ಭಾಲ್ಕಿಯೊಂದಿಗಿತ್ತು ಅವಿನಾಭಾವ ಸಂಬಂಧ


Team Udayavani, Oct 21, 2018, 12:44 PM IST

bid-1.jpg

ಭಾಲ್ಕಿ: ಗದಗ ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ನಿಧನರಾದ ಹಿನ್ನೆಲೆಯಲ್ಲಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ಶನಿವಾರ ಹಿರೇಮಠ ಸಂಸ್ಥಾನದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷರಾದ ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಗುದಗಿನ ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಭಾಲ್ಕಿ ಮಠ ಹಾಗೂ ಬಸವಕಲ್ಯಾಣ ಅನುಭವ ಮಂಟಪದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಇವರು ಬಸವತತ್ವ ನಿಷ್ಠರು. ವಚನ ಸಾಹಿತ್ಯವನ್ನು ನಾಡಿನ ಮೂಲೆ ಮೂಲೆಗೆ ಮುಟ್ಟಿಸುವಲ್ಲಿ ಗಣನೀಯ ಸೇವೆ ಸಲ್ಲಿಸಿದವರೂ ಆಗಿದ್ದರು. ಅವರ ನಿಧನ ನಮಗೆ ತೀವ್ರ ಅಘಾತವನ್ನುಂಟು ಮಾಡಿದೆ ಎಂದರು.

ಪೂಜ್ಯರು ಬಸವತತ್ವ ಆಚರಣೆ ಮತ್ತು ಶರಣ ಪರಂಪರೆಯ ಮಠಾಧಿಧೀಶರಲ್ಲಿ ಅಗ್ರಗಣ್ಯರಾಗಿದ್ದರು. ಇವರು ನಾಡಿನ ಮೂಲೆ ಮೂಲೆಗೆ ಸಂಚರಿಸಿ ಶರಣ ತತ್ವ ಪ್ರಸಾರ ಮಾಡಿದ್ದಾರೆ. ಬಸವಾದಿ ಶರಣರ ಸದಾಶಯದಂತೆ ಸಮಾಜದ ಎಲ್ಲ ವರ್ಗದ ಜನರನ್ನು ತಮ್ಮವರೆಂದು ಭಾವಿಸಿ ಅಪ್ಪಿಕೊಂಡು ಅವರಿಗೆ ತಮ್ಮ ಬೋಧನೆ ಮೂಲಕ ಉತ್ತಮ ಸಂಸ್ಕಾರ ನೀಡಿ ಸುಂದರ, ಪ್ರಜ್ಞಾವಂತ ಸಮಾಜ ಕಟ್ಟುವಲ್ಲಿ ಅಮೋಘ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ನಾವೆಲ್ಲರೂ ಬಡವರಾಗಿದ್ದೇವೆ ಎಂದು ಹೇಳಿದರು.

ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಪೂಜ್ಯರು ಭಾಲ್ಕಿ ಮಠದೊಂದಿಗೆ ಇಟ್ಟುಕೊಂಡಿರುವ ಕಾಳಜಿ ಶಬ್ದದಿಂದ ವರ್ಣಿಸಲು ಸಾಧ್ಯವಿಲ್ಲ. ಅವರು ನಮ್ಮೆಲ್ಲರಿಗೂ ಗುರುವಾಗಿ, ತಂದೆ ತಾಯಿಯಾಗಿ, ಬಂಧು ಬಳಗವಾಗಿ ನಮ್ಮೊಂದಿಗೆ ಬೆರೆತಿದ್ದರು. ಇಂದು ಅವರ ನಿಧನ ನಮ್ಮೆಲ್ಲರಿಗೂ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು. 

ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳಾದ ಜೈರಾಜ ಕೊಳ್ಳಾ, ಸಂಗಮೇಶ ಭೂರೆ, ಸಂತೋಷ ಬಿ.ಜಿ.ಪಾಟೀಲ, ಪಾರ್ವತಿ ಧುಮ್ಮನಸೂರೆ, ಮಲ್ಲಿಕಾರ್ಜುನ ಮರಕಲೆ, ಶಿವಕುಮಾರ, ಮಲ್ಲಮ್ಮಾ ನಾಗನಕೇರೆ, ಪ್ರೊ|ಚಂದ್ರಕಾಂತ ಬಿರಾದಾರ, ಜಯರಾಜ ವೈಜಿನಾಥ ಇದ್ದರು.

ಈಶ್ವರ ಖಂಡ್ರೆ-ಭೀಮಣ್ಣ ಖಂಡ್ರೆ ಸಂತಾಪ 
ಭಾಲ್ಕಿ: ಗದುಗಿನ ತೋಂಟದಾರ್ಯ ಮಠದ ಶ್ರೀ ಜಗದ್ಗುರ ಸಿದ್ದಲಿಂಗ ಮಹಾಸ್ವಾಮಿಗಳ ನಿಧನಕ್ಕೆ ಕೆಪಿಸಿಸಿ ಕಾಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಅಖೀಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

ಗದುಗಿನ ತೋಂಟದಾರ್ಯ ಸಂಸ್ಥಾನದ ಜಗದ್ಗುರು ಶ್ರೀ ಸಿದ್ಧಲಿಂಗಮಹಾ ಸ್ವಾಮಿಗಳು ನಮಗೆ ಸದಾಕಾಲ ಪೂಜ್ಯನೀಯರು, ಮಾರ್ಗದರ್ಶಕರು, ಬಸವತತ್ವ ನಿಷ್ಠರು. ವಚನ ಸಾಹಿತ್ಯವನ್ನು ನಾಡಿನ ಮೂಲೆ ಮೂಲೆಗೆ ಮುಟ್ಟಿಸುವಲ್ಲಿ ಗಣನೀಯ ಸೇವೆ ಸಲ್ಲಿಸಿದ ನಾಡಿನ ಹೆಸರಾಂತ ಮಠಾಧಿಧೀಶರಲ್ಲಿ ಒಬ್ಬರಾಗಿದ್ದರು. ಅವರ ನಿಧನ ವಿಷಯ ನಮಗೆ ಅಘಾತವನ್ನುಂಟು ಮಾಡಿದೆ. ಜಗದ್ಗುರು ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ನಮ್ಮ ಕುಟುಂಬದ ಜೊತೆ ಅವಿನಾಭಾವ ಸಂಬಂಧ ಹೊಂದಿದವರಾಗಿದ್ದರು. ಪೂಜ್ಯರು ಬೀದರ, ಕಲಬುರಗಿ ಹಾಗೂ ಈ ಭಾಗದಲ್ಲಿ ವಿಶೇಷವಾಗಿ ಭಾಲ್ಕಿಯ ಹಿರೇಮಠ ಸಂಸ್ಥಾನ, ಬಸವಕಲ್ಯಾಣದ ಅನುಭವ ಮಂಟಪದ ಕಾರ್ಯಕ್ರಮಕ್ಕೆ ಸದಾಕಾಲ ಬಂದು ನಮಗೆ ಮಾರ್ಗದರ್ಶನ ಮಾಡಿದವರಾಗಿದ್ದಾರೆ. ಇಂಥ ಪೂಜ್ಯರ ಅಗಲಿಕೆ ನಮಗೆ ಅಪಾರ ನೋವನ್ನುಂಟು ಮಾಡಿದೆ.

ಬಸವತತ್ವ ಆಚರಾಣೆ ಮತ್ತು ಶರಣ ಪರಂಪರೆಯ ಮಠಾಧೀಶರಲ್ಲಿ ಅಗ್ರಗಣ್ಯರಾಗಿದ್ದರು. ಅವರು ಅಪೂರ್ವ ಜ್ಞಾನಿ, ಅಪ್ರತಿಮ ವಾಗ್ಮಿಗಳಾಗಿರುವ ಅವರು ನಾಡಿನ ಮೂಲೆ ಮೂಲೆಗೆ ಸಂಚರಿಸಿ ಶರಣ ತತ್ವ ಪ್ರಸಾರ ಮಾಡಿದ್ದಾರೆ. ಬಸವಾದಿ ಶರಣರ ಸಮಾನತೆ ತತ್ವ, ಜ್ಯಾತ್ಯತೀಯ ಮೌಲ್ಯ ಮೈಗೂಡಿಸಿ ಕೊಂಡವರಾಗಿದ್ದರು. ಪೂಜ್ಯರು ರಾಷ್ಟ್ರೀಯ ಮಟ್ಟದ ಸೌಹಾರ್ದ ಪ್ರಶಸ್ತಿಯನ್ನು ಕೂಡ ಪಡೆದಿರುವುದು ಸ್ಮರಣೀಯವಾಗಿದೆ ಎಂದು ತಿಳಿಸಿದ್ದಾರೆ.

ಪೂಜ್ಯರು ತಮ್ಮ ಶ್ರೀ ಮಠದಿಂದ ಬಸವಾದಿ ಶರಣರ, ಅನೇಕ ಜನ ಸಂಗೀತ ಕಲಾವಿದರ, ಸಾಹಿತಿಗಳ, ಹಿರಿಯರ ಜೀವನ ಚರಿತ್ರೆ ಆಧರಿಸಿದ ಕೃತಿಗಳನ್ನು ಪ್ರಕಟಿಸಿ ಸಾಹಿತ್ಯ ಕ್ಷೇತ್ರಶ್ರೀಮಂತ ಗೊಳಿಸಿ, ಶರಣ ತತ್ವಕ್ಕೆ ಬಹುದೊಡ್ಡ ಕೊಡುಗೆ ನೀಡಿರುವುದನ್ನು ಮರೆಯುವಂತಿಲ್ಲ. ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ಪೂಜ್ಯರು ಆ ಭಾಗದ ರೈತರಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದರು. ಪೂಜ್ಯರ ನಿಧನದಿಂದಾಗಿ ಕರ್ನಾಟಕ ರಾಜ್ಯ ಅನಘರತ್ನವೊಂದನ್ನು ಕಳೆದುಕೊಂಡಂತಾಗಿದೆ. ಭಕ್ತ ಗಣಕ್ಕೆ ಅವರ ಅಗಲುವಿಕೆ ದುಃಖ ತಡೆದು ಕೊಳ್ಳುವ ಶಕ್ತಿ ಕರುಣಿಸಲಿ. ಜಗದ್ಗುರು ಶ್ರೀ ಸಿದ್ಧಲಿಂಗ ಮಹಾ ಸ್ವಾಮಿಗಳ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಎಂದು ಭಕ್ತಿಯಿಂದ ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.