಿಸಿದರು.  ಡಾ| ಮಹಾದೇವಿ ಮಡಕಿ “ಜನಪದ ಸಂಸ್ಕೃತಿಯಲ್ಲಿ ಮಹಿಳೆ’ ಕುರಿತು ಮಾತನಾಡಿದರು. ಜಾನಪದ ಪರಿಷತ್ತು ಬಸವಕಲ್ಯಾಣ ತಾಲೂಕು ಘಟಕದ ಅಧ್ಯಕ್ಷ ಡಾ| ಬಸವರಾಜ ಸ್ವಾಮಿ “ಜನಪದ ವೈದ್ಯ’ ವಿಷಯ ಮಂಡಿಸಿದರು. ಭಾಲ್ಕಿ ತಾಲೂಕು ಘಟಕದ ಅಧ್ಯಕ್ಷ ಅಶೋಕ ಮೈನಾಳೆ ಆಶಯ ನುಡಿ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪಂಚಾಕ್ಷರಿ ಪುಣ್ಯಶೆಟ್ಟಿ ಮಾತನಾಡಿದರು. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಲಕ್ಷ್ಮೀಬಾಯಿ ಕಮಠಾಣೆ, ವೈಜಿನಾಥ ಕಮಠಾಣೆ ಅವರನ್ನು ಸನ್ಮಾನಿಸಲಾಯಿತು. ಎಂ.ಜಿ. ದೇಶಪಾಂಡೆ, ಪಿ. ಸಂಗಪ್ಪ, ಎಸ್‌.ಬಿ. ಕುಚಬಾಳ, ಡಾ| ಜಗನ್ನಾಥ ಹೆಬ್ಟಾಳೆ, ಮಹಿಳಾ ಘಟಕದ ಅಧ್ಯಕ್ಷೆ ಧನಲಕ್ಷ್ಮೀ ಪಾಟೀಲ, ಮಲ್ಲಮ್ಮ ಸಂತಾಜಿ ಇದ್ದರು.

ಭಾರತ ಸರಕಾರದ ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಕೇಂದ್ರ, ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತು ನವ ದೆಹಲಿ, ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘ, ಕರ್ನಾಟಕ ಸಾಹಿತ್ಯ ಸಂಘ, ಕರ್ನಾಟಕ ಜಾನಪದ ಪರಿಷತ್ತು
ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.