ಶಿಕ್ಷಣ ಕ್ಷೇತ್ರ ಬದಲಾವಣೆಗೆ ಆದ್ಯತೆ: ಖಾಶೆಂಪೂರ


Team Udayavani, Sep 30, 2018, 12:18 PM IST

gul-6.jpg

ಬೀದರ: ದೆಹಲಿಯಲ್ಲಿನ ಸರಕಾರಿ ಶಾಲೆಯೊಂದಕ್ಕೆ ಹೋಗಿದ್ದೆ. ಖಾಸಗಿ ಶಾಲೆಯನ್ನು ಮೀರಿಸುವ ರೀತಿಯಲ್ಲಿ ಅಲ್ಲಿ
ಚಟುವಟಿಕೆಗಳು ನಡೆಯುತ್ತಿವೆ. ಅದೇ ಮಾದರಿಯಲ್ಲಿ ಜಿಲ್ಲೆಯಲ್ಲೂ ಸರಕಾರಿ ಶಾಲೆಗಳನ್ನು ರೂಪಿಸುವ ಆಲೋಚನೆ ಇದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಹೇಳಿದರು.

ಬಗದಲ್‌ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ
ಚಿಗುರು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಶಾಲೆಗಳನ್ನು ಬಲಗೊಳಿಸಲು ಸರಕಾರ ಸಂಕಲ್ಪ ತೊಟ್ಟಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಸರಕಾರಿ ಶಾಲೆಗಳ ಪ್ರಗತಿಯು ಖಾಸಗಿ ಶಾಲೆಗಳನ್ನು ಮೀರಿಸುವಂತಿರಬೇಕು. ಖಾಸಗಿ ಶಾಲೆಗಳ ಮಾದರಿಯಲ್ಲಿ ಶಾಲಾ ಚಟುವಟಿಕೆ, ವಾರ್ಷಿಕೋತ್ಸವದಂತಹ ಕಾರ್ಯಕ್ರಮಗಳಲ್ಲಿ ಪಾಲಕರ ಪಾಲ್ಗೊಳ್ಳುವಿಕೆ ಹೆಚ್ಚಬೇಕು ಎಂದು ಸಲಹೆ ನೀಡಿದರು. ದೆಹಲಿಯಲ್ಲಿನ ಸರ್ಕಾರಿ ಶಾಲೆಗಳಂತೆ ಇಲ್ಲಿನ ಶಿಕ್ಷಕರು ಕೂಡ ಪಾಠಮಾಡಿ ಮಕ್ಕಳ ಉಜ್ವಲ ಭವಿಷ್ಯ ನಿರ್ಮಿಸಬೇಕು ಎಂದರು.

ಚಿಗುರು ಕಾರ್ಯಕ್ರಮದಲ್ಲಿ ಪಾಲಕರು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಸಚಿವರು ಬೇಸರ ವ್ಯಕ್ತಪಡಿಸಿದರು.
ಮಕ್ಕಳಲ್ಲಿರುವ ಕಲಾ ಪ್ರತಿಭೆ ಪ್ರದರ್ಶನ ಪಾಲಕರ ಸಮ್ಮುಖದಲ್ಲಿ ನಡೆಯುವಂತೆ ನೋಡಿಕೊಳ್ಳಿ. ಅದರಿಂದ ಶಾಲೆಯ ಬಗ್ಗೆಯೂ ಪಾಲಕರಲ್ಲಿ ಸದಭಿಪ್ರಾಯ ಮೂಡುತ್ತದೆ. ಶಿಕ್ಷಕರು ಮಕ್ಕಳ ಏಳ್ಗೆಗಾಗಿ ಶ್ರಮಿಸುತ್ತಿರುವುದು ಮನವರಿಕೆಯಾಗುತ್ತದೆ ಎಂದು ಸಲಹೆ ನೀಡಿದರು.

ಶಿಕ್ಷಣದಿಂದಲೇ ಸರ್ವಾಂಗೀಣ ವಿಕಾಸ. ಈ ಹಿನ್ನೆಲೆಯಲ್ಲಿಯೇ ಶಿಕ್ಷಣಕ್ಕೆ ಪ್ರಥಮಾದ್ಯತೆ ನೀಡಲಾಗುತ್ತಿದೆ. ಸರಕಾರಿ ಶಾಲೆಗಳಲ್ಲಿನ ಕುಂದುಕೊರತೆ ನಿವಾರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಭರವಸೆ ನೀಡಿದರು. ನಾನು 2004ರಲ್ಲಿ ಶಾಸಕನಾಗಿ ಆಯ್ಕೆಯಾದಾಗಲೂ ಶೈಕ್ಷಣಿಕ ಬೆಳವಣಿಗೆಗೆ ಆಸಕ್ತಿ ವಹಿಸಿದ್ದೆ. 2008ರಲ್ಲಿ ಮರು ಆಯ್ಕೆಯಾದಾಗಲೂ ಶಾಲೆಗಳಿಗೆ ಭೇಟಿ ಮಾಡಿದ್ದೆ. ದೇಶದ ಭವಿಷ್ಯ ರೂಪುಗೊಳ್ಳುವುದೇ ಶಾಲಾ ತರಗತಿ ಕೋಣೆಗಳಲ್ಲಿ ಎನ್ನುವುದು ತಮ್ಮ ಖಚಿತ ಅಭಿಪ್ರಾಯವಾಗಿದೆ ಎಂದರು.
 
ನಮ್ಮ ಮಕ್ಕಳು ಜನ್ಮತಃ ಜಾಣರು. ಆದರೆ, ನಂತರದ ಅವಧಿಯಲ್ಲಿ ಸ್ವಲ್ಪ ಹಿಂದೆ ಬೀಳುತ್ತಿದ್ದಾರೆ. ಮನೆಯಲ್ಲಿನ ವಾತಾವರಣ, ಶಾಲಾ ವಾತಾವರಣ, ಶಾಲೆಯಲ್ಲಿನ ಕಲಿಕೆ ಮತ್ತಿತರ ಕಾರಣಗಳಿಂದಾಗಿ ಮಕ್ಕಳು ಹಿಂದೆ ಬೀಳುವಂತಾಗಿದೆ. ಮಕ್ಕಳಲ್ಲಿನ ಜಾಣ್ಮೆಯನ್ನು, ಪ್ರತಿಭೆಯನ್ನು ಗುರುತಿಸುವ ಕೆಲಸ ಮನೆಯಲ್ಲಿ, ಶಾಲೆಯಲ್ಲಿ ಪರಿಣಾಮಕಾರಿಯಾಗಿ ನಡೆಯಬೇಕು. ಪ್ರೋತ್ಸಾಹ ಹಾಗೂ ಮಾರ್ಗದರ್ಶನವೂ ಸಿಗಬೇಕು. ಅಂದಾಗಲೇ ಮಕ್ಕಳು ಶ್ರೇಷ್ಠ ಸಾಧಕರಾಗಿ ಹೊರಹೊಮ್ಮಬಲ್ಲರು ಎಂದು ಹೇಳಿದರು

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಸದಸ್ಯ ಅಫೂಜಖಾನ್‌, ತಾಪಂ ಅಧ್ಯಕ್ಷ ವಿಜಯಕುಮಾರ ರಾಮುಲು, ಸದಸ್ಯೆ ಲಲಿತಾಬಾಯಿ ರಾಮಚಂದ್ರ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಧೇನುಸಿಂಗ್‌ ಚವ್ಹಾಣ, ಜಿಲ್ಲಾ ಸಮನ್ವಯಾಧಿಕಾರಿ ಶರಣಪ್ಪ ಬಿರಾದಾರ್‌, ಮೊರಾರ್ಜಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೆಡೆ, ದೇವಿದಾಸ
ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.