ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ


Team Udayavani, Oct 7, 2018, 3:00 PM IST

bid-1.jpg

ಭಾಲ್ಕಿ: ಅಪರಾಧ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಸಂಘ ಸಂಸ್ಥೆ ಹಾಗೂ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ ಎಂದು ಬೀದರ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಹೇಳಿದರು.

ಪಟ್ಟಣದ ಚನ್ನಬಸವಾಶ್ರಮ ಪರಿಸರದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಪೊಲೀಸ್‌ ಇಲಾಖೆ ಸಹಯೋಗದಲ್ಲಿ ನಡೆದ ಸಾರ್ವಜನಿಕ ಸುರಕ್ಷಾ ಕ್ರಮ ಕುರಿತು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಹೆಚ್ಚುತ್ತಿರುವ ಅಪರಾಧ, ಅತ್ಯಾಚಾರ, ಕೊಲೆ, ಸುಲಿಗೆ, ಕಳ್ಳತನದಂತಹ ಪ್ರಕರಣಗಳಿಗೆ ತಡೆ ಹಾಕಬೇಕಿದೆ. ಈ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಸಾಕಷ್ಟು ಕ್ರಮ ಜರುಗಿಸುತ್ತಿದೆ. ಇದಕ್ಕೆ ಸಾರ್ವಜನಿಕರು ಕೈ ಜೊಡಿಸಬೇಕಿದೆ.

100ರಿಂದ 500ರ ವರೆಗೆ ಜನ ಸೇರುವ ಧಾರ್ಮಿಕ ಕೇಂದ್ರಗಳು, ಶಾಲಾ-ಕಾಲೇಜು, ಅಂಗಡಿ ಮುಗ್ಗಟ್ಟು, ಬ್ಯಾಂಕ್‌, ಕಚೇರಿ, ಆಸ್ಪತ್ರೆ, ಮೆಡಿಕಲ್‌, ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ಚಿತ್ರಮಂದಿರ, ಮಾರುಕಟ್ಟೆ ಪ್ರದೇಶ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಕಡ್ಡಾಯವಾಗಿ ಗುಣಮಟ್ಟದ ಸಿಸಿ ಕ್ಯಾಮರಾ ಅಳವಡಿಸಬೇಕು. ಎಟಿಎಂ ಸೇರಿದಂತೆ ಪ್ರಮುಖ
ಮಾರುಕಟ್ಟೆ ಪ್ರದೇಶದಲ್ಲಿ ಸ್ಥಳೀಯ ವ್ಯಾಪಾರಸ್ಥರು ರಕ್ಷಣಾ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಬೇಕು. ಇದರಿಂದ ಹಂತಕರಿಗೆ ಕಡಿವಾಣ ಹಾಕಲು ಸಹಕಾರಿಯಾಗುತ್ತದೆ ಎಂದು ವಿವರಿಸಿದರು.

ವ್ಯಾಪಾರಸ್ಥರು, ಪ್ರಮುಖರು, ಸಿಸಿ ಕ್ಯಾಮರಾವನ್ನು ಕೇವಲ ಕಾಟಾಚಾರಕ್ಕೆ ಎಂಬಂತೆ ಅಳವಡಿಸಬಾರದು. ಅಂಗಡಿ ಮುಂಭಾಗದ ರಸ್ತೆ, ಅಂಗಡಿ ಒಳಗೆ ಗುಣಮಟ್ಟದಿಂದ ಕೂಡಿರುವ ಸಿಸಿ ಕ್ಯಾಮರಾಗಳಲ್ಲಿ ಕನಿಷ್ಟ 30 ದಿನದ ವರೆಗೆ ರಿರ್ಕಾಡಿಂಗ್‌ ಸಾಮಾರ್ಥ್ಯ ಇರುವಂಥ ಸಿಸಿ ಕ್ಯಾಮರಾ ಸಂಬಂಧ ಪಟ್ಟವರು ಜೋಡಣೆ ಮಾಡಿಕೊಳ್ಳಬೇಕು ಎಂದರು. ಪೊಲೀಸ್‌ ಇಲಾಖೆಯ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಇಲ್ಲದಿದ್ದರೆ 2ರಿಂದ 10 ಸಾವಿರದ ವರೆಗೆ ದಂಡ ಬೀಳಲಿದೆ. ಅದನ್ನು ಮೀರಿದರೆ ಸಂಬಂಧಿತ ಸಂಸ್ಥೆ, ಅಂಗಡಿ ಪರವಾನಗಿ ರದ್ದು ಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಡಿವೈಎಸ್ಪಿ ವೆಂಕನಗೌಡ ಪಾಟೀಲ, ನಗರ ಪೊಲೀಸ್‌ ಠಾಣೆಯ ಸಿಪಿಐ ಬಿ.ಅಮರೇಶ್‌, ಗ್ರಾಮೀಣ ಪೊಲೀಸ್‌ ಠಾಣೆಯ ಸಿಪಿಐ ಲಖನ ಸೇರಿದಂತೆ ನಾನಾ ಸಂಘ, ಸಂಸ್ಥೆಯ ಮುಖಂಡರು, ಪ್ರಮುಖರು, ವ್ಯಾಪಾರಸ್ಥರು, ತಾಲೂಕು ಅನುಷ್ಠಾನ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.