ಪಡಿತರ ಅಕ್ರಮ: ಕಾನೂನು ಕ್ರಮಕ್ಕೆ ಮನವಿ


Team Udayavani, Oct 10, 2018, 11:56 AM IST

bid-1.jpg

ಬೀದರ: ಬಡವರ ಹಾಗೂ ವಿದ್ಯಾರ್ಥಿಗಳ ಹೊಟ್ಟೆ ತುಂಬಬೇಕಾದ ಅಕ್ಕಿ, ಗೋಧಿ,  ಹಾಲಿನ ಪುಡಿ ಅಕ್ರಮ ಕಳ್ಳಸಾಗಣಿಕೆದಾರರ ಪಾಲಾಗುತ್ತಿದ್ದು, ದಂಧೆಯಲ್ಲಿ ತೊಡಗಿದವರ ವಿರುದ್ಧ ಮತ್ತು ಇದಕ್ಕೆ ಕುಮ್ಮಕ್ಕು ನೀಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಂಸದ ಭಗವಂತ ಖೂಬಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಒಂದು ವಾರದಿಂದ ಜಿಲ್ಲಾದ್ಯಂತ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಅಕ್ಕಿ, ಗೋಧಿ, ಹಾಲಿನ ಪುಡಿ ಪತ್ತೆಹಚ್ಚುವ ಕೆಲಸ ಮಾಡಿದ್ದು, ಅಧಿಕಾರಿಗಳ ಕಾರ್ಯಕ್ಕೆ ಬಿಜೆಪಿ ಅಭಿನಂದನೆ ಸಲ್ಲಿಸುತ್ತದೆ. ಬಡವರಿಗಾಗಿ ಕೇಂದ್ರ ಸರ್ಕಾರ ನಿಡುತ್ತಿರುವ ಅಕ್ಕಿ, ಗೋಧಿ ಮತ್ತು ಪೌಷ್ಠಿಕ ಆಹಾರ ಕಳ್ಳ ಸಂತೆಯಲ್ಲಿ ಪತ್ತೆಯಾಗುತ್ತಿವೆ. ಜಿಲ್ಲೆಯಲ್ಲಿ ಸಂಗ್ರಹಿಸಿಟ್ಟ ದಾಸ್ತಾನು ಪತ್ತೆಯಾಗುತ್ತಿರುವುದನ್ನು ನೋಡಿದರೆ ದೊಡ್ಡ ಜಾಲವೆ ಇರುವ ಶಂಕೆ ಇದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಿ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಈ ದಂಧೆ ನಡೆಯುತ್ತಿರುವ ಬಗ್ಗೆ ಮಾಹಿತಿ ಇದ್ದು, ಜಿಲ್ಲೆಯ ಪ್ರಭಾವಿ ರಾಜಕಾರಣಿಗಳ ಬೆಂಬಲ ಇರುವುದರಿಂದಲೆ ಕೇವಲ ಲಾರಿ ಚಾಲಕರು, ಕ್ಲೀನರ್‌ಗಳ ಮೇಲೆ ಪ್ರಕರಣ ದಾಖಲಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ದಾಳಿ ಸಂದರ್ಭದಲ್ಲಿ ಪತ್ತೆಯಾದ ಡೈರಿಯ ಮಾಹಿತಿ ಬಹಿರಂಗ ಮಾಡಬೇಕು. ಈ ಅಕ್ರಮ ದಂಧೆಯಲ್ಲಿ ಭಾಗಿಯಾದ ಪ್ರಮುಖ ಆರೋಪಿಗಳು ಹಾಗೂ ಇದಕ್ಕೆ ಸಹಕಾರ ನೀಡಿದವರ ವಿರುದ್ಧ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸದರ ಮನವಿಗೆ ಸ್ಪಂದಿಸಿದ ಎಸ್‌ಪಿ ಟಿ.ಶ್ರೀಧರ್‌, ಅಕ್ರಮದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಯಾವುದೇ ಮುಲಾಜು ಇಲ್ಲದೆ ಪ್ರಕರಣದ ತನಿಖೆ ನಡೆಸಿ, ಮುಖ್ಯ ಆರೋಪಿಗಳ ವಿರುದ್ಧ ಕ್ರಮ ಕಠಿಣ ಕ್ರಮ ಜರುಗಿರುವುದಾಗಿ ತಿಳಿಸಿದ್ದಾರೆ. 

ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್‌ ಸದಸ್ಯ ರಘುನಾಥ ಮಲ್ಕಾಪುರೆ, ಮಾಜಿ ಶಾಸಕ ಸುಭಾಷ ಕಲ್ಲೂರ್‌, ಡಿ.ಕೆ. ಸಿದ್ರಾಮ, ಬಾಬುರಾವ್‌ ಕಾರಬಾರಿ, ಈಶ್ವರಸಿಂಗ್‌ ಠಾಕೂರ್‌, ಸೋಮನಾಥ ಪಾಟೀಲ, ಬಾಬುವಾಲಿ ಇದ್ದರು.

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.