ಶಿಕ್ಷಕರೇ ಉತ್ತಮ ಸಮಾಜ ನಿರ್ಮಾಪಕರು
Team Udayavani, Sep 30, 2018, 1:32 PM IST
ಔರಾದ: ಅಕ್ಷರ ಕ್ರಾಂತಿಯ ಮೂಲಕ ಯುವ ಮನಸ್ಸುಗಳಿಗೆ ಪ್ರೇರಣೆ ನೀಡಿ, ಶಿಕ್ಷಕರು ಉತ್ತಮ ಸಮಾಜದ ನಿರ್ಮಾಪಕರಾಗಿದ್ದಾರೆ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು. ಪಟ್ಟಣದ ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಡಿ ತಾಲೂಕಿನಲ್ಲಿ ಪ್ರತಿಯೊಬ್ಬ ಶಿಕ್ಷಕರು ಡಾ|ಸರ್ವಪಲ್ಲಿ ರಾಧಾಕೃಷ್ಣನ್, ಅಬ್ದುಲ್ ಕಲಾಂ ಅವರಂತಹ ಮಹಾನ್ ವ್ಯಕ್ತಿಗಳ ಆದರ್ಶ ಅನುಕರಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಒಡಿ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ನಿರಾಕರಿಸಿದ್ದರು. ಆದರೂ ಎಂಥದೇ ಪರಿಸ್ಥಿತಿಯಲ್ಲೂ ಶಿಕ್ಷಕರ ದಿನಾಚರಣೆ ಮಾಡೇ ಮಾಡುತ್ತೇನೆ. ಅದಕ್ಕೆ ಎಷ್ಟೇ ಅಡ್ಡಿ ಆತಂಕಗಳು ಬಂದರೂ ಸಮರ್ಥವಾಗಿ ನಿಭಾಯಿಸುವ ಶಕ್ತಿಯನ್ನು ಅಮರೇಶ್ವರ ನಮಗೆ ನೀಡಿದ್ದಾನೆ ಎಂದು ಹೇಳಿದರು.
ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದೇವರು ಮಾತನಾಡಿ, ಶಿಕ್ಷಕರ ಬಗ್ಗೆ ನಾಡಿನಲ್ಲಿಯೇ ಅಪಾರ ಗೌರವ, ಕಾಳಜಿ ಇರುವ ಏಕೈಕ ಶಾಸಕ ಪ್ರಭು ಚವ್ಹಾಣ ಅವರಾಗಿದ್ದಾರೆ. ಹಿಗಾಗಿಯೇ 11 ವರ್ಷಗಳಿಂದ ತಮ್ಮ ಕ್ಷೇತ್ರದ ಪ್ರತಿಯೊಬ್ಬ ಶಿಕ್ಷಕರನ್ನು ಸನ್ಮಾನಿಸಿ ಅವರ ಆತ್ಮಬಲ ಹೆಚ್ಚಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಣ್ಣಿಸಿದರು.
ಇಂದಿನ ಶಿಕ್ಷಕರಲ್ಲಿ ಆದರ್ಶ ಶಿಕ್ಷಕರ ಸಂಖ್ಯೆ ಕಡಿಮೆಯಾಗುತ್ತಿದೆ. ತಾಯಿ ತನ್ನ ಮಗುವಿಗೆ ಜನ್ಮ ನೀಡಿ ಭೂಮಂಡಲದ ಪರಿಚಯ ಮಾಡುತ್ತಾಳೆ. ಶಿಕ್ಷಕ ಮಗುವಿಗೆ ಅಕ್ಷರ ಜ್ಞಾನ ನೀಡಿ ಸಮಾಜದ ಪರಿಚರ ಮಾಡುತ್ತಾನೆ. ತಾಯಿ ಹಾಗೂ ಶಿಕ್ಷಕ ಮಗುವಿನ ಎರಡು ಕಣ್ಣುಗಳು ಇದ್ದಂತೆ ಎಂದು ಹೇಳಿದರು.
ಶಿಕ್ಷಕರ ದಿನಾಚರಣೆ ನಿಮಿತ್ತ ತಾಲೂಕಿನ ಐದು ಸಾವಿರ ಶಿಕ್ಷಕರನ್ನು ಶಾಸಕ ಪ್ರಭು ಚವ್ಹಾಣ ವಿಶೇಷವಾಗಿ ಸನ್ಮಾನಿಸಿದರು. ಪಪಂ ಅಧ್ಯಕ್ಷ ಸುನೀಲಕುಮಾರ ದೇಶಮುಖ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ ಮೇತ್ರೆ, ಕಸಾಪ ತಾಲೂಕು ಅಧ್ಯಕ್ಷ ಜಗನ್ನಾಥ ಮೂಲಗೆ, ಜಾನಪದ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಸಂಜುಕುಮಾರ ಜುಮ್ಮಾ, ಬಸವರಾಜ ಶೆಟಕಾರ, ಜಿಪಂ ಸದಸ್ಯ ಮಾರುತಿ ಚವ್ಹಾಣ ಬಿಒ, ಬಿಆರ್ಸಿ ಸೇರಿದಂತೆ ಶಿಕ್ಷಣ
ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ